ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ! ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.!

ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ!

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ!

ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.!

ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ! Read More
ಶಿವಮೊಗ್ಗ, ಮೇ 25: ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ. ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಮೇ 24 ರಂದು ಈ ಕಾರ್ಯಾಚರಣೆ ನಡೆಸಿದ್ದಾರೆ.

ಫ್ಯಾಮಿಲಿ ಸಲೂನ್ – ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್ – 6 ಯುವತಿಯರ ರಕ್ಷಣೆ!

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ.

ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಮೇ 24 ರಂದು ಈ ಕಾರ್ಯಾಚರಣೆ ನಡೆಸಿದ್ದಾರೆ.

ಫ್ಯಾಮಿಲಿ ಸಲೂನ್ – ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್ – 6 ಯುವತಿಯರ ರಕ್ಷಣೆ! Read More
ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ!

ಶಿವಮೊಗ್ಗ, ಮೇ.24 : ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು.

ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ! Read More
ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ! ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ!

ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ!

ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ! Read More
ಹುಬ್ಬಳ್ಳಿ/ಶಿವಮೊಗ್ಗ, ಮೇ 23: ‘ಕೇಂದ್ರ – ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಮೊದಲ ಹಂತದ ಕಾಮಗಾರಿ, ಮುಂದಿನ ವಾರದಿಂದ ಆರಂಭಗೊಳ್ಳಲಿದೆ’ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮೇ 22 ರಂದು ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚಿಸಲಾದ ವಿಷಯದ ಕುರಿತಂತೆ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2025 ಕ್ಕೆ ಪೂರ್ಣ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಶಿವಮೊಗ್ಗ – ಶಿಕಾರಿಪುರ ನಡುವಿನ 46 ಕಿ.ಮೀ. ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಭೂ ಸ್ವಾದೀನ ಪ್ರಕ್ರಿಯೆ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.

ಮುಂದಿನ ವಾರದಿಂದ ಆರಂಭವಾಗಲಿರುವ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ 2025 ಕ್ಕೆ ಪೂರ್ಣ

ಹುಬ್ಬಳ್ಳಿ/ಶಿವಮೊಗ್ಗ, ಮೇ 23: ‘ಕೇಂದ್ರ – ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಮೊದಲ ಹಂತದ ಕಾಮಗಾರಿ, ಮುಂದಿನ ವಾರದಿಂದ ಆರಂಭಗೊಳ್ಳಲಿದೆ’ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮೇ 22 ರಂದು ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚಿಸಲಾದ ವಿಷಯದ ಕುರಿತಂತೆ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

2025 ಕ್ಕೆ ಪೂರ್ಣ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಶಿವಮೊಗ್ಗ – ಶಿಕಾರಿಪುರ ನಡುವಿನ 46 ಕಿ.ಮೀ. ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಭೂ ಸ್ವಾದೀನ ಪ್ರಕ್ರಿಯೆ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.

ಮುಂದಿನ ವಾರದಿಂದ ಆರಂಭವಾಗಲಿರುವ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ 2025 ಕ್ಕೆ ಪೂರ್ಣ Read More
ಶಿವಮೊಗ್ಗ, ಮೇ 22: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಳೆದ ಕೆಲ ವರ್ಷಗಳಿಂದ ಭಾರೀ ಮಳೆಯಾದ ವೇಳೆ, ಶಿವಮೊಗ್ಗ ನಗರ ಹಾಗೂ ಹೊರವಲಯದ ಹಲವು ಬಡಾವಣೆ - ರಸ್ತೆಗಳು ಜಲಾವೃತವಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿ ಪರಿಣಮಿಸಿದೆ! ಜಲಾವೃತ ಸಮಸ್ಯೆಗೆ ಹತ್ತು ಹಲವು ಕಾರಣಗಳಿವೆ. ಅವ್ಯವಸ್ಥಿತ ಅಭಿವೃದ್ದಿ ಕಾಮಗಾರಿಗಳು, ಅವೈಜ್ಞಾನಿಕ ನಗರದ ಬೆಳವಣಿಗೆ, ನಗರ ವ್ಯಾಪ್ತಿಯಲ್ಲಿದ್ದ ಕೆರೆಕಟ್ಟೆಗಳು ಕಣ್ಮರೆಯಾಗುತ್ತಿರುವುದು, ಚರಂಡಿ-ರಾಜಕಾಲುವೆಗಳು ಸುಸ್ಥಿತಿಯಲ್ಲಿಲ್ಲದಿರುವುದು ಹಾಗೂ ಹಲವೆಡೆ ಭಾರೀ ದೊಡ್ಡ ಪ್ರಮಾಣದಲ್ಲಿ ಒತ್ತುವರಿಯಾಗಿರುವುದು, ಆಡಳಿತದ ನಿರ್ಲಕ್ಷ್ಯ ಸೇರಿದಂತೆ ಹಲವು ಅಂಶಗಳು ಜಲಾವೃತ ಸಮಸ್ಯೆಗೆ ಮುಖ್ಯ ಕಾರಣವಾಗಿದೆ.

