ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ

ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು.

ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ Read More
ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ! ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..!

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ!

ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ.

ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..! Read More
ಒಂದೆಡೆ ಚುನಾವಣೆ ಕಾವು, ಮತ್ತೊಂದೆಡೆ ಬಿಸಿಲ ಧಗೆಯಿಂದ ಕೆಲ ರಾಜಕಾರಣಿಗಳು ಅಕ್ಷರಶಃ ಬಸವಳಿದಿದ್ದಾರೆ. ಬೆವರು ಹರಿಸಲಾರಂಭಿಸಿದ್ದಾರೆ. ಯಾವಾಗ ಚುನಾವಣೆ ಪೂರ್ಣಗೊಳ್ಳಲಿದೆಯೋ ಎಂದು ಕಾದು ಕುಳಿತುಕೊಳ್ಳುವಂತೆ ಮಾಡಿದೆ! ಹೌದು. ಪ್ರಸ್ತುತ ವರ್ಷ ತಾಪಮಾನದ ಪ್ರಮಾಣದಲ್ಲಿ, ಗಣನೀಯ ಪ್ರಮಾಣದ ಹೆಚ್ಚಳ ಕಂಡುಬಂದಿದೆ. ಬಿರು ಬಿಸಿಲು ನಾಗರೀಕರನ್ನು ಹೈರಾಣಾಗಿಸಿದೆ. ಸುಡು ಬಿಸಿಲಿನಲ್ಲಿ ಎದುರಾಗಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯು ಅಖಾಡದಲ್ಲಿರುವ ಹಲವು ಅಭ್ಯರ್ಥಿಗಳನ್ನು ಹೈರಾಣಾಗಿಸಿದೆ.

ಚುನಾವಣೆ ಕಾವು, ಬಿಸಿಲ ಧಗೆಗೆ ಬಸವಳಿದ ರಾಜಕಾರಣಿಗಳು..!

ಒಂದೆಡೆ ಚುನಾವಣೆ ಕಾವು, ಮತ್ತೊಂದೆಡೆ ಬಿಸಿಲ ಧಗೆಯಿಂದ ಕೆಲ ರಾಜಕಾರಣಿಗಳು ಅಕ್ಷರಶಃ ಬಸವಳಿದಿದ್ದಾರೆ. ಬೆವರು ಹರಿಸಲಾರಂಭಿಸಿದ್ದಾರೆ. ಯಾವಾಗ ಚುನಾವಣೆ ಪೂರ್ಣಗೊಳ್ಳಲಿದೆಯೋ ಎಂದು ಕಾದು ಕುಳಿತುಕೊಳ್ಳುವಂತೆ ಮಾಡಿದೆ!

ಹೌದು. ಪ್ರಸ್ತುತ ವರ್ಷ ತಾಪಮಾನದ ಪ್ರಮಾಣದಲ್ಲಿ, ಗಣನೀಯ ಪ್ರಮಾಣದ ಹೆಚ್ಚಳ ಕಂಡುಬಂದಿದೆ. ಬಿರು ಬಿಸಿಲು ನಾಗರೀಕರನ್ನು ಹೈರಾಣಾಗಿಸಿದೆ. ಸುಡು ಬಿಸಿಲಿನಲ್ಲಿ ಎದುರಾಗಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯು ಅಖಾಡದಲ್ಲಿರುವ ಹಲವು ಅಭ್ಯರ್ಥಿಗಳನ್ನು ಹೈರಾಣಾಗಿಸಿದೆ.

ಚುನಾವಣೆ ಕಾವು, ಬಿಸಿಲ ಧಗೆಗೆ ಬಸವಳಿದ ರಾಜಕಾರಣಿಗಳು..! Read More
ಭದ್ರಾವತಿ ವಿಧಾನಸಭಾ ಕ್ಷೇತ್ರ : ‘ವ್ಯಕ್ತಿ’ ಪ್ರತಿಷ್ಠೆಯ ಕಣ!
ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗ ನಗರಕ್ಕೆ ಆಗಮಿಸಲಿರುವ ಈ ಇಬ್ಬರು ನಾಯಕರು, ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಉಡುಪಿ ಜಿಲ್ಲೆಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ಮೇ ತಿಂಗಳಲ್ಲಿ ಬಿಜೆಪಿ ನಾಯಕರ ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ, ಆ ಪಕ್ಷದ ರಾಷ್ಟ್ರಾಧ್ಯಕ್ಷ ನಡ್ಡಾ ಅವರು ಪ್ರತ್ಯೇಕವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ಅಧಿಕೃತ ದಿನಾಂಕಗಳು ಇನ್ನಷ್ಟೆ ಖಚಿತವಾಗಬೇಕಾಗಿದೆ.

ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು!

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ.

ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು! Read More
ಕಳೆದ ಸರಿಸುಮಾರು ನಾಲ್ಕು ದಶಕಗಳಿಂದ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಪ್ರಸ್ತುತ ಅವರ ಪುತ್ರ ಬಿ.ವೈ.ವಿಜಯೇಂದ್ರ ಅಖಾಡದಿಂದ ಕುತೂಹಲ ಕೆರಳಿಸಿದೆ. ಹಾಗೆಯೇ ಬದಲಾದ ರಾಜಕೀಯ ವಾತಾವರಣ, ಕೆಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಸ್ತುತ ಚುನಾವಣಾ ಕಣ ಕಾವೇರುವಂತೆ ಮಾಡಿದೆ! ಇದೇ ಮೊದಲ ಬಾರಿಗೆ ಅಖಾಡಕ್ಕಿಳಿದಿರುವ ಬಿ.ವೈ.ವಿಜಯೇಂದ್ರಗೆ, ಪ್ರಥಮ ಚುನಾವಣೆಯೇ ಅಕ್ಷರಶಃ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಷ್ಠೆಯ ಪ್ರಶ್ನೆಯಾಗಿದೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಗೆಲ್ಲಲೇಬೇಕಾದ ಅನಿವಾರ್ಯ ಒತ್ತಡ ಅವರ ಮೇಲಿದೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರ : ಯಾರಾಗಲಿದ್ದಾರೆ ಶಿಕಾರಿ..?!

ಕಳೆದ ಸರಿಸುಮಾರು ನಾಲ್ಕು ದಶಕಗಳಿಂದ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಪ್ರಸ್ತುತ ಅವರ ಪುತ್ರ ಬಿ.ವೈ.ವಿಜಯೇಂದ್ರ ಅಖಾಡದಿಂದ ಕುತೂಹಲ ಕೆರಳಿಸಿದೆ. ಹಾಗೆಯೇ ಬದಲಾದ ರಾಜಕೀಯ ವಾತಾವರಣ, ಕೆಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಸ್ತುತ ಚುನಾವಣಾ ಕಣ ಕಾವೇರುವಂತೆ ಮಾಡಿದೆ!

ಇದೇ ಮೊದಲ ಬಾರಿಗೆ ಅಖಾಡಕ್ಕಿಳಿದಿರುವ ಬಿ.ವೈ.ವಿಜಯೇಂದ್ರಗೆ, ಪ್ರಥಮ ಚುನಾವಣೆಯೇ ಅಕ್ಷರಶಃ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಷ್ಠೆಯ ಪ್ರಶ್ನೆಯಾಗಿದೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಗೆಲ್ಲಲೇಬೇಕಾದ ಅನಿವಾರ್ಯ ಒತ್ತಡ ಅವರ ಮೇಲಿದೆ.

ಶಿಕಾರಿಪುರ ವಿಧಾನಸಭಾ ಕ್ಷೇತ್ರ : ಯಾರಾಗಲಿದ್ದಾರೆ ಶಿಕಾರಿ..?! Read More
ವಿಧಾನಸಭೆ ಚುನಾವಣೆ : ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..! ಲಕ್ಷಾಂತರ ರೂ. ಮೌಲ್ಯದ ಸೀರೆ ದಾಸ್ತಾನು ಪತ್ತೆ : ಮುಂದುವರಿದ ಕಟ್ಟುನಿಟ್ಟಿನ ತಪಾಸಣೆ

ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..!

ಶಿವಮೊಗ್ಗ, ಎ. 25: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.

ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..! Read More

ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ!

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.

ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ! Read More
ಶಿವಮೊಗ್ಗ, ಏ. 24: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿತ್ತು. ಒಟ್ಟಾರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ 74 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಕ್ಷೇತ್ರವಾರು ವಿವರ ಈ ಮುಂದಿನಂತಿದೆ.

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ : ಅಖಾಡದಲ್ಲಿ 74 ಅಭ್ಯರ್ಥಿಗಳು

ಶಿವಮೊಗ್ಗ, ಏ. 24: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ  ಹಿಂಪಡೆಯಲು ಕಡೆಯ ದಿನವಾಗಿತ್ತು. ಒಟ್ಟಾರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ 74 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಕ್ಷೇತ್ರವಾರು ವಿವರ ಈ ಮುಂದಿನಂತಿದೆ.

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ : ಅಖಾಡದಲ್ಲಿ 74 ಅಭ್ಯರ್ಥಿಗಳು Read More
ಶಿವಮೊಗ್ಗ ಗ್ರಾಮಾಂತರ (ಪರಿಶಿಷ್ಟ ಜಾತಿ ಮೀಸಲು) ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ, ಸುಡು ಬಿಸಿಲಿನಷ್ಟೆ ಕಾವೇರಿದೆ! ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದ ನಂತರ ಮೂರು ಚುನಾವಣೆಗಳು ನಡೆದಿವೆ. ಎರಡು ಬಾರಿ ಬಿಜೆಪಿ, ಒಂದು ಬಾರಿ ಜೆಡಿಎಸ್ ಜಯ ಸಾಧಿಸಿದೆ. ಆದರೆ ಒಮ್ಮೆ ಜಯ ಸಾಧಿಸಿದವರು ಮತ್ತೊಮ್ಮೆ ಆಯ್ಕೆಯಾಗಿಲ್ಲ! ಕಳೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಿಂದ ಕಣಕ್ಕಿಳಿದ ಅಭ್ಯರ್ಥಿಗಳೇ ಈ ಬಾರಿಯೂ ಎದುರಾಳಿಗಳಾಗಿದ್ದಾರೆ. ಬಿಜೆಪಿಯಿಂದ ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್, ಜೆಡಿಎಸ್ ನಿಂದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹಾಗೂ ಕಾಂಗ್ರೆಸ್ ನಿಂದ ಡಾ.ಶ್ರೀನಿವಾಸ್ ಕರಿಯಣ್ಣ ಸ್ಪರ್ಧಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ : ಕಾವೇರಿದ ಚುನಾವಣಾ ಕಣ!

ಶಿವಮೊಗ್ಗ ಗ್ರಾಮಾಂತರ (ಪರಿಶಿಷ್ಟ ಜಾತಿ ಮೀಸಲು) ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ, ಸುಡು ಬಿಸಿಲಿನಷ್ಟೆ ಕಾವೇರಿದೆ! ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದ ನಂತರ ಮೂರು ಚುನಾವಣೆಗಳು ನಡೆದಿವೆ. ಎರಡು ಬಾರಿ ಬಿಜೆಪಿ, ಒಂದು ಬಾರಿ ಜೆಡಿಎಸ್ ಜಯ ಸಾಧಿಸಿದೆ. ಆದರೆ ಒಮ್ಮೆ ಜಯ ಸಾಧಿಸಿದವರು ಮತ್ತೊಮ್ಮೆ ಆಯ್ಕೆಯಾಗಿಲ್ಲ!

ಕಳೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಿಂದ ಕಣಕ್ಕಿಳಿದ ಅಭ್ಯರ್ಥಿಗಳೇ ಈ ಬಾರಿಯೂ ಎದುರಾಳಿಗಳಾಗಿದ್ದಾರೆ. ಬಿಜೆಪಿಯಿಂದ ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್, ಜೆಡಿಎಸ್ ನಿಂದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹಾಗೂ ಕಾಂಗ್ರೆಸ್ ನಿಂದ ಡಾ.ಶ್ರೀನಿವಾಸ್ ಕರಿಯಣ್ಣ ಸ್ಪರ್ಧಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ : ಕಾವೇರಿದ ಚುನಾವಣಾ ಕಣ! Read More