ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಜು.14 ರಂದು ಸರ್ವಪಕ್ಷ ಸಭೆ
Order to release Cauvery water to Tamil Nadu: All party meeting on July 14
ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಜುಲೈ 14 ರಂದು ಸರ್ವಪಕ್ಷ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ cm siddaramaiah
News Website
Order to release Cauvery water to Tamil Nadu: All party meeting on July 14
ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಜುಲೈ 14 ರಂದು ಸರ್ವಪಕ್ಷ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ cm siddaramaiah
ಇಷ್ಟರಲ್ಲಿಯೇ ನಿಗಮ ಮಂಡಳಿ ಹಾಗೂ ನಾಮ ನಿರ್ದೇಶನ ಸ್ಥಾನಗಳಿಗೆ ನೇಮಕ ಪ್ರಕ್ರಿಯೆಗೆ ಚಾಲನೆ ಸಿಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಚಟುವಟಿಕೆಗಳು ಗರಿಗೆದರುವಂತೆ ಮಾಡಿದೆ. ಲಾಬಿಗಳು ಜೋರಾಗಿವೆ.
ಕಾಂಗ್ರೆಸ್ ನ ಹಾಲಿ-ಮಾಜಿ ಶಾಸಕರುಗಳು, ಪಕ್ಷದ ಜಿಲ್ಲಾಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ನಾಯಕರುಗಳು ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಸದಸ್ಯ, ನಿರ್ದೇಶಕ ಸ್ಥಾನ ಗಿಟ್ಟಿಸಿಕೊಳ್ಳಲು ಕಾರ್ಯಕರ್ತರು ಕಸರತ್ತು ನಡೆಸಲಾರಂಭಿಸಿದ್ದಾರೆ.
ಸರ್ಕಾರದ ಅಧೀನದಲ್ಲಿ ಒಟ್ಟಾರೆ 85 ನಿಗಮಗಳಿದ್ದು, ಅಲ್ಲಿಗೆ ನೇಮಕ ಮಾಡುವ ಪೂರ್ಣ ಅಧಿಕಾರ ಸರ್ಕಾರಕ್ಕಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಶಾಸಕರಿಗೆ ಶೇ. 70 ರಷ್ಟು ಹಾಗೂ ಪಕ್ಷದ ಮುಖಂಡರು-ಕಾರ್ಯಕರ್ತರಿಗೆ ಶೇ. 30 ರಷ್ಟು ಆದ್ಯತೆ ನೀಡುವ ನಿರ್ಧಾರ ಮಾಡಲಾಗಿದೆ. ಎರಡೂವರೆ ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ.
ಶಿವಮೊಗ್ಗ, ಮೇ 21: ವಿಧಾನಸಭೆ ಅಧಿವೇಶನದ ನಂತರ, ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಈ ವೇಳೆ ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ, ಓರ್ವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದ್ದು, ಯಾರಿಗೆ ಅವಕಾಶ ದೊರಕಲಿದೆ ಎಂಬ ಕುತೂಹಲ ಮೂಡಿಸಿದೆ!
ಕಾಂಗ್ರೆಸ್ ಮೂಲಗಳ ಅನುಸಾರ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ಅವರ ನಡುವೆ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಇವರಿಬ್ಬರಲ್ಲಿ ಓರ್ವರಿಗೆ ಮಂತ್ರಿ ಪದವಿ ನಿಶ್ಚಿತ ಎಂದು ಹೇಳಲಾಗುತ್ತಿದೆ.
ಬಿ.ಕೆ.ಸಂಗಮೇಶ್ವರ್ – ಮಧು ಬಂಗಾರಪ್ಪ ನಡುವೆ ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ! Read More
ಶಿವಮೊಗ್ಗ, ಮೇ 20: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಶಿವಮೊಗ್ಗ ನಗರದ ಗಾಡಿಕೊಪ್ಪದಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿದ ಕಾರ್ಯಕರ್ತರು ಪಕ್ಷದ ನಾಯಕರ ಪರವಾಗಿ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ Read More
ಶಿವಮೊಗ್ಗ, ಮೇ 19: ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ, ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆ ವೇಳೆ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಇದೀಗ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಾರಂಭಿಸಿದೆ.
ಈ ನಡುವೆ ರಾಜ್ಯದ ಚಿತ್ರದುರ್ಗ, ಬಳ್ಳಾರಿ ಸೇರಿದಂತೆ ವಿವಿಧೆಡೆ ವಿದ್ಯುತ್ ಬಿಲ್ ಪಾವತಿಗೆ ಕೆಲ ನಾಗರೀಕರು ನಿರಾಕರಿಸುತ್ತಿದ್ದಾರೆ. ಕೆಲವೆಡೆ ಮೀಟರ್ ರೀಡರ್ ಗಳನ್ನು ಹಳ್ಳಿಗಳ ಒಳಗೆ ಗ್ರಾಮಸ್ಥರು ಬಿಟ್ಟುಕೊಳ್ಳುತ್ತಿಲ್ಲ ಎಂಬ ವರದಿಗಳು ಬರುತ್ತಿವೆ.