ಜಲಾವೃತ ಗಂಡಾಂತರ : ಮಳೆಗಾಲ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಳ್ಳುವರೇ ಜನಪ್ರತಿನಿಧಿಗಳು, ಅಧಿಕಾರಿಗಳು?

ಶಿವಮೊಗ್ಗ, ಮೇ 22: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಳೆದ ಕೆಲ ವರ್ಷಗಳಿಂದ ಭಾರೀ ಮಳೆಯಾದ ವೇಳೆ, ಶಿವಮೊಗ್ಗ ನಗರ ಹಾಗೂ ಹೊರವಲಯದ ಹಲವು ಬಡಾವಣೆ – ರಸ್ತೆಗಳು ಜಲಾವೃತವಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿ ಪರಿಣಮಿಸಿದೆ!

ಜಲಾವೃತ ಸಮಸ್ಯೆಗೆ ಹತ್ತು ಹಲವು ಕಾರಣಗಳಿವೆ. ಅವ್ಯವಸ್ಥಿತ ಅಭಿವೃದ್ದಿ ಕಾಮಗಾರಿಗಳು, ಅವೈಜ್ಞಾನಿಕ ನಗರದ ಬೆಳವಣಿಗೆ, ನಗರ ವ್ಯಾಪ್ತಿಯಲ್ಲಿದ್ದ ಕೆರೆಕಟ್ಟೆಗಳು ಕಣ್ಮರೆಯಾಗುತ್ತಿರುವುದು,

ಚರಂಡಿ-ರಾಜಕಾಲುವೆಗಳು ಸುಸ್ಥಿತಿಯಲ್ಲಿಲ್ಲದಿರುವುದು ಹಾಗೂ ಹಲವೆಡೆ ಭಾರೀ ದೊಡ್ಡ ಪ್ರಮಾಣದಲ್ಲಿ ಒತ್ತುವರಿಯಾಗಿರುವುದು, ಆಡಳಿತದ ನಿರ್ಲಕ್ಷ್ಯ ಸೇರಿದಂತೆ ಹಲವು ಅಂಶಗಳು ಜಲಾವೃತ ಸಮಸ್ಯೆಗೆ ಮುಖ್ಯ ಕಾರಣವಾಗಿದೆ.

ಜಲಾವೃತ ಗಂಡಾಂತರ : ಮಳೆಗಾಲ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಳ್ಳುವರೇ ಜನಪ್ರತಿನಿಧಿಗಳು, ಅಧಿಕಾರಿಗಳು? Read More
ಶಿವಮೊಗ್ಗ, ಮೇ 21: ವಿಧಾನಸಭೆ ಅಧಿವೇಶನದ ನಂತರ, ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಈ ವೇಳೆ ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ, ಓರ್ವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದ್ದು, ಯಾರಿಗೆ ಅವಕಾಶ ದೊರಕಲಿದೆ ಎಂಬ ಕುತೂಹಲ ಮೂಡಿಸಿದೆ! ಕಾಂಗ್ರೆಸ್ ಮೂಲಗಳ ಅನುಸಾರ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ಅವರ ನಡುವೆ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಇವರಿಬ್ಬರಲ್ಲಿ ಓರ್ವರಿಗೆ ಮಂತ್ರಿ ಪದವಿ ನಿಶ್ಚಿತ ಎಂದು ಹೇಳಲಾಗುತ್ತಿದೆ.

ಬಿ.ಕೆ.ಸಂಗಮೇಶ್ವರ್ – ಮಧು ಬಂಗಾರಪ್ಪ ನಡುವೆ ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ!

