ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ, ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹಾಗೂ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ಅವರು ಶಿಕಾರಿಪುರ ಪಟ್ಟಣದಲ್ಲಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರು ಸಾಂಕೇತಿಕವಾಗಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ. ಎ. 19 ರಂದು ಮೆರವಣಿಗೆಯ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಅರ್ಜಿ ಸಲ್ಲಿಸಲಿದ್ದಾರೆ. ಈ ವಿಷಯವನ್ನು ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ Read More
ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ!

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ! Read More
‘ತಾವು ಈಗಲೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ. ಯಾವ ಪಕ್ಷದಿಂದ ಎಂಬುವುದು ಇಷ್ಟರಲ್ಲಿಯೇ ಸ್ಪಷ್ಟವಾಗಲಿದೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ತಿಳಿಸಿದ್ದಾರೆ.

‘ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ : ಪಕ್ಷ ಯಾವುದೆಂಬುವುದು ಇಷ್ಟರಲ್ಲಿಯೇ ಗೊತ್ತಾಗುತ್ತದೆ’ – ಆಯನೂರು ಮಂಜುನಾಥ್

ಕೆ.ಎಸ್.ಈಶ್ವರಪ್ಪಅವರ ವಿರುದ್ದ ತಮಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ಆದರೆ ಅವರ ಸ್ಪರ್ಧೆಗೆ ತಮ್ಮ ಆಕ್ಷೇಪವಿತ್ತು. ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಿರುವುದರಿಂದ, ತಮ್ಮ ನಿಲುವಿನಲ್ಲಿ ಯಾವುದೇ ವ್ಯತ್ಯಾಸವಿಲ್ಲ. ತಾವು ಈಗಲೂ ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ. ಇಷ್ಟರಲ್ಲಿಯೇ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ತಿಳಿಸಿದ್ದಾರೆ.

‘ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ : ಪಕ್ಷ ಯಾವುದೆಂಬುವುದು ಇಷ್ಟರಲ್ಲಿಯೇ ಗೊತ್ತಾಗುತ್ತದೆ’ – ಆಯನೂರು ಮಂಜುನಾಥ್ Read More
ಕೊನೆಗೂ ವಿಧಾನಸಭೆ ಚುನಾವಣಾ ಅಖಾಡಕ್ಕೆ ಬಿಜೆಪಿ ಪಕ್ಷ ತನ್ನ ಹುರಿಯಾಳುಗಳ ಮೊದಲ ಹಂತದ ಪಟ್ಟಿ ಪ್ರಕಟಿಸಿದೆ. ಮಂಗಳವಾರ ರಾತ್ರಿ ನವದೆಹಲಿಯಲ್ಲಿ ಬಿಡುಗಡೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ, ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ತನ್ನ ಹುರಿಯಾಳುಗಳು ಹೆಸರು ಪ್ರಕಟಿಸಿದೆ. ನಿರೀಕ್ಷಿಸಿದಂತೆ ನಾಲ್ವರು ಹಾಲಿ ಶಾಸಕರಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಿದೆ. ಸಾಕಷ್ಟು ಕುತೂಹಲ ಮೂಡಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಿಸಿಲ್ಲ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕೊನೆಗೂ ವಿಧಾನಸಭೆ ಚುನಾವಣಾ ಅಖಾಡಕ್ಕೆ ಬಿಜೆಪಿ ಪಕ್ಷ ತನ್ನ ಹುರಿಯಾಳುಗಳ ಮೊದಲ ಹಂತದ ಪಟ್ಟಿ ಪ್ರಕಟಿಸಿದೆ. ಮಂಗಳವಾರ ರಾತ್ರಿ ನವದೆಹಲಿಯಲ್ಲಿ ಬಿಡುಗಡೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ, ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ತನ್ನ ಹುರಿಯಾಳುಗಳು ಹೆಸರು ಪ್ರಕಟಿಸಿದೆ. ನಿರೀಕ್ಷಿಸಿದಂತೆ ನಾಲ್ವರು ಹಾಲಿ ಶಾಸಕರಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಿದೆ. ಸಾಕಷ್ಟು ಕುತೂಹಲ ಮೂಡಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಿಸಿಲ್ಲ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ Read More
ಪ್ರಸ್ತುತ ವಿಧಾನಸಭೆ ಚುನಾವಣೆ ವೇಳೆ, ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಹೈಕಮಾಂಡ್ ತಳೆದಿರುವ ಬಿಗಿ ನಿಲುವಿನ ಎಫೆಕ್ಟ್ ನಿಂದ, ಬಿಜೆಪಿ ಹಿರಿಯ ನಾಯಕರು ಚುನಾವಣಾ ‘ತ್ಯಾಗ’ಕ್ಕೆ ವೇದಿಕೆ ಸಿದ್ಧವಾಗಲಾರಂಭಿಸಿದೆ! ಹೌದು. ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು, ಬಿಜೆಪಿ ಹೈಕಮಾಂಡ್ ಖಡಕ್ ನಿಲುವಿನ ಸ್ಪಷ್ಟ ಮುನ್ನುಡಿ ಎಂದೇ ಹೇಳಲಾಗುತ್ತಿದೆ!

