ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಭೈರಾಪುರ ಮರಾಠಿ ಕ್ಯಾಂಪ್ ಗ್ರಾಮಸ್ಥರು!
ಎನ್.ಆರ್.ಪುರ (ಚಿಕ್ಕಮಗಳೂರು), ಎ. 13: ‘ಮೂಲಸೌಕರ್ಯಗಳ ಕೊರತೆ, ಆಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಖಂಡಿಸಿ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಭೈರಾಪುರ ಗ್ರಾಮದ ಮರಾಠಿ ಕ್ಯಾಂಪ್ ಗ್ರಾಮಸ್ಥರು ತಿಳಿಸಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಯಾಗುವ ತಮ್ಮ ಗ್ರಾಮಕ್ಕೆ ಸೂಕ್ತ ಸಂಪರ್ಕ ರಸ್ತೆಯಿಲ್ಲ. ಕುಡಿಯುವ ನೀರಿನ ಪೂರೈಕೆಯಿಲ್ಲ. ಅಂಗನವಾಡಿ ಕೇಂದ್ರವೂ ಇಲ್ಲ. ಮೂರು ಕಿ.ಮೀ. ದೂರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕಾಡಲ್ಲಿ ಪುಟಾಣಿ ಮಕ್ಕಳು ನಡೆದುಕೊಂಡು ಹೋಗಬೇಕು ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಭೈರಾಪುರ ಮರಾಠಿ ಕ್ಯಾಂಪ್ ಗ್ರಾಮಸ್ಥರು! Read More
