ಮುಂಗಾರು ಮಳೆ ಕಣ್ಮರೆ : ಕುಡಿಯುವ ನೀರಿಗೂ ಎದುರಾಗಲಿದೆ ಹಾಹಾಕಾರ - ಕೃಷಿ ಕೃಷಿ ಚಟುವಟಿಕೆಯೂ ಏರುಪೇರು!
ಡ್ರೋಣ್ ಕ್ಯಾಮರಾ ಮೂಲಕ ತಪಾಸಣೆ..!
17 ವರ್ಷದ ಬಾಲಕಿಗೆ ಮೇಲೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
ಶಿವಮೊಗ್ಗ, ಜೂ. 6: ‘ದಕ್ಷಿಣ ಆಫ್ರಿಕಾದ ಜೋರ್ಡಾನ್ ದೇಶ ಹಾಗೂ ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 9 ಜನರಲ್ಲಿ ಮಲೇರಿಯಾ ರೋಗ ಪತ್ತೆಯಾಗಿತ್ತು. ಇವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ’ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡುದಪ್ಪ ಕಸಬಿ ಅವರು ತಿಳಿಸಿದ್ದಾರೆ. ‘ದಕ್ಷಿಣ ಆಫ್ರಿಕಾದಲ್ಲಿ ಮಲೇರಿಯಾ ರೋಗ ಹೆಚ್ಚಿದೆ. ಕಳೆದ ಮೇ ತಿಂಗಳಲ್ಲಿ ಜೋರ್ಡಾನ್ ದೇಶದಿಂದ ಹಿಂದಿರುಗಿದ್ದ ಹಕ್ಕಿಪಿಕ್ಕಿ ಸಮುದಾಯದ 106 ಜನರ ಆರೋಗ್ಯ ತಪಾಸಣೆಗೊಳಪಡಿಸಲಾಗಿತ್ತು. ಈ ವೇಳೆ ಮೂವರು ಪುರುಷರಲ್ಲಿ ರೋಗ ಪತ್ತೆಯಾಗಿತ್ತು. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಅವರೆಲ್ಲರೂ ಗುಣಮುಖರಾಗಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಸೂಡಾನ್ ದೇಶ, ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 9 ಜನರಲ್ಲಿ ಮಲೇರಿಯಾ ರೋಗ ಪತ್ತೆ!

ಶಿವಮೊಗ್ಗ, ಜೂ. 6: ‘ದಕ್ಷಿಣ ಆಫ್ರಿಕಾದ ಜೋರ್ಡಾನ್ ದೇಶ ಹಾಗೂ ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 9 ಜನರಲ್ಲಿ ಮಲೇರಿಯಾ ರೋಗ ಪತ್ತೆಯಾಗಿತ್ತು. ಇವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ’ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡುದಪ್ಪ ಕಸಬಿ ಅವರು ತಿಳಿಸಿದ್ದಾರೆ.

‘ದಕ್ಷಿಣ ಆಫ್ರಿಕಾದಲ್ಲಿ ಮಲೇರಿಯಾ ರೋಗ ಹೆಚ್ಚಿದೆ. ಕಳೆದ ಮೇ ತಿಂಗಳಲ್ಲಿ ಜೋರ್ಡಾನ್ ದೇಶದಿಂದ ಹಿಂದಿರುಗಿದ್ದ ಹಕ್ಕಿಪಿಕ್ಕಿ ಸಮುದಾಯದ 106 ಜನರ ಆರೋಗ್ಯ ತಪಾಸಣೆಗೊಳಪಡಿಸಲಾಗಿತ್ತು. ಈ ವೇಳೆ ಮೂವರು ಪುರುಷರಲ್ಲಿ ರೋಗ ಪತ್ತೆಯಾಗಿತ್ತು. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಅವರೆಲ್ಲರೂ ಗುಣಮುಖರಾಗಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಹಾಗೆಯೇ ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿಯೂ ಮಲೇರಿಯಾ ರೋಗ ವ್ಯಾಪಕವಾಗಿದೆ. ಈ ಕಾರಣದಿಂದ ವಿಧಾನಸಭೆ ಚುನಾವಣೆ ವೇಳೆ ಭದ್ರತಾ ಕಾರ್ಯಕ್ಕೆ ಆಗಮಿಸಿದ್ದ ಸಿ.ಆರ್.ಪಿ.ಎಫ್ ಸಿಬ್ಬಂದಿಗಳ ಆರೋಗ್ಯ ತಪಾಸಣೆ ಮಾಡಲಾಗಿತ್ತು. ನಾಲ್ವರಲ್ಲಿ ರೋಗ ಪತ್ತೆಯಾಗಿತ್ತು.

