ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ : ಬೇಡಿಕೆ ಈಡೇರಿಕೆಯ ಭರವಸೆ ನೀಡಿದ ಮುಖ್ಯಮಂತ್ರಿ

ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯಾದ್ಯಂತ ಮಾರ್ಚ್ 1 ರಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆ ಈಡೇರುವವರೆಗೂ ಕಚೇರಿಗೆ ಸರ್ಕಾರಿ ನೌಕರರು ಆಗಮಿಸುವುದಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೌಕರರ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಜೊತೆಗೆ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ಈಗಾಗಲೇ 7 ನೇ ವೇತನ ಆಯೋಗ ರಚಿಸಲಾಗಿದೆ. 2023-24 ರಲ್ಲಿಯೇ ಶಿಫಾರಸ್ಸು ಜಾರಿಗೊಳಿಸಲಾಗುವುದು ಎಂದು ವಿಧಾನಸಭೆಯಲ್ಲಿಯೇ ಸ್ಪಷ್ಟಪಡಿಸಲಾಗಿದೆ. ಇದಕ್ಕಾಗಿ ಬಜೆಟ್ ನಲ್ಲಿ ಹಣ ಕೂಡ ಮೀಸಲಿರಿಸಲಾಗಿದೆ.
ಆದರೆ ಮಧ್ಯಂತರ ವರದಿ ಪಡೆದು ಶಿಫಾರಸ್ಸು ಅನುಷ್ಠಾನಗೊಳಿಸುವಂತೆ ನೌಕರರ ಸಂಘದವರು ಬೇಡಿಕೆ ಮುಂದಿಟ್ಟಿದ್ಧಾರೆ. ಅದಕ್ಕೂ ಕೂಡ ಒಪ್ಪಿಕೊಳ್ಳಲಾಗಿದೆ. ಅದರಂತೆ ಆಯೋಗದ ಜೊತೆ ಸಮಾಲೋಚಿಸಿ, ಮಧ್ಯಂತರ ವರದಿ ಪಡೆದು ಶಿಫಾರಸ್ಸು ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ : ಬೇಡಿಕೆ ಈಡೇರಿಕೆಯ ಭರವಸೆ ನೀಡಿದ ಮುಖ್ಯಮಂತ್ರಿ Read More

‘ನೀರಿಗೆ ಹಾಹಾಕಾರ – ಅಸ್ವಚ್ಛತೆ’ : ಪ್ರತಿಭಟನೆ ಎಚ್ಚರಿಕೆ ನೀಡಿದ ಗ್ರಾಪಂ ಸದಸ್ಯ!

‘ಶಿವಮೊಗ್ಗ ನಗರದ ಹೊರವಲಯ ಚೆನ್ನಾಮುಂಭಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಸ್ವಚ್ಛತೆಯೂ ಇಲ್ಲವಾಗಿದೆ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ಚೆನ್ನಾಮುಂಭಾಪುರ ದೂರಿದ್ದಾರೆ.

‘ನೀರಿಗೆ ಹಾಹಾಕಾರ – ಅಸ್ವಚ್ಛತೆ’ : ಪ್ರತಿಭಟನೆ ಎಚ್ಚರಿಕೆ ನೀಡಿದ ಗ್ರಾಪಂ ಸದಸ್ಯ! Read More

‘ಡಬ್ಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ’ – ನರೇಂದ್ರ ಮೋದಿ

ಪ್ರಕೃತಿ, ಸಂಸ್ಕøತಿ ಮತ್ತು ಕೃಷಿಯನ್ನು ಮೇಳೈಸಿಕೊಂಡಿರುವ ಶಿವಮೊಗ್ಗದಲ್ಲಿ ವಿಕಾಸದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಿಲಾನ್ಯಾಸವನ್ನು ಇಂದು ನೆರವೇರಿಸಿ ಅವರು ಮಾತನಾಡಿದರು.

‘ಡಬ್ಬಲ್ ಎಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ’ – ನರೇಂದ್ರ ಮೋದಿ Read More

ಶಿವಮೊಗ್ಗ ಜಿಲ್ಲೆಯನ್ನು ಹಾಡಿ ಹೊಗಳಿದ ನರೇಂದ್ರ ಮೋದಿ!

‘ಶಿವಮೊಗ್ಗ ಜಿಲ್ಲೆಯು ‘ನೇಚರ್ (ಪ್ರಕೃತಿ), ಕಲ್ಚರ್ (ಸಂಸ್ಕೃತಿ), ಅಗ್ರಿಕಲ್ಚರ್ (ಕೃಷಿ) ಧರತಿ (ಭೂಮಿ) ಯಾಗಿದೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಣಗಾನ ಮಾಡಿದ್ದಾರೆ

ಶಿವಮೊಗ್ಗ ಜಿಲ್ಲೆಯನ್ನು ಹಾಡಿ ಹೊಗಳಿದ ನರೇಂದ್ರ ಮೋದಿ! Read More

ಸಮಾವೇಶ ಸ್ಥಳದಲ್ಲಿ ಮೊಬೈಲ್ ಪೋನ್ ಇಂಟರ್ನೆಟ್ ಸೇವೆ ಅಸ್ತವ್ಯಸ್ತ!

