ಬಿಸಿಲ ಬೇಗೆಗೆ ಬತ್ತಿದ ಕೆರೆಗಳು : ತುಂಗಾಭದ್ರಾ ನದಿಯಿಂದ ನೀರು ಹರಿಸಲು ಆಗ್ರಹಿಸಿ ಮನವಿ
ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿಸಿಲ ಬೇಗೆಯಿಂದ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗುತ್ತಿದ್ದು, ತಕ್ಷಣವೇ ತುಂಗಾಭದ್ರಾ ನದಿಯಿಂದ ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.
ಈ ಸಂಬಂಧ ಮಂಗಳವಾರ ಶಿವಮೊಗ್ಗ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಕೊಮ್ಮನಾಳು, ಸೋಮಿನಕೊಪ್ಪ, ಆಲದಹಳ್ಳಿ, ಹರಮಘಟ್ಟ, ಸುತ್ತುಕೋಟೆ, ಬನ್ನಿಕೆರೆ, ಬೂದಿಗೆರೆ ಕಾಲೋನಿ, ಬಿಕೊನಹಳ್ಳಿ, ಕಿಟ್ಟತಾಳು ಗ್ರಾಮಸ್ಥರು ಮನವಿ ಪತ್ರ ಅರ್ಪಿಸಿದ್ದಾರೆ.
ಬಿಸಿಲ ಬೇಗೆಗೆ ಬತ್ತಿದ ಕೆರೆಗಳು : ತುಂಗಾಭದ್ರಾ ನದಿಯಿಂದ ನೀರು ಹರಿಸಲು ಆಗ್ರಹಿಸಿ ಮನವಿ Read More
