ಮಲೇರಿಯಾ, ಕ್ಷಯ, ಅನಿಮೀಯ ಮುಕ್ತ ಭಾರತಕ್ಕೆ ಪಣ – ಜಿ.ವಿಜಯಕುಮಾರ್

2025 ಕ್ಕೆ ಮಲೇರಿಯಾ, ಕ್ಷಯ ಹಾಗೂ ಅನಿಮಿಯ ಮುಕ್ತ ಭಾರತಕ್ಕೆ ಸಾರ್ವಜನಿಕರು, ಸಂಘ ಸಂಸ್ಥೆಗಳ ನೆರವು ಅತ್ಯಂತ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್ ಹೇಳಿದರು.
ಶಿವಮೊಗ್ಗ ನಗರದಲ್ಲಿರುವ ಸ್ಕೌಟ್ ಭವನದಲ್ಲಿ ವಿವಿಧ ಪ್ರೌಢಶಾಲೆಯ ಗೈಡ್ಸ್ ಮಕ್ಕಳಿಗೆ ಇಂದು ಆಯೋಜಿಸಿದ್ದ ಉಚಿತ ಆರೋಗ್ಯ ಮಾಹಿತಿ ಹಾಗೂ ಜಂತುಹುಳ ನಿವರಣಾ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅದ್ಭುತ ಯೋಜನೆ ಸಾಕಾರಕ್ಕೆ ಎಲ್ಲರ ಪಾಲ್ಗೊಳ್ಳುವಿಕೆ ಮುಖ್ಯ ಎಂದು ತಿಳಿಸಿದರು.

ಮಲೇರಿಯಾ, ಕ್ಷಯ, ಅನಿಮೀಯ ಮುಕ್ತ ಭಾರತಕ್ಕೆ ಪಣ – ಜಿ.ವಿಜಯಕುಮಾರ್ Read More

ಲೈನ್‌ಮ್ಯಾನ್‌ಗಳಿಗೆ ಜೆಸಿಐ ಶಿವಮೊಗ್ಗ ಭಾವನಾದಿಂದ ಸನ್ಮಾನ

ಶಿವಮೊಗ್ಗ ನಗರದ ಶ್ರೀ ಕೋಟೆ ಮಾರಿಕಾಂಬಾ ದೇವಸ್ಥಾನದ ಸಭಾಭವನದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಸಲ್ಯೂಟ್ ದಿ ಸೈಲೆಂಟ್ ವರ್ಕರ್ ಶೀರ್ಷಿಕೆಯಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆಇಬಿ ಲೈನ್‌ಮ್ಯಾನ್‌ಗಳಿಗೆ ಸನ್ಮಾನಿಸಿ ಮಾತನಾಡಿದರು.

ಲೈನ್‌ಮ್ಯಾನ್‌ಗಳಿಗೆ ಜೆಸಿಐ ಶಿವಮೊಗ್ಗ ಭಾವನಾದಿಂದ ಸನ್ಮಾನ Read More

ದಾವಣಗೆರೆ ಎಸ್ಪಿ ವಿರುದ್ದ ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ!

ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದ ಬಂದೋಬಸ್ತ್ ಗೆ ಆಗಮಿಸಿದ್ದ ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್ ಅವರು, ಪತ್ರಕರ್ತರೋರ್ವರೊಂದಿಗೆ ಅತೀರೇಕದಿಂದ ವರ್ತಿಸಿರುವುದು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ಆಕ್ರೋಶ ವ್ಯಕ್ತಪಡಿಸಿದೆ.

ದಾವಣಗೆರೆ ಎಸ್ಪಿ ವಿರುದ್ದ ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ! Read More

ತೊಂದರೆಗೆ ಸರ್ಕಾರವೇ ನೇರ ಕಾರಣ  : ಕಾಂಗ್ರೆಸ್ ಮುಖಂಡ ಮಧು ಆಕ್ರೋಶ!

ಸರ್ಕಾರಿ ನೌಕರರ ಮುಷ್ಕರದಿಂದ ಉಂಟಾಗುತ್ತಿರುವ ಸಾರ್ವಜನಿಕರ ತೊಂದರೆಗೆ ಸರ್ಕಾರವೇ ನೇರ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಿ.ಮಧುಕುಮಾರ್ ಕಿಡಿ ಕಾರಿದ್ದಾರೆ.

ತೊಂದರೆಗೆ ಸರ್ಕಾರವೇ ನೇರ ಕಾರಣ  : ಕಾಂಗ್ರೆಸ್ ಮುಖಂಡ ಮಧು ಆಕ್ರೋಶ! Read More

ಗಾಂಜಾ ಸಾಗಾಣೆ : ಮಹಿಳೆಗೆ 4 ವರ್ಷ ಕಠಿಣ ಜೈಲು ಶಿಕ್ಷೆ !

ಗಾಂಜಾ ಸಾಗಾಣೆ ಮಾಡುವ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ಮಹಿಳೆಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರು ತೀರ್ಪು ನೀಡಿದ್ದಾರೆ.

