ಇನ್ಸ್ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ! ಶಿವಮೊಗ್ಗ, ಆ. 16: ದೊಡ್ಡವನಾದ ಮೇಲೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಅದಮ್ಯ ಆಸೆ ಹೊಂದಿದ್ದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 8 ವರ್ಷದ ಬಾಲಕನ ಕೋರಿಕೆಯನ್ನು, ಶಿವಮೊಗ್ಗ ಪೊಲೀಸ್ ಇಲಾಖೆ ಈಡೇರಿಸಿದೆ..! ಪುಟಾಣಿಯ ಆಸೆಯಂತೆ ಆತನನ್ನು ಪೊಲೀಸ್ ಠಾಣೆಗೆ ಕರೆಯಿಸಿ, ಪೊಲೀಸ್ ಅಧಿಕಾರಿಯಾಗುವ ಅವಕಾಶ ಕಲ್ಪಿಸಿದೆ. ಈ ಮೂಲಕ ಬಾಲಕನ ಬದುಕಿಗೆ ಹೊಸ ಚೈತನ್ಯ ತುಂಬುವ ಹೃದಯ ಸ್ಪರ್ಶಿ ಕಾರ್ಯ ನಡೆಸಿದೆ. ಹೌದು. ಮೂಲತಃ ಶಿವಮೊಗ್ಗದವರಾದ ಪ್ರಸ್ತುತ ಬಾಳೆಹೊನ್ನೂರಿನಲ್ಲಿ ನೆಲೆಸಿರುವ ತಬ್ರೇಜ್ ಖಾನ್ ಎಂಬುವರ ಪುತ್ರ ಆಜಾನ್ ಖಾನ್ ಪೊಲೀಸ್ ಅಧಿಕಾರಿಯಾಗಿ ಕಾರ್ಯಾಭಾರ ನಿರ್ವಹಿಸಿದ ಪುಟಾಣಿಯಾಗಿದ್ದಾನೆ. ಬುಧವಾರ ಸಂಜೆ ದೊಡ್ಡಪೇಟೆ ಪೊಲೀಸ್ ಠಾಣೆಗೆ ಪೊಲೀಸ್ ಅಧಿಕಾರಿ ಬಟ್ಟೆ ತೊಟ್ಟು ಆಗಮಿಸಿದ ಬಾಲಕನನ್ನು ಸ್ವತಃ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಠಾಣೆ ಮುಂಭಾಗ ಆತ್ಮೀಯ ಸ್ವಾಗತ ನೀಡಿದರು. ಠಾಣೆಯ ಇನ್ಸ್’ಪೆಕ್ಟರ್ ಕುರ್ಚಿಯಲ್ಲಿ ಕುಳಿತ ಆಜಾನ್ ಖಾನ್ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳಿಗೆ ಕೆಲಸ ಕಾರ್ಯಗಳ ಕುರಿತಂತೆ ಸಲಹೆ ಸೂಚನೆ ನೀಡಿದ. ಪೊಲೀಸ್ ಅಧಿಕಾರಿಯಾಗುವ ತನ್ನ ಆಸೆ ಈಡೇರಿದ್ದಕ್ಕೆ ಬಾಲಕ ಸಂತಸಗೊಂಡಿದ್ದ. ನಗುನಗುತ್ತಲೆ ತನ್ನ ಸಂತಸ ಹಂಚಿಕೊಂಡ.

ಇನ್ಸ್‌ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ!

ಶಿವಮೊಗ್ಗ, ಆ. 16: ದೊಡ್ಡವನಾದ ಮೇಲೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಅದಮ್ಯ ಆಸೆ ಹೊಂದಿದ್ದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 8 ವರ್ಷದ ಬಾಲಕನ ಕೋರಿಕೆಯನ್ನು, ಶಿವಮೊಗ್ಗ ಪೊಲೀಸ್ ಇಲಾಖೆ ಈಡೇರಿಸಿದೆ..! ಪುಟಾಣಿಯ ಆಸೆಯಂತೆ ಆತನನ್ನು ಪೊಲೀಸ್ ಠಾಣೆಗೆ ಕರೆಯಿಸಿ, ಪೊಲೀಸ್ ಅಧಿಕಾರಿಯಾಗುವ …

ಇನ್ಸ್‌ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ! Read More
ಆ. 27 ರಂದು ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭ : ಶಿವಮೊಗ್ಗ ಡಿಸಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ

ಆ. 27 ರಂದು ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭ : ಶಿವಮೊಗ್ಗ ಡಿಸಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ

ಶಿವಮೊಗ್ಗ, ಆ. 16: ‘ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಆ.27 ರಂದು ಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಚಾಲನೆ ನೀಡುತ್ತಿದ್ದು, ಜಿಲ್ಲೆಯ ಎಲ್ಲ ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಅಗತ್ಯ ಸಿದ್ದತೆ  ಮಾಡಿಕೊಳ್ಳುವಂತೆ’ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್  ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆ. 27 ರಂದು ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭ : ಶಿವಮೊಗ್ಗ ಡಿಸಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ Read More
ಶಿವಮೊಗ್ಗ : ಅಂತಿಮ ಹಂತಕ್ಕೆರೈಲ್ವೆ ಫ್ಲೈ ಓವರ್ ಕಾಮಗಾರಿ

ಶಿವಮೊಗ್ಗ – ಅಂತಿಮ ಹಂತಕ್ಕೆ ಫ್ಲೈ ಓವರ್ ಕಾಮಗಾರಿ : ಉದ್ಘಾಟನೆ ಯಾವಾಗ..?

ಶಿವಮೊಗ್ಗ, ಆ. 16: ಶಿವಮೊಗ್ಗ ನಗರದ ಹೊರವಲಯ ಕಾಶೀಪುರ ರೈಲ್ವೆ ಗೇಟ್ ಬಳಿ ನಿರ್ಮಿಸಲಾಗುತ್ತಿರುವ, ರೈಲ್ವೆ ಫ್ಲೈ ಓವರ್ (ಮೇಲ್ಸೇತುವೆ) ಕಾಮಗಾರಿ ಅಂತೂ ಇಂತೂ ಕೊನೆಗೂ ಅಂತಿಮ ಹಂತಕ್ಕೆ ಬರಲಾರಂಭಿಸಿದೆ. ಸದ್ಯ ಡಾಂಬರೀಕರಣ ಕಾಮಗಾರಿಗೆ ಚಾಲನೆ ದೊರಕಿದೆ.

ಶಿವಮೊಗ್ಗ – ಅಂತಿಮ ಹಂತಕ್ಕೆ ಫ್ಲೈ ಓವರ್ ಕಾಮಗಾರಿ : ಉದ್ಘಾಟನೆ ಯಾವಾಗ..? Read More

ಶಿವಮೊಗ್ಗದ ಮೊದಲ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣ – ವಾಹನಗಳ ಸಂಚಾರಕ್ಕೆ ಮುಕ್ತ!

ಶಿವಮೊಗ್ಗ, ಆ. 15: ಶಿವಮೊಗ್ಗ ನಗರದ ವೀರಣ್ಣನ ಲೇಔಟ್ ಬಳಿ ರೈಲ್ವೆ ಇಲಾಖೆ ನಿರ್ಮಿಸುತ್ತಿದ್ದ ಅಂಡರ್ ಪಾಸ್ (ಕೆಳ ಸೇತುವೆ) ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಈಗಾಗಲೇ ವಾಹನಗಳ ಸಂಚಾರ ಆರಂಭವಾಗಿದೆ.

ಶಿವಮೊಗ್ಗದ ಮೊದಲ ರೈಲ್ವೆ ಅಂಡರ್ ಪಾಸ್ ಕಾಮಗಾರಿ ಪೂರ್ಣ – ವಾಹನಗಳ ಸಂಚಾರಕ್ಕೆ ಮುಕ್ತ! Read More
ಶಿವಮೊಗ್ಗ ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ

‘ಹೋರಾಟಗಾರರ ತ್ಯಾಗದ ಫಲದಿಂದ ಸ್ವಾತಂತ್ರ್ಯ’ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದ ನಂತರ, ಸಾರ್ವಜನಿಕರನ್ನುದ್ದೇಶಿಸಿ ಅವರು ತಮ್ಮ ಸಂದೇಶ ನೀಡಿದರು.

‘ಹೋರಾಟಗಾರರ ತ್ಯಾಗದ ಫಲದಿಂದ ಸ್ವಾತಂತ್ರ್ಯ’ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ Read More
ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಜಾನುವಾರುಗಳ ಕಳವು..! *ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!!

ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಜಾನುವಾರುಗಳ ಕಳವು!

ಶಿವಮೊಗ್ಗ, ಆ. 14: ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿದ ಕಳ್ಳರ ತಂಡವೊಂದು, ರಸ್ತೆಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಳವು ಮಾಡಿ ಕೊಂಡೊಯ್ದ ಘಟನೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ.

ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಜಾನುವಾರುಗಳ ಕಳವು! Read More
ನಿರ್ಜನ ಪ್ರದೇಶದಲ್ಲಿ ನೀರಿನ ಗುಂಡಿಗೆ ಬಿದ್ದಿದ್ದ ಎಮ್ಮೆಗಳ ರಕ್ಷಣೆ!

