ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸಲೆಂದೇ ಅಮುಲ್‌ ಹಾಲು, ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಕಿಡಿಕಾರಿದ್ದಾರೆ.

‘ನಂದಿನಿ’ ಕನ್ನಡಿಗರ ಅಸ್ಮಿತೆ : ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ

ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸಲೆಂದೇ
ಅಮುಲ್‌ ಹಾಲು, ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್
ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಕಿಡಿಕಾರಿದ್ದಾರೆ.

‘ನಂದಿನಿ’ ಕನ್ನಡಿಗರ ಅಸ್ಮಿತೆ : ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ Read More
ರಣ ಬಿಸಿಲಿಗೆ ಮಲೆನಾಡು ಅಕ್ಷರಶಃ ಬಿಸಿಯಾಗಲಾರಂಭಿಸಿದೆ..! ಹೌದು. ಪ್ರಸ್ತುತ ಬೇಸಿಗೆ ತಾಪಕ್ಕೆ, ಶಿವಮೊಗ್ಗ ಜಿಲ್ಲೆಯ ನಾಗರೀಕರು ತತ್ತರಿಸಿದ್ದಾರೆ. ಹೈರಾಣಾಗುವಂತೆ ಮಾಡಿದೆ!! ಜಿಲ್ಲೆಯ ಇತರೆಡೆಯಂತೆ, ಶಿವಮೊಗ್ಗ ನಗರದಲ್ಲಿಯೂ ತಾಪಮಾನದ ಪ್ರಮಾಣ ತೀವ್ರ ಸ್ವರೂಪದಲ್ಲಿದೆ. ಹಗಲು ವೇಳೆ ಇಡೀ ನಗರ ಕಾದ ಕಾವಲಿಯಂತಾಗಿ ಪರಿವರ್ತಿತವಾಗುತ್ತಿದೆ. ಮನೆಯಿಂದ ಹೊರಬರಲಾಗದ ಮಟ್ಟಕ್ಕೆ ಬಿಸಿಲು ಬೀಳುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿರುವುದು, ನಾಗರೀಕರನ್ನು ಕಂಗಲಾಗಿಸಿದೆ. ಎದುಸಿರು ಹೆಚ್ಚಾಗುವಂತೆ ಮಾಡಿದೆ.

ಮಲೆನಾಡಲ್ಲಿ ರಣ ಬಿಸಿಲು : ನಾಗರೀಕರು ತತ್ತರ!

ರಣ ಬಿಸಿಲಿಗೆ ಮಲೆನಾಡು ಅಕ್ಷರಶಃ ಬಿಸಿಯಾಗಲಾರಂಭಿಸಿದೆ..! ಹೌದು. ಪ್ರಸ್ತುತ ಬೇಸಿಗೆ ತಾಪಕ್ಕೆ, ಶಿವಮೊಗ್ಗ ಜಿಲ್ಲೆಯ ನಾಗರೀಕರು ತತ್ತರಿಸಿದ್ದಾರೆ. ಹೈರಾಣಾಗುವಂತೆ ಮಾಡಿದೆ!!

ಜಿಲ್ಲೆಯ ಇತರೆಡೆಯಂತೆ, ಶಿವಮೊಗ್ಗ ನಗರದಲ್ಲಿಯೂ ತಾಪಮಾನದ ಪ್ರಮಾಣ ತೀವ್ರ ಸ್ವರೂಪದಲ್ಲಿದೆ.  ಹಗಲು ವೇಳೆ ಇಡೀ ನಗರ ಕಾದ ಕಾವಲಿಯಂತಾಗಿ ಪರಿವರ್ತಿತವಾಗುತ್ತಿದೆ. ಮನೆಯಿಂದ ಹೊರಬರಲಾಗದ ಮಟ್ಟಕ್ಕೆ ಬಿಸಿಲು ಬೀಳುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿರುವುದು, ನಾಗರೀಕರನ್ನು ಕಂಗಲಾಗಿಸಿದೆ. ಎದುಸಿರು ಹೆಚ್ಚಾಗುವಂತೆ ಮಾಡಿದೆ.

