ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ ಸೆ.15 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನ್ಯಾಯವಾದಿ ವೃತ್ತಿ ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ ಕಂದುರೋಗದ ವಿರುದ್ಧ ಜಾನುವಾರುಗಳಿಗೆ ಲಸಿಕೆ ಅಭಿಯಾನ

ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಸೆ. 8: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಸೆ. 10 ರಂದು ಬೆಳಿಗ್ಗೆ 10 ರಿಂದ ಸಂಜೆ 6  ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ, ಸೆ. 8: ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್‍ನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಶಿವಮೊಗ್ಗ, ಸೆ. 8:  2023-24 ನೇ ಸಾಲಿನಲ್ಲಿ  ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲರಿಗೆ ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಕಾನೂನು ಪದವೀಧರ ಅಭ್ಯರ್ಥಿಗಳಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ, ಸೆ. 8:  ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ 25 ರವರೆಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತಿದೆ. 

ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ Read More

‘ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತಾ?’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ಸೆ. 7: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು

‘ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತಾ?’ : ಸಿಎಂ ಸಿದ್ದರಾಮಯ್ಯ Read More
ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ!

ಬೆಂಗಳೂರು, ಸೆ. 7: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ! Read More
ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ, ಸೆ. 7: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 27 ನೇ ವಾರ್ಡ್ ಮಿಳಘಟ್ಟದ ಕೆ.ಎಸ್.ಆರ್.ಟಿ.ಸಿ ಡಿಪೋ ಸಮೀಪ ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂತೆ ಮಾರುಕಟ್ಟೆ ಕಟ್ಟಡವು ಪಾಳು ಬೀಳಲಾರಂಭಿಸಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಲಾರಂಭಿಸಿದೆ.

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ? Read More
ಶಿವಮೊಗ್ಗ : ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಉರುಳಿದರೂ ವಾಹನಗಳ ಸಂಚಾರಕ್ಕೆ ಮುಕ್ತವಾಗದ ಸೇತುವೆ!

ಶಿವಮೊಗ್ಗ : ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಉರುಳಿದರೂ ವಾಹನಗಳ ಸಂಚಾರಕ್ಕೆ ಮುಕ್ತವಾಗದ ಸೇತುವೆ!

ಶಿವಮೊಗ್ಗ, ಸೆ. 9: ಶಿವಮೊಗ್ಗದ ಸಹ್ಯಾದ್ರಿ ನಗರ ಬಡಾವಣೆ ಸಮೀಪ ಹಾದು ಹೋಗಿರುವ ರಾಜ್ಯ ಹೆದ್ದಾರಿಗೆ ನಿರ್ಮಿಸಲಾಗುತ್ತಿದ್ದ ಸೇತುವೆ ಕಾಮಗಾರಿ ಪೂರ್ಣಗೊಂಡು ಸುಮಾರು ಎರಡು ತಿಂಗಳಾಗುತ್ತಿದೆ. ಆದರೆ ಇಲ್ಲಿಯವರೆಗೂ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

ಶಿವಮೊಗ್ಗ : ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಉರುಳಿದರೂ ವಾಹನಗಳ ಸಂಚಾರಕ್ಕೆ ಮುಕ್ತವಾಗದ ಸೇತುವೆ! Read More

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಶ್ರೀಕೃಷ್ಣ ಜನಿಸಿದ ದಿನವನ್ನು ಕೃಷ್ಣ ಜನ್ಮಾಷ್ಠಮಿಯಾಗಿ ಆಚರಿಸಲಾಗುತ್ತಿದೆ. ಬುಧವಾರ ನಾಡಿನಾದ್ಯಂತ ಕೃಷ್ಣ ಜನ್ಮಾಷ್ಠಮಿ ಹಬ್ಬವನ್ನು ಸಡಗರ-ಸಂಭ್ರಮ, ಭಕ್ತಿಭಾವದಿಂದ ಆಚರಿಸಲಾಯಿತು. ಕೃಷ್ಣ ಮಂದಿರಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು.

ಶ್ರೀಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ಕೆಲ ಪೋಷಕರು ತಮ್ಮ ಪುಟಾಣಿ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಡಿಸಿ ಸಂಭ್ರಮಿಸಿದರು.

