ಶಿವಮೊಗ್ಗ : ಭರ್ತಿಯ ಹಂತಕ್ಕೆ ತುಂಗಾ ಡ್ಯಾಂ – ನೀರು ಹೊರಹರಿಸಲು ಕೌಂಟ್ ಡೌನ್!

ಶಿವಮೊಗ್ಗ : ಭರ್ತಿಯ ಹಂತಕ್ಕೆ ತುಂಗಾ ಡ್ಯಾಂ – ನೀರು ಹೊರಹರಿಸಲು ಕೌಂಟ್ ಡೌನ್!

ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ!

ಶಿವಮೊಗ್ಗ : ಭರ್ತಿಯ ಹಂತಕ್ಕೆ ತುಂಗಾ ಡ್ಯಾಂ – ನೀರು ಹೊರಹರಿಸಲು ಕೌಂಟ್ ಡೌನ್! Read More

ಶಿವಮೊಗ್ಗ ನಗರದಲ್ಲಿ ಭಾರೀ ಮಳೆ : ಮುಂಗಾರು ಮಳೆಯ ಭರ್ಜರಿ ಎಂಟ್ರಿ..!

ಕೊನೆಗೂ ಮುಂಗಾರು ಮಳೆಯ ಭರ್ಜರಿ ಎಂಟ್ರಿಯಾಗಿದೆ..! ಹೌದು. ಶಿವಮೊಗ್ಗ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಭಾರೀ ವರ್ಷಧಾರೆಯಾಯಿತು. ಹಲವೆಡೆ ರಸ್ತೆ ಮೇಲೆಯೇ ಮಳೆ ನೀರು ಹರಿದು ಹೋಯಿತು. ಇದರಿಂದ ಜನ ವಾಹನ ಸಂಚಾರ ಅಸ್ತವ್ಯಸ್ತವಾಗುವಂತಾಗಿತ್ತು.

ಶಿವಮೊಗ್ಗ ನಗರದಲ್ಲಿ ಭಾರೀ ಮಳೆ : ಮುಂಗಾರು ಮಳೆಯ ಭರ್ಜರಿ ಎಂಟ್ರಿ..! Read More
ಮಲೆನಾಡಿನಲ್ಲಿ ಚುರುಕುಗೊಳ್ಳದ ಮುಂಗಾರು ಮಳೆ!

ಮಲೆನಾಡಿನಲ್ಲಿ ಚುರುಕುಗೊಳ್ಳದ ಮುಂಗಾರು ಮಳೆ!

ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ. ಆದರೆ ಮಲೆನಾಡು ಭಾಗದಲ್ಲಿ ವರ್ಷಧಾರೆ ಚುರುಕುಗೊಂಡಿಲ್ಲ. ಸಂಪೂರ್ಣ ದುರ್ಬಲಗೊಂಡಿದೆ. ಇದರಿಂದ ಕೃಷಿ ಚಟುವಟಿಕೆ ಏರುಪೇರಾಗುವಂತೆ ಮಾಡಿದೆ!

ಮಲೆನಾಡಿನಲ್ಲಿ ಚುರುಕುಗೊಳ್ಳದ ಮುಂಗಾರು ಮಳೆ! Read More
ಶಿವಮೊಗ್ಗ ನಗರದಲ್ಲಿ ಮಳೆಗಾಲದ ವೇಳೆ ಜನವಸತಿ ಪ್ರದೇಶಗಳಲ್ಲಿ ಉಂಟಾಗುವ ಜಲಾವೃತ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ನಗರದ ವಿವಿಧೆಡೆ ಭೇಟಿಯಿತ್ತು ನಡೆಸುತ್ತಿರುವ ಪರಿಶೀಲನಾ ಕಾರ್ಯ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಎಲ್.ಬಿ.ಎಸ್. ನಗರ, ಶರಾವತಿ ನಗರ, ಹರಿಗೆ, ಗುರುಪುರ, ವಿದ್ಯಾನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಹಾದು ಹೋಗಿರುವ ತುಂಗಾ ನಾಲೆ ಹಾಗೂ ಪ್ರಮುಖ ರಾಜ ಕಾಲುವೆಗಳ ಸ್ಥಿತಿಗತಿಯ ವೀಕ್ಷಣೆ ಮಾಡಿದರು. ಶರಾವತಿ ನಗರದ ಬಳಿ ಕೊಳಚೆ ನೀರು ತುಂಗಾ ನಾಲೆಗೆ ಸೇರ್ಪಡೆಯಾಗದಂತೆ ಹಾಗೂ ಎಲ್.ಬಿ.ಎಸ್. ನಗರದ ಚಾನಲ್ ಬಳಿ ಬಿದ್ದಿರುವ ಕಸದ ರಾಶಿ ತೆರವುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ರಾಜಕಾಲುವೆ, ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಮಾಡಬೇಕು. ತಗ್ಗು ಪ್ರದೇಶಗಳಲ್ಲಿ ಸಮಸ್ಯೆ ತಲೆದೋರದಂತೆ ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಳೆಗಾಲ ಮುನ್ನೆಚ್ಚರಿಕೆ ಕ್ರಮ : ಮುಂದುವರಿದ ಜಿಲ್ಲಾಧಿಕಾರಿಗಳ ಶಿವಮೊಗ್ಗ ಸಿಟಿ ರೌಂಡ್ಸ್..!

ಶಿವಮೊಗ್ಗ, ಮೇ 26:  ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅವರು ಇಂದು ಸಹ ನಗರ ಹಾಗೂ ಹೊರವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಮಳೆಯಿಂದ ಸಮಸ್ಯೆ ಎದುರಿಸಬಹುದಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ತೆರಳಿ, ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸಲಹೆ-ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯ ಎಲ್‍ಬಿಎಸ್ ನಗರದ ಚಾನಲ್‍ಗೆ ಭೇಟಿ ನೀಡಿ, ಚಾನಲ್‍ನಲ್ಲಿರುವ ಗಿಡಗಂಟಿ, ಕಸ ತೆಗೆಸಬೇಕು. ಇಲ್ಲವಾದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ನೀರು ಹೊರಗೆ ನುಗ್ಗುವ ಸಂಭವವಿದ್ದು, ನೀರು ಸರಾಗವಾಗಿ ಹರಿಯಲು ಅನುವಾಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಮಳೆಗಾಲ ಮುನ್ನೆಚ್ಚರಿಕೆ ಕ್ರಮ : ಮುಂದುವರಿದ ಜಿಲ್ಲಾಧಿಕಾರಿಗಳ ಶಿವಮೊಗ್ಗ ಸಿಟಿ ರೌಂಡ್ಸ್..! Read More