ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಮೇ 30: 2023-24 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಹಾಗೂ ವಿದ್ಯಾರ್ಹತೆಗಳನ್ವಯ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರವಾಗಿ ಆಯಾ ವಸತಿ ಶಾಲೆಗೆ ಜೂ.05 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ ಸರ್ಕಾರದಿಂದ ರೂ.16650/- ನಿಗದಿಯಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಹಾಗೂ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಚೇರಿ ವೇಳೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ Read More

ಬಿರುಗಾಳಿ ಮಳೆ – ಸಿಡಿಲು ಬಡಿದು ಮಹಿಳೆ ಸಾವು!

ಶಿವಮೊಗ್ಗ ನಗರದಲ್ಲಿ ಸೋಮವಾರ ಸಂಜೆ ಬಿರುಗಾಳಿ, ಗುಡುಗು ಸಹಿತ ಬಿದ್ದ ಭಾರೀ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಹಾಗೆಯೇ ನಗರದ ವಿವಿಧೆಡೆ ಸಾರ್ವಜನಿಕ ಆಸ್ತಿಪಾಸ್ತಿಗೆ ಧಕ್ಕೆಯಾದ ವರದಿಗಳು ಬಂದಿವೆ.
ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಲಕ್ಷ್ಮೀಬಾಯಿ (28) ಎಂಬ ಮಹಿಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಕುರಿಗಳಿಗೆ ಮೇವು ತರಲು ಮನೆಯಿಂದ ಹೊರಹೊದ ವೇಳೆ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

ಬಿರುಗಾಳಿ ಮಳೆ – ಸಿಡಿಲು ಬಡಿದು ಮಹಿಳೆ ಸಾವು! Read More
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯು ಎನ್‌ವಿಎಸ್-01  ನ್ಯಾವಿಗೇಶನ್ (ದಿಕ್ಸೂಚಿ – ಪಥದರ್ಶಕ) ಉಪಗ್ರಹ ವನ್ನು ಮೇ 29 ರ ಸೋಮವಾರ ಬೆಳಿಗ್ಗೆ10.42 ಕ್ಕೆ ಆಂಧ್ರಪ್ರದೇಶದ ಶೀಹರಿಕೊಟಾ ದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹ ಉಡಾವಣೆ ಮೂಲಕ ಇಸ್ರೋ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಉಪಗ್ರಹವು 12 ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದೆ.

ಇಸ್ರೋದಿಂದ ‘ಎನ್‌ವಿಎಸ್‌–01’ ನ್ಯಾವಿಗೇಶನ್ ಉಪಗ್ರಹ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯು ಎನ್‌ವಿಎಸ್-01  ನ್ಯಾವಿಗೇಶನ್ (ದಿಕ್ಸೂಚಿ – ಪಥದರ್ಶಕ) ಉಪಗ್ರಹ ವನ್ನು ಮೇ 29 ರ ಸೋಮವಾರ ಬೆಳಿಗ್ಗೆ10.42 ಕ್ಕೆ ಆಂಧ್ರಪ್ರದೇಶದ ಶೀಹರಿಕೊಟಾ ದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹ ಉಡಾವಣೆ ಮೂಲಕ ಇಸ್ರೋ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಉಪಗ್ರಹವು 12 ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದೆ.

ಇಸ್ರೋದಿಂದ ‘ಎನ್‌ವಿಎಸ್‌–01’ ನ್ಯಾವಿಗೇಶನ್ ಉಪಗ್ರಹ ಯಶಸ್ವಿ ಉಡಾವಣೆ Read More
ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ

ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ, ಮೇ 29:  ಶಿವಮೊಗ್ಗ ಜಿಲ್ಲಾ #ಉದ್ಯೋಗ ವಿನಿಮಯ ಕಚೇರಿವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ  ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ …

ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ Read More
ಬೆಂಗಳೂರು/ಶಿವಮೊಗ್ಗ, ಮೇ 29: ಸರ್ಕಾರದ 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ, ಮೇ 31 ರ ಬುಧವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಮೇ 29 ರಿಂದಲೇ ಶಾಲೆಗಳ ಆರಂಭದ ಪೂರ್ವಭಾವಿ ಸಿದ್ದತೆಗಳು ನಡೆಯಲಾರಂಭಿಸಿವೆ. ‘ಮೇ 31 ರಂದು ಮಕ್ಕಳಿಗೆ ಸಿಹಿ ವಿತರಣೆ ಮಾಡುವ ಮೂಲಕ ಶಾಲೆಗಳಿಗೆ ಬರ ಮಾಡಿಕೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಮೇ 31 ರಿಂದ ಶಾಲೆಗಳು ಆರಂಭ : ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಸ್ವಾಗತ –  ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು/ಶಿವಮೊಗ್ಗ, ಮೇ 29: ಸರ್ಕಾರದ 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ, ಮೇ 31 ರ ಬುಧವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಮೇ 29 ರಿಂದಲೇ ಶಾಲೆಗಳ ಆರಂಭದ ಪೂರ್ವಭಾವಿ ಸಿದ್ದತೆಗಳು ನಡೆಯಲಾರಂಭಿಸಿವೆ.

‘ಮೇ 31 ರಂದು ಮಕ್ಕಳಿಗೆ ಸಿಹಿ ವಿತರಣೆ ಮಾಡುವ ಮೂಲಕ ಶಾಲೆಗಳಿಗೆ ಬರ ಮಾಡಿಕೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಶಿಕ್ಷಣ ಸಚಿವರಾಗಿ ನಿಯೋಜನೆ ಮಾಡಲಾಗಿರುವ ಕುರಿತಂತೆ ಸೋಮವಾರ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುತ್ತಿದ್ದಂತೆ, ಮಧು ಬಂಗಾರಪ್ಪರವರು ತಮ್ಮ ಫೇಸ್’ಬುಕ್ ಖಾತೆಯಲ್ಲಿ ಶಾಲೆಗಳ ಕಾರ್ಯಾರಂಭದ ಬಗ್ಗೆ ಹಾಕಿರುವ ಮೊದಲ ಸಂದೇಶದಲ್ಲಿ ಈ ವಿಷಯ ತಿಳಿಸಿದ್ದಾರೆ.

ಮೇ 31 ರಿಂದ ಶಾಲೆಗಳು ಆರಂಭ : ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಸ್ವಾಗತ –  ಶಿಕ್ಷಣ ಸಚಿವ ಮಧು ಬಂಗಾರಪ್ಪ Read More
ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು. ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ. ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..!

ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು.

ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..! Read More
‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಮೇ 26: ‘ಮಲೆನಾಡು ಭಾಗದಲ್ಲಿ ಮೊಬೈಲ್ ಫೋನ್ ಹಾಗೂ ಇಂಟರ್ನೆಟ್ ಸಂಪರ್ಕ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4 ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಅನುಮತಿ’ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಈ ಕುರಿತಂತೆ ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ತಾಲೂಕಿಗೆ 89, ಹೊಸನಗರಕ್ಕೆ 35, ತೀರ್ಥಹಳ್ಳಿಗೆ 27, ಶಿವಮೊಗ್ಗಕ್ಕೆ 18, ಶಿಕಾರಿಪುರಕ್ಕೆ 13, ಭದ್ರಾವತಿ ಹಾಗೂ ಸೊರಬ ತಾಲೂಕಿಗೆ ತಲಾ 8 ಮತ್ತು ಬೈಂದೂರು ಕ್ಷೇತ್ರಕ್ಕೆ 25 ಟವರ್ ಗಳು ಮಂಜೂರಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 225 ಮೊಬೈಲ್ ಟವರ್ ಮಂಜೂರು’ : ಸಂಸದ ಬಿ.ವೈ.ರಾಘವೇಂದ್ರ Read More
ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ! ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.!

ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ!

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ!

ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.!

ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ! Read More
ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ!

ಶಿವಮೊಗ್ಗ, ಮೇ.24 : ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು.

ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ! Read More
ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಶಿವಮೊಗ್ಗ : ಸೋಗಾನೆ, ಬಿದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ, ಮೇ.19: ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110  ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8  ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಶಿವಮೊಗ್ಗ : ಸೋಗಾನೆ, ಬಿದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ! Read More