ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ! ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ!

ಸಮಾಜವಾದಿಗಳ ತವರು, ಪ್ರಜ್ಞಾವಂತ, ಪ್ರಬುದ್ಧ ಮತದಾರರ ಕ್ಷೇತ್ರವೆಂದೇ ಕರೆಯಲಾಗುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಹಾಲಿ – ಮಾಜಿ ಸಚಿವರುಗಳ ನಡುವೆ ಜಿದ್ದಾಜಿದ್ದಿನ ಅಖಾಡಕ್ಕೆ ವೇದಿಕೆ ಸಿದ್ದವಾಗಿದೆ!

ಹೌದು. 1989 ರಿಂದ 2018 ರವರೆಗೆ ನಡೆದ 5 ಚುನಾವಣೆಗಳಲ್ಲಿ ಪರಸ್ಪರ ಎದುರಾಳಿಗಳಾಗಿದ್ದ, ಹಾಲಿ ಗೃಹ ಸಚಿವರೂ ಆದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವರೂ ಆದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು, 2023 ರ ಅಸೆಂಬ್ಲಿ ಚುನಾವಣೆಯಲ್ಲಿ 6 ನೇ ಬಾರಿ ಮುಖಾಮುಖಿಯಾಗುತ್ತಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕುತೂಹಲ ಮೂಡಿಸಿದ ಹಾಲಿ – ಮಾಜಿ ಸಚಿವರ ಕೊನೆಯ ಚುನಾವಣೆ! Read More
: ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಇವರ ಹಲವು ದಶಕಗಳ ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ! ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ!

ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಲವು ದಶಕಗಳ  ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ!

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ! Read More
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ!

‘ರಾಜಕಾರಣದಲ್ಲಿ ಯಾರೂ ಶಾಶ್ವತ ಶತೃಗಳಲ್ಲ, ಮಿತ್ರರೂ ಅಲ್ಲ..’ ಎಂಬ ಮಾತು, ಸದ್ಯ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸೂಕ್ತವಾಗಿ ಅನ್ವಯವಾಗುತ್ತದೆ..!

ಮಾಜಿ ಸಿಎಂ ಎಸ್.ಬಂಗಾರಪ್ಪ ಗರಡಿಯಲ್ಲಿ ಏಕಕಾಲಕ್ಕೆ ರಾಜಕೀಯ ಪ್ರವೇಶಿಸಿ, ಅವರ ಕೃಪಾಕಟಾಕ್ಷದಿಂದ ಏಕಕಾಲದಲ್ಲಿಯೇ ವಿಧಾನಸಭಾ ಚುನಾವಣಾ ಕಣಕ್ಕಿಳಿದು ಆಯ್ಕೆಯಾಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಗಳಸ್ಯ-ಕಂಠಸ್ಯರಾಗಿದ್ದರು. ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾಗ ಅವರನ್ನು ಬೆಂಬಲಿಸಿ, ಸಮಾಜವಾದಿ ಪಕ್ಷದ ಚಿಹ್ನೆಯಾದ ಸೈಕಲ್ ನಲ್ಲಿ ವಿಧಾನಸಭೆಗೆ ಆಗಮಿಸಿ ದೇಶದ ಗಮನ ಸೆಳೆದಿದ್ದರು!

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ! Read More
ಬಿ.ಎಸ್.ಯಡಿಯೂರಪ್ಪ – ಎಸ್. ಬಂಗಾರಪ್ಪ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ 2008 ರ ಚುನಾವಣೆ!

ಬಿ.ಎಸ್.ಯಡಿಯೂರಪ್ಪ – ಎಸ್. ಬಂಗಾರಪ್ಪ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ 2008 ರ ಚುನಾವಣೆ!

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ದಿವಂಗತ ಎಸ್.ಬಂಗಾರಪ್ಪ ಎದುರಾಳಿಗಳಾಗಿ ಕಣಕ್ಕಿಳಿದಿದ್ದ 2008 ರ ವಿಧಾನಸಭೆ ಚುನಾವಣೆಯು, ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಅಕ್ಷರಶಃ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿತ್ತು..!

ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಯಡಿಯೂರಪ್ಪ ಎದುರು, ಅಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಬಂಗಾರಪ್ಪ ಕಣಕ್ಕಿಳಿಯುವ ಘೋಷಣೆ ಮಾಡಿದ್ದರು. ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು!