ಮಲೆನಾಡಲ್ಲಿ ರಣ ಬಿಸಿಲು : ನಾಗರೀಕರು ತತ್ತರ! Read More
ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಅಕ್ರಮದ ಪೋಟೋ – ವೀಡಿಯೋಗಳನ್ನು ಮೊಬೈಲ್ ಫೋನ್ ಮೂಲಕ ಕಳುಹಿಸಲು ಸಾರ್ವಜನಿಕರಿಗೆ ಚುನಾವಣಾ ಆಯೋಗದ ಮನವಿ

ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ  ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಮತದಾರಿಗೆ ಆಮಿಷವೊಡ್ಡುವುದನ್ನು ತಡೆಗಟ್ಟಲು ಹಾಗೂ ಅಕ್ರಮಗಳ ತಡೆಗೆ ಸಿ-ವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದೆ. ಸಿ-ವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ, ಸಾರ್ವಜನಿಕರು ಚುನಾವಣಾ ಅಕ್ರಮಗಳನ್ನು ತಮ್ಮ ಮೊಬೈಲ್‍ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿಡುತ್ತದೆ.

ಚುನಾವಣಾ ಅಕ್ರಮದ ಪೋಟೋ – ವೀಡಿಯೋಗಳನ್ನು ಮೊಬೈಲ್ ಫೋನ್ ಮೂಲಕ ಕಳುಹಿಸಲು ಸಾರ್ವಜನಿಕರಿಗೆ ಚುನಾವಣಾ ಆಯೋಗದ ಮನವಿ Read More
‘ಜಂಗೀ ಕುಸ್ತಿಗೆ ಅಖಾಡ ರೆಡಿಯಾಗಿದೆ… ಆದರೆ ಪೈಲ್ವಾನರುಗಳೇ ಸಿದ್ಧವಾಗಿಲ್ಲ...’ ಇದು, ಶಿವವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದ್ಯದ ಚುನಾವಣಾ ರಾಜಕಾರಣದ ಚಿತ್ರಣ…! ಹೌದು. ವಿಧಾನಸಭೆ ಚುನಾವಣೆ ಘೋಷಣೆಯಾಗಿ ಹಲವೇ ದಿನಗಳೇ ಕಳೆದಿದೆ. ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಆದರೆ ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಯಾರೆಂಬುವುದು ಖಚಿತವಾಗಿಲ್ಲ. ಯಾವ ಪಕ್ಷದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುವುದು ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ. ಇದರಿಂದ ಅಭ್ಯರ್ಥಿಗಳ ಆಯ್ಕೆ ಚರ್ಚೆಗಳಿಗೆ ತೆರೆ ಬಿದ್ದಿಲ್ಲ.

ಶಿವಮೊಗ ನಗರ ಕ್ಷೇತ್ರ : ಮೂರು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ!

‘ಜಂಗೀ ಕುಸ್ತಿಗೆ ಅಖಾಡ ರೆಡಿಯಾಗಿದೆ… ಆದರೆ ಪೈಲ್ವಾನರುಗಳೇ ಸಿದ್ಧವಾಗಿಲ್ಲ…’ ಇದು, ಶಿವವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದ್ಯದ ಚುನಾವಣಾ ರಾಜಕಾರಣದ ಚಿತ್ರಣ…!

ಹೌದು. ವಿಧಾನಸಭೆ ಚುನಾವಣೆ ಘೋಷಣೆಯಾಗಿ ಹಲವೇ ದಿನಗಳೇ ಕಳೆದಿದೆ. ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಆದರೆ ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಯಾರೆಂಬುವುದು ಖಚಿತವಾಗಿಲ್ಲ.

