shimoga | ಶಿವಮೊಗ್ಗ : ನ. 23 ರಂದು ಉಪ ಚುನಾವಣೆ ನಡೆಯಲಿರುವ ಶಾಲೆಗಳಿಗೆ ರಜೆ ಘೋಷಣೆ!
shimoga | Shimoga: On 23rd of by-elections will be held holiday announcement for schools!
ಶಿವಮೊಗ್ಗ : ನ. 23 ರಂದು ಉಪ ಚುನಾವಣೆ ನಡೆಯಲಿರುವ ಶಾಲೆಗಳಿಗೆ ರಜೆ ಘೋಷಣೆ
News Website
shimoga | Shimoga: On 23rd of by-elections will be held holiday announcement for schools!
ಶಿವಮೊಗ್ಗ : ನ. 23 ರಂದು ಉಪ ಚುನಾವಣೆ ನಡೆಯಲಿರುವ ಶಾಲೆಗಳಿಗೆ ರಜೆ ಘೋಷಣೆ
The state government’s decision to conduct GP-Taam elections
ಲೋಕಸಭೆ ರಿಸಲ್ಟ್ ನಂತರ ಜಿಪಂ – ತಾಪಂ ಚುನಾವಣೆ ನಡೆಸಲು ರಾಜ್ಯ ಸರ್ಕಾರದ ನಿರ್ಧಾರ
Pro-wife campaign in Shimoga: Actor Sivarajkumar demands ban on movie, advertisements
ಶಿವಮೊಗ್ಗದಲ್ಲಿ ಪತ್ನಿ ಪರ ಪ್ರಚಾರ : ನಟ ಶಿವರಾಜಕುಮಾರ್ ಸಿನಿಮಾ, ಜಾಹೀರಾತುಗಳ ನಿರ್ಬಂಧಕ್ಕೆ ಆಗ್ರಹ Read More
Lok Sabha Elections: Final list of Congress candidates in three days – CM Siddaramaiah
ಲೋಕಸಭೆ ಚುನಾವಣೆ : ಮೂರು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ – ಸಿಎಂ ಸಿದ್ದರಾಮಯ್ಯ
ಶಿವಮೊಗ್ಗ, ಮೇ 13: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಜಿದ್ಧಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ, ಕೊನೆಗೂ ಜೆಡಿಎಸ್ ಪಕ್ಷ ಜಯಭೇರಿ ಬಾರಿಸಿದೆ. ಕ್ಷೇತ್ರ ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸಿದ್ದ ಬಿಜೆಪಿ ಯತ್ನಗಳು ವಿಫಲವಾಗಿವೆ. ಇನ್ನೊಂದೆಡೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನ ನೀರಸ ಪ್ರದರ್ಶನ ಮುಂದುವರಿದಿದೆ!
ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಶಾರದಾ ಪೂರ್ಯನಾಯ್ಕ್ ಅವರು, ಕಳೆದ ಬಾರಿಯ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರನ್ನು ಪರಾಭವಗೊಳಿಸುವಲ್ಲಿ ಸಫಲರಾಗಿದ್ದಾರೆ.
ಶಿವಮೊಗ್ಗ ಗ್ರಾಮಾಂತರ : ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್’ಗೆ ಒಲಿದ ವಿಜಯದ ಮಾಲೆ! Read More
ಭದ್ರಾವತಿ, ಮೇ 13: ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು, ಟಿ-20 ಕ್ರಿಕೆಟ್ ಪಂದ್ಯಾವಳಿಯಷ್ಟು ರೋಚಕತೆ ಕೆರಳಿಸಿತ್ತು. ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಕ್ಷೇತ್ರದಲ್ಲಿ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಲ್ಪ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ!
ಆದರೆ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಮತಗಳಿಕೆಯಲ್ಲಿ ಭಾರೀ ಪೈಪೋಟಿ ನೀಡಿದ್ದಾರೆ. ಕೆಲವೇ ಸಾವಿರ ಮತಗಳ ಅಂತರದಲ್ಲಿ ಅವರ ಕೈಯಿಂದ ಜಯದ ಮಾಲೆ ಕೈ ತಪ್ಪಿದೆ. ಉಳಿದಂತೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವ ಮುಂದುವರಿದಿದೆ. ಆದರೆ ಆ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ. ಅಭ್ಯರ್ಥಿ ಮಂಗೋಟೆ ರುದ್ರೇಶ್ ಮೊದಲ ಪ್ರಯತ್ನದಲ್ಲಿ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.
ಭದ್ರಾವತಿ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ್ ಗೆ ಪ್ರಯಾಸದ ಗೆಲುವು! Read More
‘ಹಳೇ ದೋಸ್ತಿ’ಗಳ ನಡುವೆ ಭಾರೀ ಹಣಾಹಣಿಗೆ ವೇದಿಕೆಯಾಗಿದ್ದ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ, ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಜಯದ ನಗೆ ಬೀರಿದ್ದಾರೆ. ಕ್ಷೇತ್ರದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಪರಾಭವಗೊಂಡಿದ್ದಾರೆ!