ಶಿವಮೊಗ್ಗ, ಮೇ 21: ವಿಧಾನಸಭೆ ಅಧಿವೇಶನದ ನಂತರ, ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಈ ವೇಳೆ ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ, ಓರ್ವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದ್ದು, ಯಾರಿಗೆ ಅವಕಾಶ ದೊರಕಲಿದೆ ಎಂಬ ಕುತೂಹಲ ಮೂಡಿಸಿದೆ!

ಕಾಂಗ್ರೆಸ್ ಮೂಲಗಳ ಅನುಸಾರ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ಅವರ ನಡುವೆ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಇವರಿಬ್ಬರಲ್ಲಿ ಓರ್ವರಿಗೆ ಮಂತ್ರಿ ಪದವಿ ನಿಶ್ಚಿತ ಎಂದು ಹೇಳಲಾಗುತ್ತಿದೆ.

ಬಿ.ಕೆ.ಸಂಗಮೇಶ್ವರ್ – ಮಧು ಬಂಗಾರಪ್ಪ ನಡುವೆ ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ! Read More
ಶಿವಮೊಗ್ಗ, ಮೇ 20: ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿಯೇ ಕಳ್ಳರ ತಂಡವೊಂದು, ಶ್ರೀಗಂಧದ ಮರ ಕಡಿತಲೆಗೊಳಿಸಿ ತುಂಡುಗಳ ಸಾಗಾಣೆಗೆ ಯತ್ನಿಸಿದ ಘಟನೆ ಶಿವಮೊಗ್ಗ ನಗರದ ಹೊರವಲಯ ಆಲ್ಕೋಳ ಬಡಾವಣೆಯಲ್ಲಿ ನಡೆದಿದೆ. ಆಲ್ಕೊಳದ ವಿನೋಬನಗರ 100 ಅಡಿ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ವಲಯ ಕಚೇರಿ ಆವರಣದಲ್ಲಿ, ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಗಳು ಶ್ರೀಗಂಧದ ಮರ ಕಡಿತಲೆಗೊಳಿಸಿ, ಮರದ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ಬೈಕ್ ನಲ್ಲಿ ಕೊಂಡೊಯ್ಯುವ ವೇಳೆ ಸ್ಥಳೀಯ ನಾಗರೀಕರು ಗಮನಿಸಿದ್ದಾರೆ. ತಕ್ಷಣವೇ ಪೊಲಿಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಗಮನಕ್ಕೆ ತಂದಿದ್ದಾರೆ.

ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿಯೇ ಶ್ರೀಗಂಧದ ಮರ ಕಡಿತಲೆಗೊಳಿಸಿದ ಕಳ್ಳರು!

ಶಿವಮೊಗ್ಗ, ಮೇ 20: ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿಯೇ ಕಳ್ಳರ ತಂಡವೊಂದು, ಶ್ರೀಗಂಧದ ಮರ ಕಡಿತಲೆಗೊಳಿಸಿ ತುಂಡುಗಳ ಸಾಗಾಣೆಗೆ ಯತ್ನಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಆಲ್ಕೋಳ ಬಡಾವಣೆಯಲ್ಲಿ ನಡೆದಿದೆ.

ಆಲ್ಕೊಳದ ವಿನೋಬನಗರ 100 ಅಡಿ ರಸ್ತೆಯಲ್ಲಿರುವ, ಅರಣ್ಯ ಇಲಾಖೆಯ ವಲಯ ಕಚೇರಿ ಆವರಣದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಗಳು ಶ್ರೀಗಂಧದ ಮರ ಕಡಿತಲೆಗೊಳಿಸಿ, ಮರದ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ಬೈಕ್ ನಲ್ಲಿ ಕೊಂಡೊಯ್ಯುವ ವೇಳೆ, ಸ್ಥಳೀಯ ನಾಗರೀಕರು ಗಮನಿಸಿದ್ದಾರೆ. ತಕ್ಷಣವೇ ಪೊಲಿಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಗಮನಕ್ಕೆ ತಂದಿದ್ದಾರೆ.

