Arrest of four thieves: Seizure of valuable gold silver cash ಶಿವಮೊಗ್ಗ : ನಾಲ್ವರ ಬಂಧನ - ಲಕ್ಷಾಂತರ ರೂ. ಮೌಲ್ಯದ ಚಿನ್ನ ಬೆಳ್ಳಿ ನಗದು ವಶ

ಶಿವಮೊಗ್ಗ : ನಾಲ್ವರ ಬಂಧನ – ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

Arrest of four thieves: Seizure of valuable gold, silver, cash
ಶಿವಮೊಗ್ಗ : ನಾಲ್ವರ ಬಂಧನ – ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ
ಶಿವಮೊಗ್ಗ, ಡಿ. 20: ವಿವಿಧೆಡೆ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಶಿವಮೊಗ್ಗದ ತುಂಗಾ ನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರಿನ ಪಿರಿಯಾಪಟ್ಟಣ ನಿವಾಸಿ ಸಂತೋಷ ಯಾನೆ ಎಮ್ಮೆ ಸಂತೋಷ (36), ಶಿವಮೊಗ್ಗದ ಅಶೋಕ ನಗರದ ನಿವಾಸಿಗಳಾದ ಮಹಮ್ಮದ್ ನದೀಮ್ ಯಾನೆ ನದ್ದು (30), ಇಮ್ರಾನ್ (32) ಹಾಗೂ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಸುರೇಶ್ ಕೆ (43) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಬಂಧಿತರಿಂದ 12.65 ಲಕ್ಷ ರೂ. ಮೌಲ್ಯದ 230 ಗ್ರಾಂ ತೂಕದ ಬಂಗಾರ, 72 ಸಾವಿರ ರೂ. ಮೌಲ್ಯದ 1 ಕೆಜಿ 200 ಗ್ರಾಂ ತೂಕದ ಬೆಳ್ಳಿ ಆಭರಣಗಳು, 25,140 ನಗದು, ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವೊಂದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳ ಬಂಧನದಿಂದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 5 ಸ್ವತ್ತು ಕಳವು ಪ್ರಕರಣಗಳು ಬೆಳಕಿಗೆ ಬಂದಂತಾಗಿದೆ.
ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಮಂಜುನಾಥ್ ಬಿ, ಸಬ್ ಇನ್ಸ್’ಪೆಕ್ಟರ್ ಗಳಾದ ಶಿವಪ್ರಸಾದ್, ಮಂಜುನಾಥ್ ಪಿ, ರಘುವೀರ್, ಕುಮಾರ ಕೂರಗುಂದ, ದೂದ್ಯನಾಯ್ಕ್,
ಎಎಸ್ಐ ಮನೋಹರ್, ಸಿಬ್ಬಂದಿಗಳಾದ ಕಿರಣ್ ಮೊರೆ, ಅರುಣ್ ಕುಮಾರ್, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ನ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್, ಚೇತನ್ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ : ನಾಲ್ವರ ಬಂಧನ – ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ Read More
Early morning crime of chain thieves in Shimoga: Gold chain stolen from two sides ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ ಅಪಹರಣ!

Early morning misdeeds of chain thieves in Shimoga : two sides stole gold chain – one failed attempt!

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ದುಷ್ಕೃತ್ಯ : ಎರಡು ಕಡೆ ಚಿನ್ನದ ಸರ ಅಪಹರಣ – ಒಂದು ಕಡೆ ವಿಫಲ ಯತ್ನ!

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ ಅಪಹರಣ! Read More
CM meets PM : Rs 18177 crore Appeal for release of drought relief ಪ್ರಧಾನಿ ಭೇಟಿಯಾದ ಸಿಎಂ : 18177 ಕೋಟಿ ರೂ. ಬರ ಪರಿಹಾರ ಬಿಡುಗಡೆಗೆ ಮನವಿ
The state government has announced new guidelines to prevent corona infection ಕೊರೊನಾ ಸೋಂಕು ತಡೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ
Corona mutation: Masks are mandatory for those above 60 years - Health Minister's statement ಕೊರೊನಾ ರೂಪಾಂತರಿ : 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ – ಆರೋಗ್ಯ ಸಚಿವರ ಹೇಳಿಕೆ
Central Karnataka's first mothers' breastmilk bank will be launched in Shimoga on D. 20th ಡಿ. 20 ರಂದು ಶಿವಮೊಗ್ಗದಲ್ಲಿ ಆರಂಭವಾಗಲಿದೆ ಮಧ್ಯ ಕರ್ನಾಟಕದ ಮೊಟ್ಟಮೊದಲ ‘ತಾಯಂದಿರ ಎದೆಹಾಲು ಬ್ಯಾಂಕ್’
If there are cases of corruption we don't just sit and watch : Chief Minister Siddaramaiah ‘ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ’ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ರಾಜಕಾರಣ : ಸಿಎಂ ಆರೋಪ BJP politics in women Atrocity case : CM accused
Kuvempu name for Shimoga airport: Unanimous resolution passed in Legislature ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು : ವಿಧಾನಮಂಡಲದಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ
What is the promise given by CM Siddaramaiah to the delegation led by Sandur MLA E. Tukaram? ಸಂಡೂರು ಶಾಸಕ ಈ.ತುಕಾರಾಮ್ ನೇತೃತ್ವದ ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ನೀಡಿದ ಭರವಸೆಯೇನು?