ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ

ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ, ಮೇ 29:  ಶಿವಮೊಗ್ಗ ಜಿಲ್ಲಾ #ಉದ್ಯೋಗ ವಿನಿಮಯ ಕಚೇರಿವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ  ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ …

ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ Read More
ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು. ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ. ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..!

ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು.

ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..! Read More
‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ Read More
ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ! ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.!

ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ!

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ!

ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.!

ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ! Read More