ಹಲವು ಸಂಘಸಂಸ್ಥೆಗಳು ಶ್ರೀಕೃಷ್ಣ ವೇಷಭೂಷಣ ಸ್ಪರ್ಧೆ ಆಯೋಜಿಸಿದ್ದವು. ಆಕರ್ಷಕ ವೇಷಭೂಷಣ ಧರಿಸಿದ ಮಕ್ಕಳಿಗೆ ಬಹುಮಾನ ವಿತರಿಸಿದವು.

ಹಲವೆಡೆ ವಿವಿಧ ಸಾಂಪ್ರದಾಯಿಕ ಆಟೋಟ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು. ಶ್ರೀಕೃಷ್ಣ ಜನ್ಮಾಷ್ಠಮಿಗೆ ಗಣ್ಯರು ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಶುಭ ಹಾರೈಸಿದ್ದಾರೆ.

ಫಸ್ಟ್ ಸ್ಟೆಪ್ ಪ್ರೀ ಸ್ಕೂಲ್ ನಲ್ಲಿ ಆಚರಣೆ

ಶಿವಮೊಗ್ಗದ ಕುವೆಂಪು ನಗರದಲ್ಲಿರುವ ಫಸ್ಟ್ ಸ್ಟೆಪ್ ಪ್ರೀಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಸಂಭ್ರಮ ಕಳೆಗಟ್ಟಿತ್ತು. ಶಾಲೆಯ ಪುಟಾಣಿಗಳು ಶ್ರೀ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಟ್ಟು ಕಂಗೊಳಿಸಿದರು.

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ Read More
ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ!

ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ!

ಶಿವಮೊಗ್ಗ, ಸೆ. 6: ಶಿವಮೊಗ್ಗ ತಾಲೂಕಿನ ಗೆಜ್ಜೇನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದ ಜಮೀನುಗಳ ಬಳಿ ಇತ್ತೀಚೆಗೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹೆಣ್ಣು ಚಿರತೆಯೊಂದು ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಬಿದ್ದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಶಿವಮೊಗ್ಗ : ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ! Read More
ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ - ಕೊನೆ ಹಂತದ ಕಾಮಗಾರಿಗಳು ವಿಳಂಬ!

ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ – ಕೊನೆ ಹಂತದ ಕಾಮಗಾರಿಗಳು ವಿಳಂಬ!

ಶಿವಮೊಗ್ಗ, ಸೆ. 5: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಕಳೆದ ಎರಡೂವರೆ ವರ್ಷಗಳ ಹಿಂದೆ ಶಿವಮೊಗ್ಗ ನಗರದ ಕಾಶೀಪುರ ರೈಲ್ವೆ ಗೇಟ್ ಬಳಿ ನಿರ್ಮಿಸಲಾಗುತ್ತಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಕಳೆದ ಕೆಲ ದಿನಗಳಿಂದ ಫ್ಲೈ ಓವರ್ ಮೇಲೆ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶಿವಮೊಗ್ಗ : ಕಾಶೀಪುರ ಫ್ಲೈ ಓವರ್ ನಲ್ಲಿ ವಾಹನಗಳ ಸಂಚಾರ ಆರಂಭ – ಕೊನೆ ಹಂತದ ಕಾಮಗಾರಿಗಳು ವಿಳಂಬ! Read More
ಫೆಬ್ರುವರಿ ಅಂತ್ಯದ ವೇಳೆಗೆ ಬಂಡವಾಳ ವೆಚ್ಚಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಫೆಬ್ರುವರಿ ಅಂತ್ಯದ ವೇಳೆಗೆ ಅನುದಾನ ಬಳಕೆಯಾಗಬೇಕು : ಅಧಿಕಾರಿಗಳಿಗೆ ಗಡುವು ನೀಡಿದ ಸಿಎಂ!

ಅವರು ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇಂದಿನ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧಿ ಮಂಡಳಿ), ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಫೆಬ್ರುವರಿ ಅಂತ್ಯದ ವೇಳೆಗೆ ಅನುದಾನ ಬಳಕೆಯಾಗಬೇಕು : ಅಧಿಕಾರಿಗಳಿಗೆ ಗಡುವು ನೀಡಿದ ಸಿಎಂ! Read More