ಸೂಡಾನ್ ದೇಶ, ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 9 ಜನರಲ್ಲಿ ಮಲೇರಿಯಾ ರೋಗ ಪತ್ತೆ! Read More

ಬಾರ್ ಕ್ಯಾಷಿಯರ್ ಹತ್ಯೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು..!

ಶಿವಮೊಗ್ಗ, ಜೂ. 5: ಶಿವಮೊಗ್ಗ ತಾಲೂಕು ಆಯನೂರು ಬಾರ್ ಕ್ಯಾಷಿಯರ್ ನನ್ನು ಪೊಲೀಸರ ಸಮ್ಮುಖದಲ್ಲಿಯೇ ಹತ್ಯೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಲ್ಲಿ, ಓರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸೋಮವಾರ ನಡೆದಿದೆ.

ಬಾರ್ ಕ್ಯಾಷಿಯರ್ ಹತ್ಯೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು..! Read More
ಶಿವಮೊಗ್ಗ, ಜೂ. 5: ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್ ಅವರನ್ನು, ಬೆಂಗಳೂರಿನ ವಾರ್ತಾ ಇಲಾಖೆಯ ಕೇಂದ್ರ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ. ಶಫಿ ಸಾದುದ್ದೀನ್ ಅವರು ಕಳೆದ 6 ವರ್ಷಗಳಿಂದ ಶಿವಮೊಗ್ಗದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಸರಳ, ಸಜ್ಜನ, ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದರು. ಯಾವುದೇ ಗೊಂದಲ, ಗಡಿಬಿಡಿಗೆ ಆಸ್ಪದವಾಗದಂತೆ ತಮ್ಮ ಕರ್ತವ್ಯ ನಿರ್ವಹಣೆ ಮಾಡಿಕೊಂಡು ಬಂದಿದ್ದರು.

ಶಿವಮೊಗ್ಗ ಜಿಲ್ಲಾ ವಾರ್ತಾ – ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ಧೀನ್ ವರ್ಗಾವಣೆ

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್ ಅವರನ್ನು, ಬೆಂಗಳೂರಿನ ವಾರ್ತಾ ಇಲಾಖೆಯ ಕೇಂದ್ರ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ.

ಶಫಿ ಸಾದುದ್ದೀನ್ ಅವರು ಕಳೆದ 6 ವರ್ಷಗಳಿಂದ ಶಿವಮೊಗ್ಗದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಸರಳ, ಸಜ್ಜನ, ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದರು. ಯಾವುದೇ ಗೊಂದಲ, ಗಡಿಬಿಡಿಗೆ ಆಸ್ಪದವಾಗದಂತೆ ತಮ್ಮ ಕರ್ತವ್ಯ ನಿರ್ವಹಣೆ ಮಾಡಿಕೊಂಡು ಬಂದಿದ್ದರು.

