ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಕಾಲಮಿತಿಯೊಳಗೆ ಕ್ರಮ : ಶಿವಮೊಗ್ಗ ಜಿಪಂ ಸಿಇಓ

ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಕಾಲಮಿತಿಯೊಳಗೆ ಕ್ರಮ : ಶಿವಮೊಗ್ಗ ಜಿಪಂ ಸಿಇಓ

ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ, ಶಿವಮೊಗ್ಗ ತಾಲೂಕು ಕೊನಗವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೇವಾಲಾಲ್ ನಗರ ನಿವಾಸಿಗಳು, ಶುಕ್ರವಾರ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರಿಗೆ ಮನವಿ ಪತ್ರ ಅರ್ಪಿಸಿದರು.

ಕುಡಿಯುವ ನೀರು ಸಮಸ್ಯೆ ಪರಿಹಾರಕ್ಕೆ ಕಾಲಮಿತಿಯೊಳಗೆ ಕ್ರಮ : ಶಿವಮೊಗ್ಗ ಜಿಪಂ ಸಿಇಓ Read More
ಪ್ರಸ್ತುತ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಕೆಲ ಅಧಿಕಾರಿ, ಸಿಬ್ಬಂದಿಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಚುನಾವಣೆ ಜೊತೆಜೊತೆಗೆ ಕುಡಿಯುವ ನೀರು ಸೇರಿದಂತೆ ಮತ್ತೀತರ ನಾಗರೀಕ ಸಮಸ್ಯೆಗಳ ಪರಿಹಾರದತ್ತಲೂ ಗಮನಹರಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಂತರ್ಜಲ ಮಟ್ಟ ಕುಸಿದು, ಕುಡಿಯುವ ನೀರು ಸಮಸ್ಯೆ ಉಲ್ಬಣಿಸಬಹುದಾದ ಗ್ರಾಮಗಳ ಸಂಭಾವ್ಯ ಪಟ್ಟಿ ಸಿದ್ದಪಡಿಸಲಾಗಿದೆ. ಇಂತಹ ಗ್ರಾಮಗಳಲ್ಲಿ ಸಮಸ್ಯೆ ಪರಿಹಾರಕ್ಕೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುತ್ತಿದೆ. ಸಮಸ್ಯೆ ಕಂಡುಬರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುವುದು.

ಮಲೆನಾಡಲ್ಲಿ ರಣ ಬಿಸಿಲು : ಕುಸಿಯುತ್ತಿರುವ ಅಂತರ್ಜಲ – ಕುಡಿಯುವ ನೀರಿಗೆ ಎದುರಾಗಲಾರಂಭಿಸಿದೆ ಹಾಹಾಕಾರ!

ಮಲೆನಾಡು ಭಾಗದಲ್ಲಿ ಪ್ರಸ್ತುತ ವರ್ಷ ಬೇಸಿಗೆ ಬಿಸಿಲ ತೀವ್ರತೆ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿದೆ. ನೆತ್ತಿ ಸುಡುವ ರಣ ಬಿಸಿಲಿಗೆ ನಾಗರೀಕರು ಅಕ್ಷರಶಃ ತತ್ತರಿಸಿ ಹೋಗಲಾರಂಭಿಸಿದ್ದಾರೆ!

ಮತ್ತೊಂದೆಡೆ, ಬಿಸಿಲ ತಾಪದಿಂದ ಅಂತರ್ಜಲ ಮಟ್ಟ ಗಂಭೀರ ಸ್ವರೂಪದಲ್ಲಿ ಕುಸಿಯಲಾರಂಭಿಸಿದೆ. ಹಲವೆಡೆ ಬೋರ್ ವೆಲ್, ಬಾವಿ ಮತ್ತೀತರ ಜಲಮೂಲಗಳು ನೀರಿಲ್ಲದೆ ಬರಿದಾಗಲಾರಂಭಿಸಿದೆ. ಇದರಿಂದ ಕುಡಿಯುವ ನೀರು ಪೂರೈಕೆಯ ಮೇಲೆ ಪರಿಣಾಮ ಬೀರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜೀವಜಲಕ್ಕೆ ತತ್ವರಾ ಎದುರಾಗಿದೆ.

ಮಲೆನಾಡಲ್ಲಿ ರಣ ಬಿಸಿಲು : ಕುಸಿಯುತ್ತಿರುವ ಅಂತರ್ಜಲ – ಕುಡಿಯುವ ನೀರಿಗೆ ಎದುರಾಗಲಾರಂಭಿಸಿದೆ ಹಾಹಾಕಾರ! Read More