ಮತದಾನ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಡಿಸಿ – ಸಿಇಓ ಖಡಕ್ ಸೂಚನೆ!
‘ವಿಧಾನಸಭೆ ಚುನಾವಣೆ ಮತದಾನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು, ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚಿಸಿದ್ದಾರೆ.
ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಮತದಾನದ ಸಿದ್ದತೆ ಕುರಿತಂತೆ, ಶನಿವಾರ ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮತದಾನ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಡಿಸಿ – ಸಿಇಓ ಖಡಕ್ ಸೂಚನೆ! Read More
