ಮುಂಗಾರು ಮಳೆ ಕೊರತೆ – ಬೀಳಲಾರಂಭಿಸಿದೆ ಬೇಸಿಗೆ ಬಿಸಿಲು : ಬರ ಪೀಡಿತ ಘೋಷಣೆಗೆ ಹೆಚ್ಚಿದ ಒತ್ತಡ!

ಮುಂಗಾರು ಮಳೆ ಕೊರತೆ – ಬೀಳಲಾರಂಭಿಸಿದೆ ಬೇಸಿಗೆ ಬಿಸಿಲು : ಬರ ಘೋಷಣೆಗೆ ಹೆಚ್ಚಿದ ಒತ್ತಡ!

ಶಿವಮೊಗ್ಗ, ಆ. 30: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕಣ್ಣಾಮುಚ್ಚಾಲೆಯಾಟ ಮುಂದುವರಿದಿದೆ. ಜೂನ್ ತಿಂಗಳಲ್ಲಿ ದುರ್ಬಲಗೊಂಡಿದ್ದ ವರ್ಷಧಾರೆಯಿಂದ ಕವಿದಿದ್ದ ಬರ ಸ್ಥಿತಿ, ಜುಲೈ ತಿಂಗಳ ಮಳೆಯಿಂದ ಮರೆಯಾಗಿತ್ತು. ಆದರೆ ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟಿರುವುದರ ಜೊತೆಗೆ, ಬೇಸಿಗೆ ಬಿಸಿಲು ಬೀಳಲಾರಂಭಿಸಿದೆ. ಇದರಿಂದ ಬರದ ಕರಿಛಾಯೆ ಮತ್ತೇ ಆವರಿಸುವಂತಾಗಿದೆ!

ಮುಂಗಾರು ಮಳೆ ಕೊರತೆ – ಬೀಳಲಾರಂಭಿಸಿದೆ ಬೇಸಿಗೆ ಬಿಸಿಲು : ಬರ ಘೋಷಣೆಗೆ ಹೆಚ್ಚಿದ ಒತ್ತಡ! Read More
ಮಹಿಳಾ ಸಬಲೀಕರಣದ ದಿಟ್ಟ ಹೆಜ್ಜೆ - ಗೃಹಲಕ್ಷ್ಮಿ ಯೋಜನೆ

ಮಹಿಳಾ ಸಬಲೀಕರಣದ ದಿಟ್ಟ ಹೆಜ್ಜೆ – ಗೃಹಲಕ್ಷ್ಮಿ ಯೋಜನೆ

ಮಹಿಳಾ ಆರ್ಥಿಕ ಸಬಲೀಕರಣದತ್ತ ದಿಟ್ಟ ಹೆಜ್ಜೆ ಗೃಹಲಕ್ಷ್ಮಿ ಯೋಜನೆಯಾಗಿದೆ. ಕುಟುಂಬ ನಿರ್ವಹಣೆಯಲ್ಲಿ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಆಕೆ ಆರ್ಥಿಕವಾಗಿ ಸಬಲವಾದಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಿಂದ ಕೂಡಿರುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಮನೆ ಯಜಮಾನಿಗೆ ಪ್ರತಿ ತಿಂಗಳು ರೂ.2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು 2023-24 ನೇ ಸಾಲಿನಿಂದ ಜಾರಿಗೆ ತಂದಿದೆ.

ಮಹಿಳಾ ಸಬಲೀಕರಣದ ದಿಟ್ಟ ಹೆಜ್ಜೆ – ಗೃಹಲಕ್ಷ್ಮಿ ಯೋಜನೆ Read More
ಭದ್ರಾವತಿ ತಾಲೂಕು ಮಾವಿನಕೆರೆ ಗ್ರಾಮದಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಗ!

ಭದ್ರಾವತಿ ತಾಲೂಕು ಮಾವಿನಕೆರೆ ಗ್ರಾಮದಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಗ!

ಭದ್ರಾವತಿ, ಆ. 29: ಹೆತ್ತ ತಾಯಿಯನ್ನೇ ಮಗನೋರ್ವ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.

ಸುಲೋಚನಮ್ಮ (57) ಕೊಲೆಗೀಡಾದ ತಾಯಿ ಎಂದು ಗುರುತಿಸಲಾಗಿದೆ. ಅವರ ಪುತ್ರ ಸಂತೋಷ್ (42) ಆರೋಪಿತ ಪುತ್ರನಾಗಿದ್ದಾನೆ.