ಬಿ.ಎಸ್.ಯಡಿಯೂರಪ್ಪ – ಎಸ್. ಬಂಗಾರಪ್ಪ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ 2008 ರ ಚುನಾವಣೆ! Read More
‘ಅಣ್ಣ – ತಮ್ಮನ ಹಣಾಹಣಿಗೆ, ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ವೇದಿಕೆ ಸಿದ್ಧವಾಗಿದೆ. ಸತತ ನಾಲ್ಕನೇ ಬಾರಿ, ಚುನಾವಣಾ ಅಖಾಡದಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ‘ಸಹೋದರರ ಸವಾಲ್’ ನಿಂದ ಸೊರಬ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ!

ಅಣ್ಣ – ತಮ್ಮನ ಜಂಗೀ ಕುಸ್ತಿಗೆ ಸಿದ್ದವಾದ ಸೊರಬ ಕ್ಷೇತ್ರ!

‘ಅಣ್ಣ – ತಮ್ಮನ ಹಣಾಹಣಿಗೆ, ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ವೇದಿಕೆ ಸಿದ್ಧವಾಗಿದೆ. ಸತತ ನಾಲ್ಕನೇ ಬಾರಿ, ಚುನಾವಣಾ ಅಖಾಡದಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ‘ಸಹೋದರರ ಸವಾಲ್’ ನಿಂದ ಸೊರಬ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ!

ಹೌದು. ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಾದ ಕುಮಾರ್ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ, ಪ್ರಸ್ತುತ ವಿಧಾನಸಭೆ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇಬ್ಬರ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕ್ಕೇರಿದೆ. ಶತಾಯಗತಾಯ ಜಯ ಸಾಧಿಸಲೇಬೇಕೆಂಬ ಜಿದ್ದಿಗೆ ಬಿದ್ದಿದ್ದಾರೆ.

ಅಣ್ಣ – ತಮ್ಮನ ಜಂಗೀ ಕುಸ್ತಿಗೆ ಸಿದ್ದವಾದ ಸೊರಬ ಕ್ಷೇತ್ರ! Read More
ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ, ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹಾಗೂ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ಅವರು ಶಿಕಾರಿಪುರ ಪಟ್ಟಣದಲ್ಲಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರು ಸಾಂಕೇತಿಕವಾಗಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ. ಎ. 19 ರಂದು ಮೆರವಣಿಗೆಯ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಅರ್ಜಿ ಸಲ್ಲಿಸಲಿದ್ದಾರೆ. ಈ ವಿಷಯವನ್ನು ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ Read More

ಡಿಸಿ – ಎಸ್ಪಿ ಖಡಕ್ ಸೂಚನೆ : ಮರಳು, ಜಲ್ಲಿ ಕಲ್ಲು ಸಾಗಾಣೆ ಲಾರಿಗಳು ವಶ!

ಅಕ್ರಮ ಮರಳು ಹಾಗೂ ಜಲ್ಲಿ ಕಲ್ಲು ಸಾಗಣೆಗೆ ಕಡಿವಾಣ ಹಾಕುವಂತೆ ಡಿಸಿ ಡಾ.ಆರ್.ಸೆಲ್ವಮಣಿ ಹಾಗೂ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಖಡಕ್ ಸೂಚನೆ ರವಾನಿಸಿದ ಬೆನ್ನಲ್ಲೇ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಕಾನೂನುಬಾಹಿರವಾಗಿ ಮರಳು – ಜಲ್ಲಿಕಲ್ಲು ಸಾಗಾಣೆ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಡಿಸಿ – ಎಸ್ಪಿ ಖಡಕ್ ಸೂಚನೆ : ಮರಳು, ಜಲ್ಲಿ ಕಲ್ಲು ಸಾಗಾಣೆ ಲಾರಿಗಳು ವಶ! Read More
ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು, ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ, ಬಸ್ ನಲ್ಲಿದ್ದ 13 ಜನ ಮೃತಪಟ್ಟು 27 ಮಂದಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದ ರಾಯಗಡ ಬಳಿ ಶನಿವಾರ ಮುಂಜಾನೆ ನಡೆದಿದೆ.

ಮಹಾರಾಷ್ಟ್ರದ ರಾಯಗಡ ಬಳಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ : 13 ಮಂದಿ ಸಾವು – 29 ಜನರಿಗೆ ಗಾಯ!

ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು, ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ, ಬಸ್ ನಲ್ಲಿದ್ದ 13 ಜನ ಮೃತಪಟ್ಟು 27 ಮಂದಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದ ರಾಯಗಡ ಬಳಿ ಶನಿವಾರ ಮುಂಜಾನೆ ನಡೆದಿದೆ.