ಶಿವಮೊಗ್ಗ ನಗರದ ವಿಮಾನ ನಿಲ್ದಾಣ ಆವರಣದಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಸಾವಿರಾರು ಜನ ಭಾಗವಹಿಸಿದ್ದಾರೆ. ಆದರೆ ಸಮಾವೇಶ ಸ್ಥಳದ ಬಳಿ ಮೊಬೈಲ್ ಫೋನ್ ಸಂಪರ್ಕ ಹಾಗೂ ಇಂಟರ್ನೆಟ್ ಸಂಪರ್ಕ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದರಿಂದ ಹಲವು ನಾಗರೀಕರು ಪರದಾಡುವಂತಾಗಿದೆ!

ಸಮಾವೇಶ ಸ್ಥಳದಲ್ಲಿ ಮೊಬೈಲ್ ಪೋನ್ ಇಂಟರ್ನೆಟ್ ಸೇವೆ ಅಸ್ತವ್ಯಸ್ತ! Read More

ಶಿವಮೊಗ್ಗ ನಗರದಲ್ಲಿ ಸಂಚಾರ ಅಸ್ತವ್ಯಸ್ತ : ಹಲವೆಡೆ ಟ್ರಾಫಿಕ್ ಜಾಮ್!!

ಶಿವಮೊಗ್ಗ ನಗರದ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಜನರು ವಿವಿಧ ವಾಹನಗಳಲ್ಲಿ ಆಗಮಿಸುತ್ತಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸಂಚಾರ ಅಸ್ತವ್ಯಸ್ತ : ಹಲವೆಡೆ ಟ್ರಾಫಿಕ್ ಜಾಮ್!! Read More

ಕಪ್ಪು ಬಾವುಟ ಪ್ರದರ್ಶನ : ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ದಿಢೀರ್ ಆಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ಮುಂದಾದ ನವ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದ ಘಟನೆ ಸೋಮವಾರ ಬೆಳಿಗ್ಗೆ ನಡೆಯಿತು.

ಕಪ್ಪು ಬಾವುಟ ಪ್ರದರ್ಶನ : ಕಾರ್ಯಕರ್ತರು ಪೊಲೀಸ್ ವಶಕ್ಕೆ! Read More

ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ : ಸಕಲ ಸಿದ್ಧತೆ!

ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ವಿಮಾನ ನಿಲ್ದಾಣದೊಂದಿಗೆ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿಯವರು ನೆರವೇರಿಸುವರು.

ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ : ಸಕಲ ಸಿದ್ಧತೆ! Read More

👉 ಬೇಡಿಕೆ ಈಡೇರದಿದ್ದರೆ ಮಾರ್ಚ್ 1 ರಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ನಿಶ್ಚಿತ 👉 ಮುಖ್ಯಮಂತ್ರಿಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಖಡಕ್ ಎಚ್ಚರಿಕೆ!

ನೌಕರರ ಪ್ರಮುಖ ಬೇಡಿಕೆಗಳೇನು?
ರಾಜ್ಯ ಸರ್ಕಾರಿ ನೌಕರರ ವೇತನ, ತುಟ್ಟಿ ಭತ್ಯೆ, ಸೌಲಭ್ಯಗಳ ಪರಿಷ್ಕರಣೆಗಾಗಿ ನೇಮಿಸಲಾಗಿರುವ 7 ನೇ ವೇತನ ಆಯೋಗದ ಶಿಫಾರಸ್ಸುಗಳ ಮಧ್ಯಂತರ ವರದಿ ಪಡೆದು ಶೇ.40 ರಷ್ಟು ಫಿಟ್ಮೆಂಟ್ ಅನ್ನು ಜುಲೈ 1 ರಿಂದ ಜಾರಿಗೊಳಿಸಬೇಕು.
ಈಗಾಗಲೇ ಹಲವು ರಾಜ್ಯಗಳಲ್ಲಿ ಎನ್.ಪಿ.ಎಸ್. ವ್ಯವಸ್ಥೆ ರದ್ದುಗೊಳಿಸಲಾಗಿದೆ. ಅದೇ ರೀತಿಯಲ್ಲಿ ಕರ್ನಾಟಕ ರಾಜ್ಯದಲ್ಲಿಯೂ ಎನ್.ಪಿ.ಎಸ್ ರದ್ದುಗೊಳಿಸಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂಬುವುದು ಸಂಘದ ಪ್ರಮುಖ ಬೇಡಿಕೆಯಾಗಿದೆ.

👉 ಬೇಡಿಕೆ ಈಡೇರದಿದ್ದರೆ ಮಾರ್ಚ್ 1 ರಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ನಿಶ್ಚಿತ 👉 ಮುಖ್ಯಮಂತ್ರಿಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಖಡಕ್ ಎಚ್ಚರಿಕೆ! Read More

ಫೆ.26, 27 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ!

ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿರುವ ಸಮಾರಂಭಕ್ಕೆ, ನಾಗರೀಕರನ್ನು ಕರೆತರಲು ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯ 200 ಬಸ್ ಗಳ ನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಫೆ.26, 27 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ! Read More