ಹಿಂಸಾಪೀಡಿತ ಮಣಿಪುರದಲ್ಲಿದ್ದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳಿಗೆ ನೆರವಿನಹಸ್ತ!
ಬೆಂಗಳೂರು/ಶಿವಮೊಗ್ಗ, ಮೇ 8: ದಿಢೀರ್ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ, ಮಣಿಪುರ ರಾಜ್ಯ ಅಕ್ಷರಶಃ ನುಲುಗಿ ಹೋಗಿದೆ. ಈ ನಡುವೆ ಮಣಿಪುರ ರಾಜ್ಯದಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ಕರ್ನಾಟಕ ರಾಜ್ಯದ ನಾಲ್ವರು ವಿದ್ಯಾರ್ಥಿಗಳನ್ನು, ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಲಾರಂಭಿಸಿದೆ.
ಇದರಲ್ಲಿ ಶಿವಮೊಗ್ಗ ನಗರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಿಬ್ಬಂದಿ ತಿಪ್ಪೇಸ್ವಾಮಿ ಅವರ ಪುತ್ರ ಮನೋಜ್ ಹಾಗೂ ತೀರ್ಥಹಳ್ಳಿ ತಾಲೂಕು ಕೋಣಂದೂರು ನಿವಾಸಿ ವಿಶಾಲ ಪ್ರಫುಲ್ಲಚಂದ್ರ ಅವರ ಪುತ್ರಿ ಅಪ್ಸರ ಕೆ.ಪಿ. ಕೂಡ ಸೇರಿದ್ದಾರೆ. ಇವರಿಬ್ಬರು ಮಣಿಪುರದ ಇಂಫಾಲ ಅಗ್ರಿಕಲ್ಚರ್ ಯೂನಿವರ್ಸಿಟಿ ಕಾಲೇಜ್ ನಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಉಳಿದಂತೆ ಚಿಕ್ಕಮಗಳೂರು ಹಾಗೂ ಬಾಗಲಕೋಟೆ ಜಮಖಂಡಿಯ ಇಬ್ಬರು ವಿದ್ಯಾರ್ಥಿಗಳು ಎನ್.ಐ.ಟಿ. ಕಾಲೇಜೊಂದರಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.
ಹಿಂಸಾಪೀಡಿತ ಮಣಿಪುರದಲ್ಲಿದ್ದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳಿಗೆ ನೆರವಿನಹಸ್ತ! Read More
