ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು ಗಣೇಶಮೂರ್ತಿಗಳ ವಿಸರ್ಜನೆಗೆ ಸಂಚಾರಿ ಟ್ಯಾಂಕ್ ವ್ಯವಸ್ಥೆ

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು

ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/07/2016 ರಂದು ಹೊರಡಿಸಿದೆ. ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 18/09/2023 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ಶಿವಮೊಗ್ಗ ನಗರದ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆ ಮಾಡಿದೆ.

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು Read More
ರಾಜ್ಯದ 195 ತಾಲೂಕುಗಳು ಬರ ಪೀಡಿತ - ಪರಿಹಾರಕ್ಕೆ ಕೇಂದ್ರಕ್ಕೆ ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ 195 ತಾಲೂಕುಗಳು ಬರ ಪೀಡಿತ – ಪರಿಹಾರಕ್ಕೆ ಕೇಂದ್ರಕ್ಕೆ ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆ. 14: ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ 195 ತಾಲೂಕುಗಳು ಬರ ಪೀಡಿತ – ಪರಿಹಾರಕ್ಕೆ ಕೇಂದ್ರಕ್ಕೆ ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ Read More
ಶಿವಮೊಗ್ಗ ಜಿಲ್ಲೆಯಾದ್ಯಂತ ಸ್ವಚ್ಛತೆಯೇ ಸೇವೆ ವಿಶೇಷ ಜನಾಂದೋಲನ : ಜಿಪಂ ಸಿ.ಇ.ಒ

ಶಿವಮೊಗ್ಗ ಜಿಲ್ಲೆಯಾದ್ಯಂತ ಸ್ವಚ್ಛತೆಯೇ ಸೇವೆ ವಿಶೇಷ ಜನಾಂದೋಲನ : ಜಿಪಂ ಸಿ.ಇ.ಒ

ಶಿವಮೊಗ್ಗ, ಸೆ. 14: ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ ಎಂಬ ವಿಶೇಷ ಜನಾಂದೋಲನವನ್ನು ಸೆ.15 ರಿಂದ ಅ.2 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಸ್ವಚ್ಛತೆಯೇ ಸೇವೆ ವಿಶೇಷ ಜನಾಂದೋಲನ : ಜಿಪಂ ಸಿ.ಇ.ಒ Read More
ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! ವರದಿ : ಬಿ. ರೇಣುಕೇಶ್

ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ!

ಶಿವಮೊಗ್ಗ, ಸೆ. 13: ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಶಿವಮೊಗ್ಗ ನಗರದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರವಿರಲಿ, ಶಾಲೆ ಆರಂಭವಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಬಿಸಿಯೂಟ ವ್ಯವಸ್ಥೆಯೇ ಆರಂಭವಾಗಿಲ್ಲ..!

ಹೌದು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 1 ನೇ ವಾರ್ಡ್ ಸೋಮಿನಕೊಪ್ಪದಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಸರ್ಕಾರಿ ಶಾಲೆಯಲ್ಲಿ ಇಲ್ಲಿಯವರೆಗೂ ಬಿಸಿಯೂಟ ವ್ಯವಸ್ಥೆ ಆರಂಭವಾಗಿಲ್ಲ. ಇದರಿಂದ ಬಡ – ಮಧ್ಯಮ ವರ್ಗದ ಮಕ್ಕಳು ತಮ್ಮ ನ್ಯಾಯಬದ್ಧ ಹಕ್ಕಿನಿಂದ ವಂಚಿತವಾಗುವಂತಾಗಿದೆ.

ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ! Read More
ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ!

ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..!

ಶಿವಮೊಗ್ಗ, ಸೆ. 12: ಶಿವಮೊಗ್ಗ ಸ್ಮಾರ್ಟ್‍ಸಿಟಿ ಲಿಮಿಟೆಡ್ ವತಿಯಿಂದ ಅನುಷ್ಟಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ, ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಮತ್ತು ಪರಿಹಾರಾತ್ಮಕ ಕ್ರಮಗಳ ಬಗ್ಗೆ ಸಭೆ ನಡೆಸಲಾಯಿತು.