ಶಿವಮೊಗ ನಗರ ಕ್ಷೇತ್ರ : ಮೂರು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ! Read More
ಇಬ್ಬರು ಯುವಕರಿಗೆ ಚೂರಿಯಿಂದ ಇರಿದು, ನಾಲ್ವರ ಮೇಲೆ ಹಲ್ಲೆ ಮಾಡಿದ್ದ ಐವರು ಯುವಕರಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗದ ಕೊರಮಕೇರಿ ನಿವಾಸಿಗಳಾದ ವಿಜಯಕುಮಾರ್ (26), ಪ್ರವೀಣ್ (20), ನವೀನ್ (24), ಚೇತನ (24) ಹಾಗೂ ಸಂತೋಷ್ (33) ಶಿಕ್ಷೆಗೊಳಗಾದ ಯುವಕೆಂದು ಗುರುತಿಸಲಾಗಿದೆ.

ಚೂರಿಯಿಂದ ಇರಿದು ಹಲ್ಲೆ ಮಾಡಿದ್ದ ಐವರು ಯುವಕರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ!

ಇಬ್ಬರು ಯುವಕರಿಗೆ ಚೂರಿಯಿಂದ ಇರಿದು, ನಾಲ್ವರ ಮೇಲೆ ಹಲ್ಲೆ ಮಾಡಿದ್ದ ಐವರು ಯುವಕರಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಶಿವಮೊಗ್ಗದ ಕೊರಮಕೇರಿ ನಿವಾಸಿಗಳಾದ ವಿಜಯಕುಮಾರ್ (26), ಪ್ರವೀಣ್ (20), ನವೀನ್ (24), ಚೇತನ (24) ಹಾಗೂ ಸಂತೋಷ್ (33) ಶಿಕ್ಷೆಗೊಳಗಾದ ಯುವಕೆಂದು ಗುರುತಿಸಲಾಗಿದೆ.

ಚೂರಿಯಿಂದ ಇರಿದು ಹಲ್ಲೆ ಮಾಡಿದ್ದ ಐವರು ಯುವಕರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ! Read More
ಶಿವಮೊಗ್ಗ, ಎ. 6: ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಶಾಂತಿನಗರ ಭಾಗದ ಗುಡ್ಡದ ಭಾಗದಲ್ಲಿ ಸಂಜೆ ದಿಢೀರ್ ಆಗಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು.ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಗುಡ್ಡಕ್ಕೆ ತುಗಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಗುಡ್ಡದ ಇತರೆಡೆ ಅಗ್ನಿಯ ಕೆನ್ನಾಲಿಗೆ ವ್ಯಾಪಿಸುವುದನ್ನು ನಿಯಂತ್ರಿಸಿದೆ. ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆಂಬುವುದು ಸ್ಪಷ್ಟವಾಗಿಲ್ಲ. ತೀವ್ರ ಸ್ವರೂಪದ ಬಿಸಿಲಿನಿಂದ ಗುಡ್ಡದಲ್ಲಿ ಕುರುಚಲು ಗಿಡಗಂಟೆಗಳು, ಹಸಿರು ಹುಲ್ಲು ಒಣಗಿದೆ. ಪ್ರಸ್ತುತ ಬೇಸಿಗೆ ವೇಳೆ ಕಾಡ್ಗಿಚ್ಚಿನಿಂದ ರಾಗಿಗುಡ್ಡ ಉಳಿಸುವ ನಿಟ್ಟಿನಲ್ಲಿ, ಆಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಶಿವಮೊಗ್ಗ ನಗರಕ್ಕೆ ಹೊಂದಿಕೊಂಡಂತಿರುವ ಏಕೈಕ ಗುಡ್ಡ ರಾಗಿಗುಡ್ಡವಾಗಿದೆ. ಪ್ರಾಣಿ-ಪಕ್ಷಿಗಳ ಆವಾಸ ಸ್ಥಾನವಾಗಿದೆ. ಆದರೆ ವಿವಿಧ ಅಭಿವೃದ್ದಿ ಕಾಮಗಾರಿ, ಕಟ್ಟಡಗಳ ನಿರ್ಮಾಣದಿಂದ ಗುಡ್ಡ ಕಣ್ಮರೆಯಾಗುತ್ತಿದೆ. ಇದೀಗ ಕಾಳ್ಗಿಚ್ಚಿನಿಂದ ಅಳಿದುಳಿದ ಪ್ರಕೃತಿ ಸಂಪತ್ತು ವಿನಾಶವಾಗಲಾರಂಭಿಸಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಶಿವಮೊಗ್ಗ ಹೊರವಲಯ ರಾಗಿಗುಡ್ಡದಲ್ಲಿ ಬೆಂಕಿ!

ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಶಾಂತಿನಗರ ಭಾಗದ ಗುಡ್ಡದ ಭಾಗದಲ್ಲಿ ಸಂಜೆ ದಿಢೀರ್ ಆಗಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು, ಗುಡ್ಡಕ್ಕೆ ತುಗಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಗುಡ್ಡದ ಇತರೆಡೆ ವ್ಯಾಪಿಸುವುದನ್ನು ನಿಯಂತ್ರಿಸಿದೆ.

ಶಿವಮೊಗ್ಗ ಹೊರವಲಯ ರಾಗಿಗುಡ್ಡದಲ್ಲಿ ಬೆಂಕಿ! Read More
ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ!

ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ! Read More
: ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹುಂಚ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸೈಬರ್ ಅಪರಾಧ ಕುರಿತಂತೆ ಜನಜಾಗೃತಿ ಮೂಡಿಸಿದರು. ಸಾರ್ವಜನಿಕರಿಗೆ ಕರಪತ್ರ ವಿತರಣೆ ಮಾಡಿದರು.

ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಿಂದ ಜನಜಾಗೃತಿ ಕಾರ್ಯಕ್ರಮ

ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹುಂಚ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸೈಬರ್ ಅಪರಾಧ ಕುರಿತಂತೆ ಜನಜಾಗೃತಿ ಮೂಡಿಸಿದರು. ಸಾರ್ವಜನಿಕರಿಗೆ ಕರಪತ್ರ ವಿತರಣೆ ಮಾಡಿದರು.

ಮೊಬೈಲ್ ಕಳೆದುಹೋದ ಸಂದರ್ಭದಲ್ಲಿ, ಸಿಇಐಆರ್ ಸಾಫ್ಟ್’ವೇರ್ ತಂತ್ರಜ್ಞಾನದ ಮೂಲಕ ಹೇಗೆ ಪತ್ತೆ ಹಚ್ಚಿಕೊಡಲಾಗುತ್ತದೆ ಎಂಬುವುದರ ಬಗ್ಗೆ ಸಾರ್ವಜನಿಕರಿಗೆ ಸೈಬರ್ ಠಾಣೆ ಪೊಲೀಸರು ತಿಳಿ ಹೇಳಿದರು.

ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಿಂದ ಜನಜಾಗೃತಿ ಕಾರ್ಯಕ್ರಮ Read More
ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..!

ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..! Read More
ಶಿವಮೊಗ್ಗ, ಎ. 5: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.-8 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎ. 5 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ. ಹುಚ್ಚುರಾಯ ಕಾಲೋನಿ, ಕುವೆಂಪು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ ಅವೆನ್ಯೂ, ಕಾಶೀಪುರ ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ಸೂಡಾ ಕಚೇರಿ, ವಿಪ್ರ ಟ್ರಸ್ಟ್, ಚೇತನಾ ಪಾರ್ಕ್, ವೀರಣ್ಣ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸೂಕ್ತ ಸಹಕಾರ ನೀಡಬೇಕು ಎಂದು ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ – 3 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಇಂದು ಶಿವಮೊಗ್ಗದ ಸೂಡಾ ಕಚೇರಿ, ಕಾಶೀಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.-8 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎ. 5 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಇಂದು ಶಿವಮೊಗ್ಗದ ಸೂಡಾ ಕಚೇರಿ, ಕಾಶೀಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ Read More