ಬೆಕ್ಕು ಕಚ್ಚಿದ ಪರಿಣಾಮ ರೇಬೀಸ್ ರೋಗಕ್ಕೆ ತುತ್ತಾಗಿ ಮಹಿಳೆ ಸಾವು!
A woman died of rabies as a result of being bitten by a cat!
ಬೆಕ್ಕು ಕಚ್ಚಿದ ಪರಿಣಾಮ ರೇಬೀಸ್ ರೋಗಕ್ಕೆ ತುತ್ತಾಗಿ ಮಹಿಳೆ ಸಾವು!
News Website
A woman died of rabies as a result of being bitten by a cat!
ಬೆಕ್ಕು ಕಚ್ಚಿದ ಪರಿಣಾಮ ರೇಬೀಸ್ ರೋಗಕ್ಕೆ ತುತ್ತಾಗಿ ಮಹಿಳೆ ಸಾವು!
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೆ.ಬಿ.ಪ್ರಸನ್ನಕುಮಾರ್ ವಿಧ್ಯುಕ್ತವಾಗಿ ಜೆಡಿಎಸ್ ಗೆ ಪಾದರ್ಪಣೆ ಮಾಡಿದ್ದಾರೆ.
ಕಾಂಗ್ರೆಸ್’ಗೆ ಗುಡ್ ಬೈ ; ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್! Read More
ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಲವು ದಶಕಗಳ ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ!
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.
ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ! Read More
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಕಾವೇರಲಾರಂಭಿಸಿದೆ. ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.
ಬಿಜೆಪಿಯಿಂದ ಎಸ್.ಎನ್.ಚನ್ನಬಸಪ್ಪ, ಕಾಂಗ್ರೆಸ್ ನಿಂದ ಹೆಚ್.ಸಿ.ಯೋಗೇಶ್ ಹಾಗೂ ಜೆಡಿಎಸ್ ನಿಂದ ಆಯನೂರು ಮಂಜುನಾಥ್ ಅವರು ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.
ಕಾವೇರಿದ ಶಿವಮೊಗ್ಗ ನಗರ ಕ್ಷೇತ್ರದ ರಾಜಕಾರಣ! : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ Read More
ಕೊನೆಗೂ ಬಹು ನಿರೀಕ್ಷಿತ, ವಿಳಂಬಿತ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಅನಿರೀಕ್ಷಿತ, ಅಚ್ಚರಿ ಎಂಬಂತೆ ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ!
ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚನ್ನಬಸಪ್ಪ (ಚೆನ್ನಿ) ಆಯ್ಕೆ..! Read More
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ, ಇಷ್ಟು ದಿನ ತಣ್ಣಗಿದ್ದ ಜೆಡಿಎಸ್ ಪಕ್ಷದ ಚಟುವಟಿಕೆಗಳು ದಿಢೀರ್ ಕಾವೇರಿದೆ! ಮಂಗಳವಾರದಿಂದ ಸಾಕಷ್ಟು ಕುತೂಹಲ ಮೂಡಿಸಿದ್ದ, ಜೆಡಿಎಸ್ ಟಿಕೆಟ್ ಹೈಡ್ರಾಮಾಕ್ಕೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿಯಿಂದ ಹೊರಬಂದ ಆಯನೂರು ಮಂಜುನಾಥ್ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ!
ಇದರಿಂದ ಜೆಡಿಎಸ್ ನಿಂದ ಕಣಕ್ಕಿಳಿಯಲು ಸಾಕಷ್ಟು ಕಸರತ್ತು ನಡೆಸಿದ್ದ ಹಾಗೂ ಬೆಂಗಳೂರಿನಲ್ಲಿಯೇ ಬೀಡುಬಿಟ್ಟು ಲಾಬಿ ನಡೆಸುತ್ತಿದ್ದ, ಕಾಂಗ್ರೆಸ್ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು ಲೆಕ್ಕಾಚಾರಗಳು ತಲೆಕೆಳಗಾಗುವಂತಾಗಿದೆ.