ಭದ್ರಾವತಿ ತಾಲೂಕು ಮಾವಿನಕೆರೆ ಗ್ರಾಮದಲ್ಲಿ ತಾಯಿಯನ್ನೇ ಕೊಲೆ ಮಾಡಿದ ಮಗ! Read More
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯ ಎನ್.ಆರ್.ಎಂ ಘಟಕ ಕಾರ್ಯಾರಂಭ

ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯ ಎನ್.ಆರ್.ಎಂ ಘಟಕ ಕಾರ್ಯಾರಂಭ

ಭದ್ರಾವತಿ, ಆ. 29: ಒಂದಾನೊಂದು ಕಾಲದಲ್ಲಿ ರಾಷ್ಟ್ರ – ರಾಜ್ಯದ ಪ್ರಮುಖ ಕಾರ್ಖಾನೆಯಾಗಿ ಗುರುತಿಸಿಕೊಂಡಿದ್ದ, ನಷ್ಟದ ಕಾರಣದಿಂದ ಉತ್ಪಾದನೆ ಸ್ಥಗಿತಗೊಳಿಸಿದ್ದ, ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಮತ್ತೆ ಪುನಾರಾರಂಭಗೊಳಿಸುವ ನಿರ್ಧಾರವನ್ನು ಇತ್ತೀಚೆಗೆ ಕೇಂದ್ರದ ಭಾರತೀಯ ಉಕ್ಕು ಪ್ರಾಧಿಕಾರ ಕೈಗೊಂಡಿತ್ತು. ಇದರ ಬೆನ್ನಲ್ಲೇ ಕಾರ್ಖಾನೆಯ ಎನ್.ಆರ್.ಎಂ ಘಟಕ ಸೋಮವಾರದಿಂದ ಕಾರ್ಯಾರಂಭಗೊಂಡಿದೆ. ಇದು ಕಾರ್ಮಿಕರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯ ಎನ್.ಆರ್.ಎಂ ಘಟಕ ಕಾರ್ಯಾರಂಭ Read More
ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ಯುವತಿಯ ರಕ್ಷಿಸಿದ ಪೊಲೀಸರು!

ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ಯುವತಿಯ ರಕ್ಷಿಸಿದ ಪೊಲೀಸರು!

ಶಿವಮೊಗ್ಗ, ಆ. 28: ಗಾಜಿನ ಚೂರಿನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಗಸ್ತಿನಲ್ಲಿದ್ದ ಇ.ಆರ್.ಎಸ್.ಎಸ್ ವಾಹನದ ಸಿಬ್ಬಂದಿಗಳಿಬ್ಬರು ರಕ್ಷಿಸಿ, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದಿದೆ.

17 ವರ್ಷ ವಯೋಮಾನದ ಯುವತಿಯೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ವಿನೋಬನಗರ ಪೊಲೀಸ್ ಠಾಣೆ ಪೇದೆ ರಾಘವೇಂದ್ರ ಹಾಗೂ ವಾಹನ ಚಾಲಕ ಎ.ಹೆಚ್.ಸಿ. ಚನ್ನಕೇಶವ ಸಕಾಲದಲ್ಲಿ ನೆರವಾದ ಪೊಲೀಸ್ ಸಿಬ್ಬಂದಿಗಳಾಗಿದ್ದಾರೆ.

ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ಯುವತಿಯ ರಕ್ಷಿಸಿದ ಪೊಲೀಸರು! Read More
ಬರಿಗಾಲಿನಲ್ಲಿ ಕಚೇರಿಗೆ ಬರುವವರ ಬಗ್ಗೆ ಕಾರಿನಲ್ಲಿ ಓಡಾಡುವ ನಿಮಗೆ ಗೌರವವಿರಲಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬರಿಗಾಲಿನಲ್ಲಿ ಕಚೇರಿಗೆ ಬರುವವರ ಬಗ್ಗೆ ಕಾರಿನಲ್ಲಿ ಓಡಾಡುವ ನಿಮಗೆ ಗೌರವವಿರಲಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮೈಸೂರು ಆ. 28: ಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ , ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ ? ಹಾಗಾದರೆ ನೀವೆಲ್ಲಾ ಯಾಕೆ ಇದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು. 

ಬರಿಗಾಲಿನಲ್ಲಿ ಕಚೇರಿಗೆ ಬರುವವರ ಬಗ್ಗೆ ಕಾರಿನಲ್ಲಿ ಓಡಾಡುವ ನಿಮಗೆ ಗೌರವವಿರಲಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Read More
ಮೋಡ ಬಿತ್ತನೆ ಯಶಸ್ವಿಯಾದ ಉದಾಹರಣೆ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಚಿವ ಸಂಪುಟ ಉಪ ಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ

ಮೈಸೂರು, ಆಗಸ್ಟ್ 28: ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ  ಸಚಿವ ಸಂಪುಟ ಉಪ ಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ, ಸಚಿವ ಸಂಪುಟದಲ್ಲಿ  ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಮೈಸೂರಿನ  ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮೋಡ ಬಿತ್ತನೆ ಇಂದಿನವರೆಗೂ ಎಲ್ಲಿಯೂ ಯಶಸ್ವಿಯಾಗಿಲ್ಲ. ಬರಗಾಲ ಘೋಷಣೆಯಾದ ಮೇಲೆ ಕೇಂದ್ರ ಸರ್ಕಾರದವರಿಗೆ ತಿಳಿಸಲಾಗುವುದು. ಕೇಂದ್ರ ಸರ್ಕಾರದವರು ಪರಿಶೀಲಿಸಿದ ನಂತರ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ನೆರವು ನೀಡುತ್ತಾರೆ ಎಂದರು.  ಬರಗಾಲ ಎಂದು ಘೋಷಣೆಯಾದ ನಂತರ ಆ ತಾಲ್ಲೂಕುಗಳಲ್ಲಿ  ಬರ ಪರಿಹಾರವಾಗಿ  ಜನರಿಗೆ ಕೆಲಸ, ಮುಂತಾದ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು ಎಂದರು.

ಸಚಿವ ಸಂಪುಟ ಉಪ ಸಮಿತಿ ಸಭೆಯ ನಂತರ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ತೀರ್ಮಾನ Read More
ಆ. 31 ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆರಂಭವಾಗಲಿದೆ ಲೋಹದ ಹಕ್ಕಿಗಳ ಕಲರವ!

ಆ. 31 ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆರಂಭವಾಗಲಿದೆ ಲೋಹದ ಹಕ್ಕಿಗಳ ಕಲರವ!

ವಮೊಗ್ಗ, ಆ. 28: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಿಂದ ವಿಮಾನಗಳ ಹಾರಾಟಕ್ಕೆ ಅಧಿಕೃತ ಚಾಲನೆ ದೊರಕಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 9 ಗಂಟೆ 50 ನಿಮಿಷಕ್ಕೆ ಬೆಂಗಳೂರಿನಿಂದ ಹೊರಡಲಿರುವ ವಿಮಾನವು 11 ಗಂಟೆ 5 ನಿಮಿಷಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ.

ಆ. 31 ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆರಂಭವಾಗಲಿದೆ ಲೋಹದ ಹಕ್ಕಿಗಳ ಕಲರವ! Read More
ತೀರ್ಥಹಳ್ಳಿ ಪೊಲೀಸರು, ಸಾರ್ವಜನಿಕರಿಂದ ರಕ್ತದಾನ

ತೀರ್ಥಹಳ್ಳಿ ಪೊಲೀಸರು, ಸಾರ್ವಜನಿಕರಿಂದ ರಕ್ತದಾನ

ತೀರ್ಥಹಳ್ಳಿ, ಆ. 27: ತೀರ್ಥಹಳ್ಳಿ ಪಟ್ಟಣದ ಟೌನ್ ಹಾಲ್ ನಲ್ಲಿ ಭಾನುವಾರ ಶಿವಮೊಗ್ಗದ ಆಶಾ ಜ್ಯೋತಿ ರಕ್ತ ಕೇಂದ್ರದ ಸಂಯುಕ್ತಾಶ್ರಯದಲ್ಲಿ, ಸ್ಥಳೀಯ ಪೊಲೀಸರು ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು.

ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಇನ್ಸ್’ಪೆಕ್ಟರ್ ಅಶ್ವತ್ ಗೌಡ, ಸಬ್ ಇನ್ಸ್’ಪೆಕ್ಟರ್ ಗಳಾದ ನವೀನ್ ಮಠಪತಿ, ಶಿವಾನಂದ್, ಗಾದಿಲಿಂಗಪ್ಪ ಗೌಡರ್ ಅವರು ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು.

ತೀರ್ಥಹಳ್ಳಿ ಪೊಲೀಸರು, ಸಾರ್ವಜನಿಕರಿಂದ ರಕ್ತದಾನ Read More
ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ‘ಸಿಸಿ ಕ್ಯಾಮರಾ’ ಆಧಾರಿತ ದಂಡ!

ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ‘ಸಿಸಿ ಕ್ಯಾಮರಾ’ ಆಧಾರಿತ ದಂಡ!

ಶಿವಮೊಗ್ಗ, ಆ. 27: ಶಿವಮೊಗ್ಗದ ಪ್ರಮುಖ ರಸ್ತೆ, ಸರ್ಕಲ್ ಗಳಲ್ಲಿ ಆ. 28 ರಿಂದ ಸಂಚಾರಿ ನಿಯಮ ಉಲ್ಲಂಘನೆಗೆ ಹೈಟೆಕ್ ಸಿಸಿ ಕ್ಯಾಮರಾ ಆಧಾರಿತ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ ದೊರಕಲಿದೆ. ಈ ಹಿನ್ನೆಲೆಯಲ್ಲಿ  ವಾಹನ ಸವಾರರು ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ‘ಸಿಸಿ ಕ್ಯಾಮರಾ’ ಆಧಾರಿತ ದಂಡ! Read More