ಗಾಂಜಾ ಸಾಗಾಣೆ : ಮಹಿಳೆಗೆ 4 ವರ್ಷ ಕಠಿಣ ಜೈಲು ಶಿಕ್ಷೆ ! Read More

ಮೀಟರ್ ಅಳವಡಿಸದ ಆಟೋಗಳು ಸೀಜ್!

ಶಿವಮೊಗ್ಗ ನಗರದಲ್ಲಿ ಪ್ಯಾಸೆಂಜರ್ ಆಟೋಗಳು ನಿಯಮಾನುಸಾರ ಮೀಟರ್ ಅಳವಡಿಸಬೇಕು. ಮೀಟರ್ ಅಳವಡಿಸದ ಆಟೋಗಳನ್ನು ವಶಕ್ಕೆ ಪಡೆದು, ಚಾಲಕರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಸಂಚಾರಿ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಜಯಶ್ರೀ ಎಸ್.ಮಾನೆ ಅವರು ಎಚ್ಚರಿಕೆ ನೀಡಿದ್ದಾರೆ.

ಮೀಟರ್ ಅಳವಡಿಸದ ಆಟೋಗಳು ಸೀಜ್! Read More

ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಆರಂಭ

ಮೊಟ್ಟಮೊದಲ ಬಾರಿಗೆ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲ್ಲಿ ಹುಟ್ಟಿನಿಂದಲೇ ಬರುವ ಕಿವುಡುತನಕ್ಕೆ ಅತ್ಯಾಧುನಿಕವಾದ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದೆ.

ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಆರಂಭ Read More

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ!

ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.01 ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯು ಬೆಂಬಲ ವ್ಯಕ್ತಪಡಿಸಿದೆ.

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕಂದಾಯ ಇಲಾಖೆ ನೌಕರರ ಸಂಘ ಬೆಂಬಲ! Read More

ನಗರಾಭಿವೃದ್ದಿ ಪ್ರಾಧಿಕಾರದ ಅಧೀನದ ಬಡಾವಣೆಗಳಲ್ಲಿ ಮನೆ ನಿರ್ಮಾಣಕ್ಕೆ ಸಿಗದ ಲೈಸೈನ್ಸ್!

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಬಡಾವಣೆಗಳಲ್ಲಿ ನಿವೇಶನ ಹೊಂದಿರುವವರು ಮನೆ ಕಟ್ಟಲು ಪರವಾನಿಗೆ ಸಿಗದೆ, ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತಾಗಿದೆ ಎಂದು ಶಿವಮೊಗ್ಗ ನಗರ ಕಾಂಗ್ರೆಸ್ ಸಮಿತಿ ಆರೋಪಿಸಿದೆ.

ನಗರಾಭಿವೃದ್ದಿ ಪ್ರಾಧಿಕಾರದ ಅಧೀನದ ಬಡಾವಣೆಗಳಲ್ಲಿ ಮನೆ ನಿರ್ಮಾಣಕ್ಕೆ ಸಿಗದ ಲೈಸೈನ್ಸ್! Read More

ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ : ಬೇಡಿಕೆ ಈಡೇರಿಕೆಯ ಭರವಸೆ ನೀಡಿದ ಮುಖ್ಯಮಂತ್ರಿ

ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯಾದ್ಯಂತ ಮಾರ್ಚ್ 1 ರಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆ ಈಡೇರುವವರೆಗೂ ಕಚೇರಿಗೆ ಸರ್ಕಾರಿ ನೌಕರರು ಆಗಮಿಸುವುದಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೌಕರರ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಜೊತೆಗೆ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ಈಗಾಗಲೇ 7 ನೇ ವೇತನ ಆಯೋಗ ರಚಿಸಲಾಗಿದೆ. 2023-24 ರಲ್ಲಿಯೇ ಶಿಫಾರಸ್ಸು ಜಾರಿಗೊಳಿಸಲಾಗುವುದು ಎಂದು ವಿಧಾನಸಭೆಯಲ್ಲಿಯೇ ಸ್ಪಷ್ಟಪಡಿಸಲಾಗಿದೆ. ಇದಕ್ಕಾಗಿ ಬಜೆಟ್ ನಲ್ಲಿ ಹಣ ಕೂಡ ಮೀಸಲಿರಿಸಲಾಗಿದೆ.
ಆದರೆ ಮಧ್ಯಂತರ ವರದಿ ಪಡೆದು ಶಿಫಾರಸ್ಸು ಅನುಷ್ಠಾನಗೊಳಿಸುವಂತೆ ನೌಕರರ ಸಂಘದವರು ಬೇಡಿಕೆ ಮುಂದಿಟ್ಟಿದ್ಧಾರೆ. ಅದಕ್ಕೂ ಕೂಡ ಒಪ್ಪಿಕೊಳ್ಳಲಾಗಿದೆ. ಅದರಂತೆ ಆಯೋಗದ ಜೊತೆ ಸಮಾಲೋಚಿಸಿ, ಮಧ್ಯಂತರ ವರದಿ ಪಡೆದು ಶಿಫಾರಸ್ಸು ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ : ಬೇಡಿಕೆ ಈಡೇರಿಕೆಯ ಭರವಸೆ ನೀಡಿದ ಮುಖ್ಯಮಂತ್ರಿ Read More