ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು
ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/07/2016 ರಂದು ಹೊರಡಿಸಿದೆ. ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 18/09/2023 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ಶಿವಮೊಗ್ಗ ನಗರದ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆ ಮಾಡಿದೆ.