ಕಾಂಗ್ರೆಸ್ ಅಧಿಕಾರಕ್ಕೆ – ವಿದ್ಯುತ್ ಬಿಲ್ ಪಾವತಿ : ನಾಗರೀಕರ ಪ್ರಶ್ನೆಗಳ ಸುರಿಮಳೆಗೆ ಮೆಸ್ಕಾಂ ಸಿಬ್ಬಂದಿಗಳು ಸುಸ್ತೋ ಸುಸ್ತು! Read More
ಬೆಂಗಳೂರು, ಮೇ 18: ‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ’ ಎಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಗುರುವಾರ ಮಧ್ಯಾಹ್ನ ಸಿದ್ದರಾಮಯ್ಯ ತಮ್ಮ ಟ್ವಿಟರ್ ಖಾತೆಯಲ್ಲಿ ಈ ಸಂದೇಶ ಹಾಕಿದ್ದಾರೆ. ‘ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.
ಜೊತೆಗೆ, ‘ನಮ್ಮ ಎಲ್ಲ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ’ ಎಂದು ಟ್ವಿಟರ್ ಸಂದೇಶದಲ್ಲಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಭರವಸೆ ನೀಡಿದ್ದಾರೆ.
‘ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ’ : ಸಿದ್ದರಾಮಯ್ಯ ಹೇಳಿಕೆ Read More
ದೆಹಲಿ/ಬೆಂಗಳೂರು, ಮೇ 17: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷದಲ್ಲಿ, ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೆ ರೋಚಕತೆ ಕೆರಳಿಸಿದ್ದು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳಲಾರಂಭಿಸಿದೆ!
ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಿಲುವಿಗೆ ಅಂಟಿಕೊಂಡಿರುವುದು, ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.
ಯಾರಾಗಲಿದ್ದಾರೆ ಸಿಎಂ..? : ಸಿದ್ದರಾಮಯ್ಯ – ಡಿ.ಕೆ.ಶಿವಕುಮಾರ್ ನಡುವೆ ಮುಂದುವರಿದ ಹಗ್ಗಜಗ್ಗಾಟ! Read More
ಬೆಂಗಳೂರು/ಶಿವಮೊಗ್ಗ, ಮೇ 8: ದಿಢೀರ್ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ, ಮಣಿಪುರ ರಾಜ್ಯ ಅಕ್ಷರಶಃ ನುಲುಗಿ ಹೋಗಿದೆ. ಈ ನಡುವೆ ಮಣಿಪುರ ರಾಜ್ಯದಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ಕರ್ನಾಟಕ ರಾಜ್ಯದ ನಾಲ್ವರು ವಿದ್ಯಾರ್ಥಿಗಳನ್ನು, ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಲಾರಂಭಿಸಿದೆ.
ಇದರಲ್ಲಿ ಶಿವಮೊಗ್ಗ ನಗರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಿಬ್ಬಂದಿ ತಿಪ್ಪೇಸ್ವಾಮಿ ಅವರ ಪುತ್ರ ಮನೋಜ್ ಹಾಗೂ ತೀರ್ಥಹಳ್ಳಿ ತಾಲೂಕು ಕೋಣಂದೂರು ನಿವಾಸಿ ವಿಶಾಲ ಪ್ರಫುಲ್ಲಚಂದ್ರ ಅವರ ಪುತ್ರಿ ಅಪ್ಸರ ಕೆ.ಪಿ. ಕೂಡ ಸೇರಿದ್ದಾರೆ. ಇವರಿಬ್ಬರು ಮಣಿಪುರದ ಇಂಫಾಲ ಅಗ್ರಿಕಲ್ಚರ್ ಯೂನಿವರ್ಸಿಟಿ ಕಾಲೇಜ್ ನಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಉಳಿದಂತೆ ಚಿಕ್ಕಮಗಳೂರು ಹಾಗೂ ಬಾಗಲಕೋಟೆ ಜಮಖಂಡಿಯ ಇಬ್ಬರು ವಿದ್ಯಾರ್ಥಿಗಳು ಎನ್.ಐ.ಟಿ. ಕಾಲೇಜೊಂದರಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.
ಹಿಂಸಾಪೀಡಿತ ಮಣಿಪುರದಲ್ಲಿದ್ದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳಿಗೆ ನೆರವಿನಹಸ್ತ! Read More