ಅರಣ್ಯ ಇಲಾಖೆ ಕಚೇರಿ ಆವರಣದಲ್ಲಿಯೇ ಶ್ರೀಗಂಧದ ಮರ ಕಡಿತಲೆಗೊಳಿಸಿದ ಕಳ್ಳರು! Read More
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಮಾರಂಭಕ್ಕೆ ಸಾಕ್ಷಿಯಾದರು. ಸಚಿವರಾದವರು: ಸಚಿವರಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೋಳಿ, ಪ್ರಿಯಾಂಕ ಖರ್ಗೆ ಹಾಗೂ ಜಮೀರ್ ಅಹಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರಾಗಿದ್ದಾರೆ.

ಪ್ರಮಾಣ ವಚನ ಸ್ವೀಕಾರ  : ಕಾಂಗ್ರೆಸ್ ಸರ್ಕಾರದ ಅಧಿಕಾರ!

ಬೆಂಗಳೂರು, ಮೇ 20: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಶಾಸಕರು ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಮಾರಂಭಕ್ಕೆ ಸಾಕ್ಷಿಯಾದರು.

ಪ್ರಮಾಣ ವಚನ ಸ್ವೀಕಾರ  : ಕಾಂಗ್ರೆಸ್ ಸರ್ಕಾರದ ಅಧಿಕಾರ! Read More
ಶಿವಮೊಗ್ಗ, ಮೇ 19: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಿ ಮೂರು ತಿಂಗಳಾಗುತ್ತಾ ಬಂದಿದೆ. ವಿಮಾನಗಳ ಸಂಚಾರಕ್ಕೆ ಅನುಮತಿ ಕೂಡ ದೊರಕಿದೆ. ಆದರೆ ಪ್ರಯಾಣಿಕ ವಿಮಾನ ಸಂಚಾರ ಆರಂಭ ಯಾವಾಗ ಎಂಬುವುದು ನಿಗೂಢವಾಗಿ ಪರಿಣಮಿಸಿದೆ! ಈಗಾಗಲೇ ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಸಂಚಾರಕ್ಕೆ, ಇಂಡಿಗೋ ಏರ್ಲೈನ್ಸ್ ಸಂಸ್ಥೆ ಕೇಂದ್ರ ವಿಮಾನಯಾನ ಪ್ರಾಧಿಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಸಂಸ್ಥೆಯ ಕೋರಿಕೆಯಂತೆ ಪ್ರತಿ ಪ್ರಯಾಣಿಕನಿಗೆ 500 ರೂ. ನಂತೆ, ದಿನಕ್ಕೆ ಸರಿಸುಮಾರು 78 ಸಾವಿರ ರೂ. ಪಾವತಿಸಲು ಸರ್ಕಾರ ಸಮ್ಮತಿ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ– ಬೆಂಗಳೂರು ನಡುವೆ ಯಾವಾಗ ಆರಂಭವಾಗಲಿದೆ ವಿಮಾನ ಸಂಚಾರ?

ಶಿವಮೊಗ್ಗ, ಮೇ 19: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಿ ಮೂರು ತಿಂಗಳಾಗುತ್ತಾ ಬಂದಿದೆ. ವಿಮಾನಗಳ ಸಂಚಾರಕ್ಕೆ ಅನುಮತಿ ಕೂಡ ದೊರಕಿದೆ. ಆದರೆ ಪ್ರಯಾಣಿಕ ವಿಮಾನ ಸಂಚಾರ ಆರಂಭ ಯಾವಾಗ ಎಂಬುವುದು ನಿಗೂಢವಾಗಿ ಪರಿಣಮಿಸಿದೆ!

ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಸಂಚಾರಕ್ಕೆ ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆ ಕೇಂದ್ರ ವಿಮಾನಯಾನ ಪ್ರಾಧಿಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಸಂಸ್ಥೆಯ ಕೋರಿಕೆಯಂತೆ ಪ್ರತಿ ಪ್ರಯಾಣಿಕನಿಗೆ 500 ರೂ. ನಂತೆ, ದಿನಕ್ಕೆ ಸರಿಸುಮಾರು 78 ಸಾವಿರ ರೂ. ಪಾವತಿಸಲು ಸರ್ಕಾರ ಸಮ್ಮತಿ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ– ಬೆಂಗಳೂರು ನಡುವೆ ಯಾವಾಗ ಆರಂಭವಾಗಲಿದೆ ವಿಮಾನ ಸಂಚಾರ? Read More