ಶಿವಮೊಗ್ಗ ಸ್ಮಾರ್ಟ್ ಸಿಟಿ ಸಭೆ : ನಾಗರೀಕರಿಂದ ದೂರುಗಳ ಸರಮಾಲೆ..! Read More
ಇದೆಂಥಾ ಸ್ಮಾರ್ಟ್ ಸಿಟಿ ಕೆಲಸ : ನಾಗರೀಕರ ಅಮೂಲ್ಯ ತೆರಿಗೆ ಹಣದ ದುಂದು ವ್ಯರ್ಥ..! ವರದಿ : ಬಿ. ರೇಣುಕೇಶ್

ಇದೆಂಥಾ ಸ್ಮಾರ್ಟ್ ಸಿಟಿ ಕೆಲಸ : ನಾಗರೀಕರ ಅಮೂಲ್ಯ ತೆರಿಗೆ ಹಣದ ದುಂದು ವ್ಯರ್ಥ..!

ಶಿವಮೊಗ್ಗ, ಸೆ. 12: ‘ಸ್ಮಾರ್ಟ್ ಯೋಜನೆಗೆ ಶಿವಮೊಗ್ಗ ಆಯ್ಕೆಯಾದಾಗ, ಸಿಂಗಾಪೂರದಂತೆ ನಗರ ನಳನಳಿಸಲಿದೆ… ಇಡೀ ನಗರದ ಸಂಪೂರ್ಣ ಚಿತ್ರಣವೇ ಬದಲಾಗಲಿದೆ..!’ ಎಂದೆಲ್ಲ ಆಡಳಿತಗಾರರು ನಾಗರೀಕರಿಗೆ ಬಣ್ಣ ಬಣ್ಣದ ಕಥೆ ಹೇಳಿದ್ದರು..!

ಆದರೆ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ಆರಂಭಗೊಂಡ ನಂತರ, ಯೋಜನೆ ಬಗ್ಗೆ ನಾಗರೀಕರಲ್ಲಿದ್ದ ಅಭಿಪ್ರಾಯವೇ ಬದಲಾಗಲಾರಂಭಿಸಿತು. ಹಲವೆಡೆ ನಡೆದ ಕಳಪೆ ಕಾಮಗಾರಿ, ಅಸಮರ್ಪಕ ಮೇಲ್ವಿಚಾರಣೆ, ಆಮೆವೇಗ, ಬೇಕಾಬಿಟ್ಟಿ ಅನುಷ್ಠಾನ ಸಾಲುಸಾಲು ಲೋಪದೋಷಗಳು ನಾಗರೀಕರನ್ನು ಅಕ್ಷರಶಃ ಹೈರಾಣಾಗುವಂತೆ ಮಾಡಿತ್ತು!

ಇದೆಂಥಾ ಸ್ಮಾರ್ಟ್ ಸಿಟಿ ಕೆಲಸ : ನಾಗರೀಕರ ಅಮೂಲ್ಯ ತೆರಿಗೆ ಹಣದ ದುಂದು ವ್ಯರ್ಥ..! Read More
ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ! ಭೂಗತ ಲೋಕಕ್ಕೆ ಪೊಲೀಸರ ಖಡಕ್ ವಾರ್ನಿಂಗ್!!

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ಶಿವಮೊಗ್ಗ, ಸೆ. 11: ಬೆಳ್ಳಂಬೆಳಿಗ್ಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನೂರಾರು ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ, ತಪಾಸಣೆ ನಡೆಸಿದ ಘಟನೆ ಸೋಮವಾರ ನಡೆದಿದೆ.
ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಾಂತಿ – ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಈ ಕಾರ್ಯಾಚರಣೆ ನಡೆಸಿದೆ. ಈ ಮೂಲಕ ಭೂಗತ ಲೋಕಕ್ಕೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ! Read More
ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು!

ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು!

ತೀರ್ಥಹಳ್ಳಿ, ಸೆ. 10: ನದಿಯಲ್ಲಿ ಈಜಲು ತೆರಳಿದ ಯುವರಿಬ್ಬರು ನೀರು ಪಾಲಾದ ಘಟನೆ ತೀರ್ಥಹಳ್ಳಿ ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭೀನಮಕಟ್ಟೆ ಬಳಿಯ ತುಂಗಾ ನದಿಯಲ್ಲಿ ನಡೆದಿದೆ.

ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು! Read More
ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