ನಿರ್ಜನ ಪ್ರದೇಶದಲ್ಲಿ ನೀರಿನ ಗುಂಡಿಗೆ ಬಿದ್ದಿದ್ದ ಎಮ್ಮೆಗಳ ರಕ್ಷಣೆ!

ಶಿವಮೊಗ್ಗ, ಆ. 14: ಶಿವಮೊಗ್ಗ ನಗರದ ಹೊರವಲಯ ಸೋಮಿನಕೊಪ್ಪದ ನಿರ್ಜನ ಪ್ರದೇಶದಲ್ಲಿ ಕಳೆದ ಮೂರು ದಿನಗಳ ಹಿಂದೆ ನೀರಿನ ಗುಂಡಿಯೊಂದಕ್ಕೆ ಬಿದ್ದು, ಹೊರಬರಲಾಗದೆ ಸಂಕಷ್ಟ ಪಡುತ್ತಿದ್ದ ಎರಡು ಎಮ್ಮೆಗಳನ್ನು ಭಾನುವಾರ ರಕ್ಷಿಸಿದ ಘಟನೆ ನಡೆದಿದೆ.

ನಿರ್ಜನ ಪ್ರದೇಶದಲ್ಲಿ ನೀರಿನ ಗುಂಡಿಗೆ ಬಿದ್ದಿದ್ದ ಎಮ್ಮೆಗಳ ರಕ್ಷಣೆ! Read More
ಪೊಲೀಸ್ ಇಲಾಖೆಯಿಂದ ಜನ ಸಂಪರ್ಕ ಸಭೆ

‘ನಯ ವಂಚಕರ ಮಾತು ನಂಬಿ ಹಣ ಕಳೆದುಕೊಳ್ಳಬೇಡಿ’ : ಸಬ್ ಇನ್ಸ್’ಪೆಕ್ಟರ್ ಮಂಜುನಾಥ್

‘ನಯ ವಂಚಕರ ಮಾತು ನಂಬಿ ಕಷ್ಟಪಟ್ಟು ಸಂಪಾದಿಸಿದ ಹಣ ಕಳೆದುಕೊಳ್ಳಬೇಡಿ. ತಮ್ಮ ಪ್ರದೇಶದಲ್ಲಿ ನಡೆಯುವ ಅಪರಾಧ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ’ ಎಂದು ಶಿವಮೊಗ್ಗ ವಿನೋಬನಗರ ಠಾಣೆ ಸಬ್ ಇನ್ಸ್’ಪೆಕ್ಟರ್ ಎನ್. ಮಂಜುನಾಥ್ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

‘ನಯ ವಂಚಕರ ಮಾತು ನಂಬಿ ಹಣ ಕಳೆದುಕೊಳ್ಳಬೇಡಿ’ : ಸಬ್ ಇನ್ಸ್’ಪೆಕ್ಟರ್ ಮಂಜುನಾಥ್ Read More
ಶಿವಮೊಗ್ಗ ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ

ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ

ಶಿವಮೊಗ್ಗ, ಆ. 12: ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದಲ್ಲಿ ಇಂದು ವಿಶ್ವ ಆನೆಗಳ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಿಡಾರದ ಆನೆಗಳನ್ನು ಆಕರ್ಷಕವಾಗಿ ಸಿಂಗರಿಸಿ ಪೂಜಿಸಲಾಯಿತು. ವಿವಿಧ ಶಾಲೆಗಳ ಮಕ್ಕಳಿಂದ ಜಾಥಾ ನಡೆಯಿತು. ಹಾಗೆಯೇ ಆನೆಗಳಿಗೆ ವಿಶೇಷ ಆಹಾರ ನೀಡಲಾಯಿತು. ಆನೆಗಳ ಜೀವನ ಶೈಲಿಯ ಕುರಿತಂತೆ ತಜ್ಞರ ಉಪನ್ಯಾಸಗಳು ಜರುಗಿದವು. ಸಮಾರಂಭದಲ್ಲಿ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಮೊದಲಾದವರಿದ್ದರು.

ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ Read More
ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ

ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ

ಶಿವಮೊಗ್ಗ, ಆ. 11: ಭಾರತ ಸರ್ಕಾರದ ಗೃಹ ಮಂತ್ರಾಲಯದ ಆದೇಶದ ಅನುಸಾರ, ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರ ಧ್ವಜ ಬಳಕೆ ನಿಷೇಧಿಸಲಾಗಿದೆ ಎಂದು ಕರ್ನಾಟ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ Read More