ಶಿವಮೊಗ್ಗ ಜಿಲ್ಲಾ ವಾರ್ತಾ – ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ಧೀನ್ ವರ್ಗಾವಣೆ Read More
ಮದ್ಯ ಸೇವನೆಗೆ ಆಗಮಿಸಿದ್ದ ಯುವಕರ ತಂಡವೊಂದು, ಪೊಲೀಸರ ಸಮ್ಮುಖದಲ್ಲಿಯೇ ಬಾರ್ ವೊಂದರ ಕ್ಯಾಷಿಯರ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಚಿನ್ (27) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಯನೂರು ತಾಂಡಾದ ನಿವಾಸಿಗಳಾದ ನಿರಂಜನ, ಸತೀಶ್ ಹಾಗೂ ಅಶೋಕ ನಾಯ್ಕ್ ಆರೋಪಿಗಳೆಂದು ಗುರುತಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಾರ್ ಕ್ಯಾಷಿಯರ್ ಕೊಲೆ ಮಾಡಿದ ಮದ್ಯ ಸೇವನೆಗೆ ಆಗಮಿಸಿದ್ದ ಯುವಕರು!

ಶಿವಮೊಗ್ಗ, ಜೂ. 5: ಮದ್ಯ ಸೇವನೆಗೆ ಆಗಮಿಸಿದ್ದ ಯುವಕರ ತಂಡವೊಂದು, ಪೊಲೀಸರ ಸಮ್ಮುಖದಲ್ಲಿಯೇ ಬಾರ್ ವೊಂದರ ಕ್ಯಾಷಿಯರ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ  ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಸಚಿನ್ (27) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಯನೂರು ತಾಂಡಾದ ನಿವಾಸಿಗಳಾದ ನಿರಂಜನ, ಸತೀಶ್ ಹಾಗೂ ಅಶೋಕ ನಾಯ್ಕ್ ಆರೋಪಿಗಳೆಂದು ಗುರುತಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಾರ್ ಕ್ಯಾಷಿಯರ್ ಕೊಲೆ ಮಾಡಿದ ಮದ್ಯ ಸೇವನೆಗೆ ಆಗಮಿಸಿದ್ದ ಯುವಕರು! Read More
ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ. ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ತಪಾಸಣಾ ಕಾರ್ಯ ನಡೆದಿದೆ. ಕಾರಾಗೃಹದಲ್ಲಿನ ಪ್ರತಿಯೊಂದು ಬ್ಯಾರಕ್ ನ್ನು ತಂಡ ಶೋಧ ನಡೆಸಿದೆ. ಈ ವೇಳೆ ಪೊಲೀಸರಿಗೆ ಯಾವುದೇ ನಿಷೇಧಿತ ವಸ್ತುಗಳು ದೊರಕಿಲ್ಲ ಎಂದು ಮಹಿಳಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಹೇಮಾವತಿ ಜಿ ಅವರು ತಿಳಿಸಿದ್ದಾರೆ.

ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ : ಯಾವುದೇ ನಿಷೇಧಿತ ವಸ್ತುಗಳು ಸಿಕ್ಕಿಲ್ಲ : ಜೈಲ್ ಅಧೀಕ್ಷಕರ ಮಾಹಿತಿ

ಶಿವಮೊಗ್ಗ, ಜೂ. 3: ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ.

ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ತಪಾಸಣಾ ಕಾರ್ಯ ನಡೆದಿದೆ. ಕಾರಾಗೃಹದಲ್ಲಿನ ಪ್ರತಿಯೊಂದು ಬ್ಯಾರಕ್ ನ್ನು ತಂಡ ಶೋಧ ನಡೆಸಿದೆ. ಈ ವೇಳೆ ಪೊಲೀಸರಿಗೆ ಯಾವುದೇ ನಿಷೇಧಿತ ವಸ್ತುಗಳು ದೊರಕಿಲ್ಲ ಎಂದು ಮಹಿಳಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಹೇಮಾವತಿ ಜಿ ಅವರು ತಿಳಿಸಿದ್ದಾರೆ.

ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ : ಯಾವುದೇ ನಿಷೇಧಿತ ವಸ್ತುಗಳು ಸಿಕ್ಕಿಲ್ಲ : ಜೈಲ್ ಅಧೀಕ್ಷಕರ ಮಾಹಿತಿ Read More
ಬಾಲಸೋರ್ (ಒರಿಸ್ಸಾ): ದೇಶದ ರೈಲ್ವೆ ಇತಿಹಾಸದಲ್ಲಿಯೇ ಭೀಕರ ಅಪಘಾತಗಳಲ್ಲಿ ಒಂದಾದ, ಒಡಿಶಾ ರಾಜ್ಯದ ಬಾಲಸೋರ್ ನ ಬಹನಾಗಾ ಬಜಾರ್ ರೈಲ್ವೆ ನಿಲ್ದಾಣದಲ್ಲಿ ಜೂ. 2 ರ ರಾತ್ರಿ ನಡೆದ ಮೂರು ರೈಲುಗಳ ಅವಘಡ, ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ! ಈ ಘನಘೋರ ದುರಂತದಲ್ಲಿಇಲ್ಲಿಯವರೆಗೂ 261 ಕ್ಕೂ ಅಧಿಕ ಪ್ರಯಾಣಿಕರು ಮೃತಪಟ್ಟಿರುವ ವರದಿಗಳು ಬಂದಿವೆ. ಜೊತೆಗೆ ಸುಮಾರು 900 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಸಾವು-ನೋವಿನ ಅಧಿಕೃತ ವರದಿಗಳು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.

ಒರಿಸ್ಸಾ : ಭೀಕರ ರೈಲು ದುರಂತ – ಏರುತ್ತಿದೆ ಸಾವಿನ ಸಂಖ್ಯೆ!

ಬಾಲಸೋರ್ (ಒರಿಸ್ಸಾ): ದೇಶದ ರೈಲ್ವೆ ಇತಿಹಾಸದಲ್ಲಿಯೇ ಭೀಕರ ಅಪಘಾತಗಳಲ್ಲಿ ಒಂದಾದ, ಒಡಿಶಾ ರಾಜ್ಯದ ಬಾಲಸೋರ್ ನ ಬಹನಾಗಾ ಬಜಾರ್ ರೈಲ್ವೆ ನಿಲ್ದಾಣದಲ್ಲಿ ಜೂ. 2 ರ ರಾತ್ರಿ ನಡೆದ ಮೂರು ರೈಲುಗಳ ಅವಘಡ, ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ!

ಈ ಘನಘೋರ ದುರಂತದಲ್ಲಿ ಇಲ್ಲಿಯವರೆಗೂ 261 ಕ್ಕೂ ಅಧಿಕ ಪ್ರಯಾಣಿಕರು ಮೃತಪಟ್ಟಿರುವ ವರದಿಗಳು ಬಂದಿವೆ. ಜೊತೆಗೆ ಸುಮಾರು 900 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.  ಸಾವು-ನೋವಿನ ಅಧಿಕೃತ ವರದಿಗಳು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.

ಗಾಯಾಳುಗಳನ್ನು ಬಾಲಸೋರ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ಪ್ರಯಾಣಿಕರ ಸ್ಥಿತಿ ಗಂಭೀರ ಸ್ವರೂಪದಲ್ಲಿದೆ. ಮತ್ತೊಂದೆಡೆ, ಅವಘಡ ಸಂಭವಿಸಿದ ಸ್ಥಳದಲ್ಲಿ ನಡೆಸಲಾಗುತ್ತಿದ್ದ ರಕ್ಷಣಾ ಕಾರ್ಯಾಚರಣೆ ಅಂತ್ಯಗೊಂಡಿದೆ. ವಿವಿಧ ಘಟಕಗಳ ನೂರಾರು ರಕ್ಷಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಒರಿಸ್ಸಾ : ಭೀಕರ ರೈಲು ದುರಂತ – ಏರುತ್ತಿದೆ ಸಾವಿನ ಸಂಖ್ಯೆ! Read More