ಬಿಜೆಪಿ ಹೈಕಮಾಂಡ್ ಖಡಕ್ ನಿಲುವು ಸಮ್ಮತಿಸಿ, ‘ಚುನಾವಣಾ ನಿವೃತ್ತಿ’ ಘೋಷಿಸಿದರೇ ಕೆ.ಎಸ್.ಈಶ್ವರಪ್ಪ?

ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು, ಕಮಲ ಪಾಳೇಯದಲ್ಲಿ ಸಂಚಲನ ಮೂಡಿಸಿದೆ. ಜೊತೆಗೆ ಹಲವು ರೀತಿಯ ಚರ್ಚೆಗೆಡೆ  ಮಾಡಿಕೊಟ್ಟಿದೆ!

ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಕಲ ತಯಾರಿಯನ್ನು 74 ರ ವಯೋಮಾನದ ಕೆ.ಎಸ್.ಈಶ್ವರಪ್ಪ ಅವರು ನಡೆಸಿಕೊಂಡು ಬಂದಿದ್ದರು.

ಬಿಜೆಪಿ ಹೈಕಮಾಂಡ್ ಖಡಕ್ ನಿಲುವು ಸಮ್ಮತಿಸಿ, ‘ಚುನಾವಣಾ ನಿವೃತ್ತಿ’ ಘೋಷಿಸಿದರೇ ಕೆ.ಎಸ್.ಈಶ್ವರಪ್ಪ? Read More
ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ. ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು!

ವಿಧಾನಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ, ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೋಟೆ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ.

ಗಾಂಧಿ ಬಜಾರ್ ನ ಎಲೆ ರೇವಣ್ಣನಕೇರಿ ರಸ್ತೆಯಲ್ಲಿ ಘಟನೆ ನಡೆದಿದೆ. 5.83 ಕೋಟಿ ರೂ. ಮೌಲ್ಯದ 9 ಕೆ.ಜಿ. 565 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಕೋಟಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು! Read More
ಆದರೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ರಾಜ್ಯ ನಾಯಕರ ನಡುವೆ ಒಮ್ಮತದ ಅಭಿಪ್ರಾಯ ಏರ್ಪಡದ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿಬರಲಾರಂಭಿಸಿದೆ. ಯಾವಾಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂಬುವುದು ಪಕ್ಷದ ಮುಖಂಡರಿಗೂ ಸ್ಪಷ್ಟತೆಯಿಲ್ಲದಂತಾಗಿದೆ! ಪಕ್ಷದ ಉನ್ನತ ಮೂಲಗಳ ಮಾಹಿತಿ ಅನುಸಾರ ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಿಗ್ಗೆ ಬಿಜೆಪಿ ಪ್ರಥಮ ಹಂತದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಸುಮಾರು 150 ಕ್ಕೂ ಹೆಚ್ಚು ಕ್ಷೇತ್ರಗಳ ಹುರಿಯಾಳುಗಳ ಹೆಸರು ಅಂತ್ಯಗೊಂಡಿದೆ ಎಂದು ಹೇಳಲಾಗುತ್ತಿದೆ.

ಮೋದಿ – ಅಮಿತ್ ಶಾ ಬಿಗಿ ನಿಲುವು : ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆಯೇ ಅಚ್ಚರಿಯ ಅಭ್ಯರ್ಥಿಗಳು?

ಬಿಜೆಪಿ ವರಿಷ್ಠರು, ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಗಿ ನಿಲುವು ತಳೆದಿದ್ದಾರೆ. ರಾಜ್ಯ ನಾಯಕರ ಯಾವುದೇ ಲಾಬಿ, ಒತ್ತಡ ತಂತ್ರಕ್ಕೆ ಮಣೆ ಹಾಕುತ್ತಿಲ್ಲ. ಸ್ಪರ್ಧಾಕಾಂಕ್ಷಿಗಳ ಕುರಿತಂತೆ ಬಂದಿರುವ ಸಮೀಕ್ಷಾ ವರದಿಗಳು, ಗೆಲ್ಲುವ ಸಾಧ್ಯತೆ, ವಿವಿಧ ಮೂಲಗಳಿಂದ ಸಂಗ್ರಹಿಸಿದ ವರದಿಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆಗೆ ಒತ್ತು ನೀಡಿದ್ದಾರೆ ಎನ್ನಲಾಗಿದೆ.

ಮೋದಿ – ಅಮಿತ್ ಶಾ ಬಿಗಿ ನಿಲುವು : ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆಯೇ ಅಚ್ಚರಿಯ ಅಭ್ಯರ್ಥಿಗಳು? Read More
ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ!

ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ! Read More
ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..!

ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..! Read More
ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ ವಿವರ ಈ ಮುಂದಿನಂತಿದೆ.

ಗ್ಯಾಸ್ ಸ್ಟವ್, ಅಕ್ಕಿ, ನಗದು, ಬಟ್ಟೆ, ಕಾಫಿ – ಟೀ ಪುಡಿ ಮತ್ತೀತರ ವಸ್ತುಗಳು ವಶ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಈ ಮುಂದಿನಂತಿದೆ.

ಗ್ಯಾಸ್ ಸ್ಟವ್, ಅಕ್ಕಿ, ನಗದು, ಬಟ್ಟೆ, ಕಾಫಿ – ಟೀ ಪುಡಿ ಮತ್ತೀತರ ವಸ್ತುಗಳು ವಶ! Read More