ಶಿವಮೊಗ್ಗ ನಗರ ಕ್ಷೇತ್ರ : ಜೆಡಿಎಸ್ ಟಿಕೆಟ್ ಹೈಡ್ರಾಮಾಕ್ಕೆ ಕೊನೆಗೂ ತೆರೆ..! Read More
ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ದಿವಂಗತ ಎಸ್.ಬಂಗಾರಪ್ಪ ಎದುರಾಳಿಗಳಾಗಿ ಕಣಕ್ಕಿಳಿದಿದ್ದ 2008 ರ ವಿಧಾನಸಭೆ ಚುನಾವಣೆಯು, ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಅಕ್ಷರಶಃ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿತ್ತು..!
ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಯಡಿಯೂರಪ್ಪ ಎದುರು, ಅಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಬಂಗಾರಪ್ಪ ಕಣಕ್ಕಿಳಿಯುವ ಘೋಷಣೆ ಮಾಡಿದ್ದರು. ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು!
ಬಿ.ಎಸ್.ಯಡಿಯೂರಪ್ಪ – ಎಸ್. ಬಂಗಾರಪ್ಪ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ 2008 ರ ಚುನಾವಣೆ! Read More
ಶಿವಮೊಗ್ಗ, ಎ. 17: ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಘೋಷಣೆ ನಂತರ, ಕಾಂಗ್ರೆಸ್ ನಲ್ಲಿ ಭುಗಿಲೆದ್ದಿರುವ ಭಿನ್ನಮತ ಸದ್ಯಕ್ಕೆ ಶಮನಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿಲ್ಲ. ದಿಢೀರ್ ವಿದ್ಯಮಾನವೊಂದರಲ್ಲಿ, ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು ಕಾಂಗ್ರೆಸ್ ತ್ಯಜಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ!
ಶಿವಮೊಗ್ಗ ನಗರ ಕ್ಷೇತ್ರ ಕಾಂಗ್ರೆಸ್ ಭಿನ್ನಮತ : ಮಾಜಿ ಶಾಸಕರ ಬಂಡಾಯ – ಜೆಡಿಎಸ್ ನಿಂದ ಕಣಕ್ಕೆ?! Read More
‘ಅಣ್ಣ – ತಮ್ಮನ ಹಣಾಹಣಿಗೆ, ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ವೇದಿಕೆ ಸಿದ್ಧವಾಗಿದೆ. ಸತತ ನಾಲ್ಕನೇ ಬಾರಿ, ಚುನಾವಣಾ ಅಖಾಡದಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ‘ಸಹೋದರರ ಸವಾಲ್’ ನಿಂದ ಸೊರಬ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ!
ಹೌದು. ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಾದ ಕುಮಾರ್ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ, ಪ್ರಸ್ತುತ ವಿಧಾನಸಭೆ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇಬ್ಬರ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕ್ಕೇರಿದೆ. ಶತಾಯಗತಾಯ ಜಯ ಸಾಧಿಸಲೇಬೇಕೆಂಬ ಜಿದ್ದಿಗೆ ಬಿದ್ದಿದ್ದಾರೆ.
ಅಣ್ಣ – ತಮ್ಮನ ಜಂಗೀ ಕುಸ್ತಿಗೆ ಸಿದ್ದವಾದ ಸೊರಬ ಕ್ಷೇತ್ರ! Read More
ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ, ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹಾಗೂ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ಅವರು ಶಿಕಾರಿಪುರ ಪಟ್ಟಣದಲ್ಲಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.
ಬಿ.ವೈ.ವಿಜಯೇಂದ್ರ ಅವರು ಸಾಂಕೇತಿಕವಾಗಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ. ಎ. 19 ರಂದು ಮೆರವಣಿಗೆಯ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಅರ್ಜಿ ಸಲ್ಲಿಸಲಿದ್ದಾರೆ. ಈ ವಿಷಯವನ್ನು ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ Read More