ಮುಂಬಯಿ – ಪುಣೆ ಹಳೇ ಹೆದ್ಧಾರಿಯ, ಖೋಪೊಲಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಂಗ್ರೋಬಾ ದೇವಾಲಯ ಸಮೀಪ ಅವಘಡ ಸಂಭವಿಸಿದೆ. ಸದರಿ ಸ್ಥಳವು ಮುಂಬೈಯಿಂದ 70 ಕಿ.ಮೀ. ದೂರದಲ್ಲಿದೆ. ಪುಣೆಯ ಪಿಂಪ್ರಿ ಚಿಂಚವಾಡದಿಂದ ಮುಂಬೈಗೆ ಬಸ್ ಆಗಮಿಸುತ್ತಿದ್ದ ವೇಳೆ ಈ ಭೀಕರ ಅವಘಡ ಸಂಭವಿಸಿದೆ.

ಮಹಾರಾಷ್ಟ್ರದ ರಾಯಗಡ ಬಳಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ : 13 ಮಂದಿ ಸಾವು – 29 ಜನರಿಗೆ ಗಾಯ! Read More

ಸಾಗರ ವಿಧಾನಸಭಾ ಕ್ಷೇತ್ರ : ಮುಖಂಡ ತೀ.ನಾ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ

ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕರಾದ, ಇತ್ತೀಚೆಗೆ ಕಾಂಗ್ರೆಸ್ ಪಕ್ಷ ತೊರೆದಿದ್ದ ಆ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಸಾಗರ ವಿಧಾನಸಭಾ ಕ್ಷೇತ್ರ : ಮುಖಂಡ ತೀ.ನಾ.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ Read More
ಎನ್.ಆರ್.ಪುರ (ಚಿಕ್ಕಮಗಳೂರು), ಎ. 13: ‘ಮೂಲಸೌಕರ್ಯಗಳ ಕೊರತೆ, ಆಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಖಂಡಿಸಿ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಭೈರಾಪುರ ಗ್ರಾಮದ ಮರಾಠಿ ಕ್ಯಾಂಪ್ ಗ್ರಾಮಸ್ಥರು ತಿಳಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಯಾಗುವ ತಮ್ಮ ಗ್ರಾಮಕ್ಕೆ ಸೂಕ್ತ ಸಂಪರ್ಕ ರಸ್ತೆಯಿಲ್ಲ. ಕುಡಿಯುವ ನೀರಿನ ಪೂರೈಕೆಯಿಲ್ಲ. ಅಂಗನವಾಡಿ ಕೇಂದ್ರವೂ ಇಲ್ಲ. ಮೂರು ಕಿ.ಮೀ. ದೂರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕಾಡಲ್ಲಿ ಪುಟಾಣಿ ಮಕ್ಕಳು ನಡೆದುಕೊಂಡು ಹೋಗಬೇಕು ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಭೈರಾಪುರ ಮರಾಠಿ ಕ್ಯಾಂಪ್ ಗ್ರಾಮಸ್ಥರು!

ಎನ್.ಆರ್.ಪುರ (ಚಿಕ್ಕಮಗಳೂರು), ಎ. 13: ‘ಮೂಲಸೌಕರ್ಯಗಳ ಕೊರತೆ, ಆಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಖಂಡಿಸಿ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಭೈರಾಪುರ ಗ್ರಾಮದ ಮರಾಠಿ ಕ್ಯಾಂಪ್ ಗ್ರಾಮಸ್ಥರು ತಿಳಿಸಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಯಾಗುವ ತಮ್ಮ ಗ್ರಾಮಕ್ಕೆ ಸೂಕ್ತ ಸಂಪರ್ಕ ರಸ್ತೆಯಿಲ್ಲ. ಕುಡಿಯುವ ನೀರಿನ ಪೂರೈಕೆಯಿಲ್ಲ. ಅಂಗನವಾಡಿ ಕೇಂದ್ರವೂ ಇಲ್ಲ. ಮೂರು ಕಿ.ಮೀ. ದೂರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕಾಡಲ್ಲಿ ಪುಟಾಣಿ ಮಕ್ಕಳು ನಡೆದುಕೊಂಡು ಹೋಗಬೇಕು ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಭೈರಾಪುರ ಮರಾಠಿ ಕ್ಯಾಂಪ್ ಗ್ರಾಮಸ್ಥರು! Read More