ಶಿವಮೊಗ್ಗ ನಗರದಲ್ಲಿ ಮಳೆಗಾಲದ ವೇಳೆ ಜನವಸತಿ ಪ್ರದೇಶಗಳಲ್ಲಿ ಉಂಟಾಗುವ ಜಲಾವೃತ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ನಗರದ ವಿವಿಧೆಡೆ ಭೇಟಿಯಿತ್ತು ನಡೆಸುತ್ತಿರುವ ಪರಿಶೀಲನಾ ಕಾರ್ಯ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಎಲ್.ಬಿ.ಎಸ್. ನಗರ, ಶರಾವತಿ ನಗರ, ಹರಿಗೆ, ಗುರುಪುರ, ವಿದ್ಯಾನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಹಾದು ಹೋಗಿರುವ ತುಂಗಾ ನಾಲೆ ಹಾಗೂ ಪ್ರಮುಖ ರಾಜ ಕಾಲುವೆಗಳ ಸ್ಥಿತಿಗತಿಯ ವೀಕ್ಷಣೆ ಮಾಡಿದರು. ಶರಾವತಿ ನಗರದ ಬಳಿ ಕೊಳಚೆ ನೀರು ತುಂಗಾ ನಾಲೆಗೆ ಸೇರ್ಪಡೆಯಾಗದಂತೆ ಹಾಗೂ ಎಲ್.ಬಿ.ಎಸ್. ನಗರದ ಚಾನಲ್ ಬಳಿ ಬಿದ್ದಿರುವ ಕಸದ ರಾಶಿ ತೆರವುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ರಾಜಕಾಲುವೆ, ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಮಾಡಬೇಕು. ತಗ್ಗು ಪ್ರದೇಶಗಳಲ್ಲಿ ಸಮಸ್ಯೆ ತಲೆದೋರದಂತೆ ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಳೆಗಾಲ ಮುನ್ನೆಚ್ಚರಿಕೆ ಕ್ರಮ : ಮುಂದುವರಿದ ಜಿಲ್ಲಾಧಿಕಾರಿಗಳ ಶಿವಮೊಗ್ಗ ಸಿಟಿ ರೌಂಡ್ಸ್..!

ಶಿವಮೊಗ್ಗ, ಮೇ 26:  ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅವರು ಇಂದು ಸಹ ನಗರ ಹಾಗೂ ಹೊರವಲಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಮಳೆಯಿಂದ ಸಮಸ್ಯೆ ಎದುರಿಸಬಹುದಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ತೆರಳಿ, ಸೂಕ್ತ ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಸಲಹೆ-ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯ ಎಲ್‍ಬಿಎಸ್ ನಗರದ ಚಾನಲ್‍ಗೆ ಭೇಟಿ ನೀಡಿ, ಚಾನಲ್‍ನಲ್ಲಿರುವ ಗಿಡಗಂಟಿ, ಕಸ ತೆಗೆಸಬೇಕು. ಇಲ್ಲವಾದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ನೀರು ಹೊರಗೆ ನುಗ್ಗುವ ಸಂಭವವಿದ್ದು, ನೀರು ಸರಾಗವಾಗಿ ಹರಿಯಲು ಅನುವಾಗುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಮಳೆಗಾಲ ಮುನ್ನೆಚ್ಚರಿಕೆ ಕ್ರಮ : ಮುಂದುವರಿದ ಜಿಲ್ಲಾಧಿಕಾರಿಗಳ ಶಿವಮೊಗ್ಗ ಸಿಟಿ ರೌಂಡ್ಸ್..! Read More

ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ : ಡಿಸಿ ಡಾ.ಆರ್.ಸೆಲ್ವಮಣಿ – ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾಹಿತಿ

ಶಿವಮೊಗ್ಗದ ಹೊರವಲಯ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.

ವಿಮಾನ ನಿಲ್ದಾಣ ಉದ್ಘಾಟನೆಗೆ ಸಕಲ ಸಿದ್ದತೆ : ಡಿಸಿ ಡಾ.ಆರ್.ಸೆಲ್ವಮಣಿ – ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾಹಿತಿ Read More