ವಿಜೇತ ಬೇಳೂರು ಗೋಪಾಲಕೃಷ್ಣ ಅವರು 88,179 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬೇಳೂರು ಗೋಪಾಲಕೃಷ್ಣ ಅವರು 72,263 ಮತ ಗಳಿಸಿದ್ದಾರೆ. ಬೇಳೂರು ಅವರು 15,916 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಸೈಯದ್ ಜಾಕೀರ್ ಕೇವಲ 345 ಮತ ಪಡೆದರೆ, ಎಎಪಿ ಅಭ್ಯರ್ಥಿ ಕೆ.ದಿವಾಕರ್’ಗೆ 1029 ಮತ ಸಂದಾಯವಾಗಿದೆ.
ಸಾಗರ : ಬೆಂಬಲಿಗರ ಬಲದ ಮೇಲೆ ವಿಜಯದ ನಗೆ ಬೀರಿದ ಬೇಳೂರು ಗೋಪಾಲಕೃಷ್ಣ! Read More
ತೀರ್ಥಹಳ್ಳಿ, ಮೇ 13: ಹಾಲಿ – ಮಾಜಿ ಸಚಿವರ ಸ್ಪರ್ಧೆಯಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಗೂ ನೇರ ಪೈಪೋಟಿ ಕಂಡುಬಂದಿದ್ದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದರ ಅವರು ಗೆಲುವಿನ ನಗೆ ಬೀರಿದ್ದಾರೆ. ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪರಾಭವಗೊಂಡಿದ್ದಾರೆ!
ವಿಜೇತ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 83,879 ಮತ ಪಡೆದರೆ, ಕಿಮ್ಮನೆ ರತ್ನಾಕ್ ಅವರು 71,791 ಪಡೆದಿದ್ದಾರೆ. ಆರಗ ಜ್ಞಾನೇಂದ್ರ ಅವರು 12,088 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.
ತೀರ್ಥಹಳ್ಳಿ : ಭಾರೀ ಹೋರಾಟದಲ್ಲಿ ಜಯದ ಗಡಿ ತಲುಪಿದ ಆರಗ ಜ್ಞಾನೇಂದ್ರ! Read More
ಶಿವಮೊಗ್ಗ, ಮೇ 13: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ವಿಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೀಶ್ ಪರಾಭಗೊಂಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಮತ್ತೊಂದೆಡೆ, ಭಾರೀ ಕುತೂಹಲ ಮೂಡಿಸಿದ್ದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೀನಾಯ ಸೋಲನುಭವಿಸಿದ್ದಾರೆ!
ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪರವರು 95,399 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಹೆಚ್.ಸಿ.ಯೋಗೀಶ್ ಅವರು 68,071 ಮತ ಪಡೆದಿದ್ದಾರೆ. ಚನ್ನಬಸಪ್ಪ ಅವರು ಹೆಚ್.ಸಿ.ಯೋಗೀಶ್ ಎದುರು 27,328 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ಕೇವಲ 8623 ಮತ ಗಳಿಸಿದ್ದಾರೆ.
ಶಿವಮೊಗ್ಗ ಕ್ಷೇತ್ರ : ಬಿಜೆಪಿ ಚನ್ನಬಸಪ್ಪಗೆ ವಿಜಯದ ಮಾಲೆ! Read More
ಶಿವಮೊಗ್ಗ, ಮೇ 13: ಬಿಜೆಪಿ ಭದ್ರಕೋಟೆಯೆಂದೇ ಬಿಂಬಿತವಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ, ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗೆ ಭಾರೀ ಪೈಪೋಟಿ ನೀಡುವ ಮೂಲಕ ಸಮಬಲದ ಸಾಧನೆ ಮಾಡಿ ಗಮನ ಸೆಳೆದಿದೆ!
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 3, ಕಾಂಗ್ರೆಸ್ 3 ಹಾಗೂ ಜೆಡಿಎಸ್ 1 ಕಡೆ ಜಯ ಸಾಧಿಸಿದೆ. ಕಳೆದ 2018 ರ ಚುನಾವಣೆಯಲ್ಲಿ 6 ಕಡೆ ಜಯ ಸಾಧಿಸಿ ಪ್ರಾಬಲ್ಯ ಮೆರೆದಿದ್ದ ಬಿಜೆಪಿ ಪಕ್ಷ ಈ ಬಾರಿ ಮೂರು ಕಡೆ ಪರಾಭವಗೊಂಡು ಕೈ ಸುಟ್ಟುಕೊಂಡಿದೆ.
ಶಿವಮೊಗ್ಗ ನಗರ, ಶಿಕಾರಿಪುರ, ತೀರ್ಥಹಳ್ಳಿ ಕ್ಷೇತ್ರಗಳಲ್ಲಿ ಮತ್ತೆ ಬಿಜೆಪಿ ಜಯ ಸಾಧಿಸಿದೆ. ಕಾಂಗ್ರೆಸ್ ಪಕ್ಷವು ಕಳೆದ ಬಾರಿ ಜಯ ಸಾಧಿಸಿದ್ದ ಭದ್ರಾವತಿ ಜೊತೆಗೆ ಬಿಜೆಪಿ ವಶದಲ್ಲಿದ್ದ ಸಾಗರ ಹಾಗೂ ಸೊರಬ ಕ್ಷೇತ್ರಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಸಫಲವಾಗಿದೆ.
ಶಿವಮೊಗ್ಗ ಜಿಲ್ಲೆ : ಕಾಂಗ್ರೆಸ್ 3, ಬಿಜೆಪಿ 3, ಜೆಡಿಎಸ್ 1! Read More