Bhadravati | Love Failure – Police Rescue Youth Attempting Suicide! ಭದ್ರಾವತಿ | ಪ್ರೇಮ ವೈಫಲ್ಯ – ಆತ್ಮಹತ್ಯೆಗೆ ಮುಂದಾಗಿದ್ದ ಯುವಕನ ರಕ್ಷಿಸಿದ ಪೊಲೀಸರು!
Fraud Case: 10 People Sentenced to 1 Year in Jail! ದಾಂಧಲೆ ಪ್ರಕರಣ : 10 ಜನರಿಗೆ 1 ವರ್ಷ ಜೈಲು ಶಿಕ್ಷೆ!
Bhadravati Elderly Couple Murder Case: Ayurvedic Doctor Arrested! ಭದ್ರಾವತಿ ವೃದ್ದ ದಂಪತಿ ಕೊಲೆ ಪ್ರಕರಣ : ಆಯುರ್ವೇದಿಕ್ ವೈದ್ಯನ ಬಂಧನ!
ಭದ್ರಾವತಿ ನಗರದಲ್ಲಿ ಯುವತಿಯ ನಿಗೂಢ ಕಣ್ಮರೆ! ಶಿವಮೊಗ್ಗ,ಜ.09: ಮನೆಯಿಂದ ಹೊರ ತೆರಳಿದ ಯುವತಿಯೋರ್ವಳು ಮನೆಗೆ ಹಿಂದಿರುಗದೆ ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ಈ ಕುರಿತಂತೆ ಜನವರಿ 9 ರಂದು ಹಳೇನಗರ ಪೊಲೀಸ್ ಠಾಣೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಮಾಸ್ ಪರ್ವೀನ್ ಎನ್ ಆರ್ (25) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಭದ್ರಾವತಿಯ ಸಿಗೇಬಾಗಿಯಲ್ಲಿರುವ ಬಿಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಜನವರಿ 06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಮನೆಯಿಂದ ಯುವತಿ ಹೊರ ಹೋಗಿದ್ದು, ನಂತರ ಮನೆಗೆ ಹಿಂದುರುಗದೆ ಕಣ್ಮರೆಯಾಗಿದ್ದಾರೆ. ಎಲ್ಲಿಯೂ ಅವರ ಸುಳಿವು ಲಭ್ಯವಾಗಿಲ್ಲ. ಚಹರೆ : ಕಾಣೆಯಾದ ಅಲ್ಮಾಸ್ ಪರ್ವೀನ್ 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಉರ್ದು, ಹಿಂದಿ, ಕನ್ನಡ, ಇಂಗ್ಲೀಷ್ ಭಾಷೆ ಮಾತಾನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಟಾಪ್, ಪಿಂಕ್ ಬಣ್ಣದ ಲೆಗಿನ್ಸ್ ಪ್ಯಾಂಟು, ಬಿಳಿ ಗೆರೆಗಳಿರುವ ಕಪ್ಪು ಬಣ್ಣದ ಬುರ್ಖಾ, ಕಾಫಿ ಬಣ್ಣದ ವೇಲ್ ಧರಿಸಿರುತ್ತಾಳೆ. ಇವರ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಹಳೇನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. Shivamogga, Jan. 09: An incident has taken place in Bhadravati city where a young woman who left home and did not return home mysteriously disappeared. This was stated in a statement issued by Halenagar Police Station on January 9.
The mysterious disappearance of a woman from Bhadravati! ಭದ್ರಾವತಿಯ ಆಲೆಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ನಿಗೂಢ ಕಣ್ಮರೆ!
Shivamogga: A young man was murdered near the APMC vegetable market! ಶಿವಮೊಗ್ಗ : ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪ ಯುವಕನ ಕೊಲೆ!
Hosnagar: Retired Teacher Dies After Falling Off Bridge With Bike! ಹೊಸನಗರ : ಸೇತುವೆ ಮೇಲಿಂದ ಆಯತಪ್ಪಿ ಬೈಕ್ ಸಮೇತ ಬಿದ್ದು ನಿವೃತ್ತ ಶಿಕ್ಷಕ ಸಾವು!
Caste abuse, assault case : Bhadravati man sentenced to 4 years rigorous imprisonment! ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
'Chaddi gang' roaming in Bhadravati: Citizens worried! ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ!