ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ಪ್ರಸ್ತುತ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ, ೮೦ ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರು ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (ಮತ ಪತ್ರದ ಮೂಲಕ ಮತದಾನ) ಗೆ ಚಾಲನೆ ದೊರಕಿದೆ. ಕಳೆದ ಕೆಲ ದಿನಗಳ ಹಿಂದೆಯೇ, ಚುನಾವಣಾ ಆಯೋಗವು ಮನೆಯಿಂದ ಮತದಾನ ಮಾಡಲು ಅರ್ಹತೆ ಹೊಂದಿದವರ ಪಟ್ಟಿ ಸಿದ್ದಪಡಿಸಿತ್ತು. ಸಂಬಂಧಿಸಿದವರಿಂದ ಒಪ್ಪಿಗೆ ಪತ್ರ ಪಡೆದುಕೊಂಡಿತ್ತು. ಅಂತಹವರಿಗೆ ಏ.29 ರಿಂದ ಚುನಾವಣಾಧಿಕಾರಿಗಳು ಅವರ ಮನೆಗಳಿಗೆ ತೆರಳಿ ಮತದಾನಕ್ಕೆ ಅವಕಾಶ ಕಲ್ಪಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ : ಹಿರಿಯರು, ವಿಕಲಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಶನಿವಾರದಿಂದ ವಿಧ್ಯುಕ್ತ ಚಾಲನೆ!

ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ ಪ್ರಸ್ತುತ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ, ೮೦ ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರು ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (ಮತ ಪತ್ರದ ಮೂಲಕ ಮತದಾನ) ಗೆ ಚಾಲನೆ ದೊರಕಿದೆ.

ಕಳೆದ ಕೆಲ ದಿನಗಳ ಹಿಂದೆಯೇ, ಚುನಾವಣಾ ಆಯೋಗವು ಮನೆಯಿಂದ ಮತದಾನ ಮಾಡಲು ಅರ್ಹತೆ ಹೊಂದಿದವರ ಪಟ್ಟಿ ಸಿದ್ದಪಡಿಸಿತ್ತು. ಸಂಬಂಧಿಸಿದವರಿಂದ ಒಪ್ಪಿಗೆ ಪತ್ರ ಪಡೆದುಕೊಂಡಿತ್ತು. ಅಂತಹವರಿಗೆ ಏ.29 ರಿಂದ ಚುನಾವಣಾಧಿಕಾರಿಗಳು ಅವರ ಮನೆಗಳಿಗೆ ತೆರಳಿ ಮತದಾನಕ್ಕೆ ಅವಕಾಶ ಕಲ್ಪಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ : ಹಿರಿಯರು, ವಿಕಲಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಶನಿವಾರದಿಂದ ವಿಧ್ಯುಕ್ತ ಚಾಲನೆ! Read More
‘ಅಣ್ಣ – ತಮ್ಮನ ಹಣಾಹಣಿಗೆ, ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ವೇದಿಕೆ ಸಿದ್ಧವಾಗಿದೆ. ಸತತ ನಾಲ್ಕನೇ ಬಾರಿ, ಚುನಾವಣಾ ಅಖಾಡದಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ‘ಸಹೋದರರ ಸವಾಲ್’ ನಿಂದ ಸೊರಬ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ!

ಅಣ್ಣ – ತಮ್ಮನ ಜಂಗೀ ಕುಸ್ತಿಗೆ ಸಿದ್ದವಾದ ಸೊರಬ ಕ್ಷೇತ್ರ!

‘ಅಣ್ಣ – ತಮ್ಮನ ಹಣಾಹಣಿಗೆ, ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ವೇದಿಕೆ ಸಿದ್ಧವಾಗಿದೆ. ಸತತ ನಾಲ್ಕನೇ ಬಾರಿ, ಚುನಾವಣಾ ಅಖಾಡದಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ‘ಸಹೋದರರ ಸವಾಲ್’ ನಿಂದ ಸೊರಬ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ!

ಹೌದು. ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಾದ ಕುಮಾರ್ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ, ಪ್ರಸ್ತುತ ವಿಧಾನಸಭೆ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇಬ್ಬರ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕ್ಕೇರಿದೆ. ಶತಾಯಗತಾಯ ಜಯ ಸಾಧಿಸಲೇಬೇಕೆಂಬ ಜಿದ್ದಿಗೆ ಬಿದ್ದಿದ್ದಾರೆ.

ಅಣ್ಣ – ತಮ್ಮನ ಜಂಗೀ ಕುಸ್ತಿಗೆ ಸಿದ್ದವಾದ ಸೊರಬ ಕ್ಷೇತ್ರ! Read More
ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ, ವಿಧಾನಸಭಾ ಚುನಾವಣಾ ಕಣ ಕಾವೇರಿದೆ. ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹಾಗೂ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ಅವರು ಶಿಕಾರಿಪುರ ಪಟ್ಟಣದಲ್ಲಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರು ಸಾಂಕೇತಿಕವಾಗಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ. ಎ. 19 ರಂದು ಮೆರವಣಿಗೆಯ ಮೂಲಕ ಮತ್ತೊಮ್ಮೆ ಉಮೇದುವಾರಿಕೆ ಅರ್ಜಿ ಸಲ್ಲಿಸಲಿದ್ದಾರೆ. ಈ ವಿಷಯವನ್ನು ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಶಿಕಾರಿಪುರ ಅಸೆಂಬ್ಲಿ : ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ನಾಮಪತ್ರ ಸಲ್ಲಿಕೆ Read More
ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ!

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ! Read More
‘ತಾವು ಈಗಲೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ. ಯಾವ ಪಕ್ಷದಿಂದ ಎಂಬುವುದು ಇಷ್ಟರಲ್ಲಿಯೇ ಸ್ಪಷ್ಟವಾಗಲಿದೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ತಿಳಿಸಿದ್ದಾರೆ.

‘ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ : ಪಕ್ಷ ಯಾವುದೆಂಬುವುದು ಇಷ್ಟರಲ್ಲಿಯೇ ಗೊತ್ತಾಗುತ್ತದೆ’ – ಆಯನೂರು ಮಂಜುನಾಥ್

ಕೆ.ಎಸ್.ಈಶ್ವರಪ್ಪಅವರ ವಿರುದ್ದ ತಮಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ಆದರೆ ಅವರ ಸ್ಪರ್ಧೆಗೆ ತಮ್ಮ ಆಕ್ಷೇಪವಿತ್ತು. ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಿರುವುದರಿಂದ, ತಮ್ಮ ನಿಲುವಿನಲ್ಲಿ ಯಾವುದೇ ವ್ಯತ್ಯಾಸವಿಲ್ಲ. ತಾವು ಈಗಲೂ ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ. ಇಷ್ಟರಲ್ಲಿಯೇ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ತಿಳಿಸಿದ್ದಾರೆ.

‘ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ : ಪಕ್ಷ ಯಾವುದೆಂಬುವುದು ಇಷ್ಟರಲ್ಲಿಯೇ ಗೊತ್ತಾಗುತ್ತದೆ’ – ಆಯನೂರು ಮಂಜುನಾಥ್ Read More
ಕೊನೆಗೂ ವಿಧಾನಸಭೆ ಚುನಾವಣಾ ಅಖಾಡಕ್ಕೆ ಬಿಜೆಪಿ ಪಕ್ಷ ತನ್ನ ಹುರಿಯಾಳುಗಳ ಮೊದಲ ಹಂತದ ಪಟ್ಟಿ ಪ್ರಕಟಿಸಿದೆ. ಮಂಗಳವಾರ ರಾತ್ರಿ ನವದೆಹಲಿಯಲ್ಲಿ ಬಿಡುಗಡೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ, ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ತನ್ನ ಹುರಿಯಾಳುಗಳು ಹೆಸರು ಪ್ರಕಟಿಸಿದೆ. ನಿರೀಕ್ಷಿಸಿದಂತೆ ನಾಲ್ವರು ಹಾಲಿ ಶಾಸಕರಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಿದೆ. ಸಾಕಷ್ಟು ಕುತೂಹಲ ಮೂಡಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಿಸಿಲ್ಲ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕೊನೆಗೂ ವಿಧಾನಸಭೆ ಚುನಾವಣಾ ಅಖಾಡಕ್ಕೆ ಬಿಜೆಪಿ ಪಕ್ಷ ತನ್ನ ಹುರಿಯಾಳುಗಳ ಮೊದಲ ಹಂತದ ಪಟ್ಟಿ ಪ್ರಕಟಿಸಿದೆ. ಮಂಗಳವಾರ ರಾತ್ರಿ ನವದೆಹಲಿಯಲ್ಲಿ ಬಿಡುಗಡೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ, ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ತನ್ನ ಹುರಿಯಾಳುಗಳು ಹೆಸರು ಪ್ರಕಟಿಸಿದೆ. ನಿರೀಕ್ಷಿಸಿದಂತೆ ನಾಲ್ವರು ಹಾಲಿ ಶಾಸಕರಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಿದೆ. ಸಾಕಷ್ಟು ಕುತೂಹಲ ಮೂಡಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಿಸಿಲ್ಲ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ Read More
ಪ್ರಸ್ತುತ ವಿಧಾನಸಭೆ ಚುನಾವಣೆ ವೇಳೆ, ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ ಹೈಕಮಾಂಡ್ ತಳೆದಿರುವ ಬಿಗಿ ನಿಲುವಿನ ಎಫೆಕ್ಟ್ ನಿಂದ, ಬಿಜೆಪಿ ಹಿರಿಯ ನಾಯಕರು ಚುನಾವಣಾ ‘ತ್ಯಾಗ’ಕ್ಕೆ ವೇದಿಕೆ ಸಿದ್ಧವಾಗಲಾರಂಭಿಸಿದೆ! ಹೌದು. ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು, ಬಿಜೆಪಿ ಹೈಕಮಾಂಡ್ ಖಡಕ್ ನಿಲುವಿನ ಸ್ಪಷ್ಟ ಮುನ್ನುಡಿ ಎಂದೇ ಹೇಳಲಾಗುತ್ತಿದೆ!

ಬಿಜೆಪಿ ಹೈಕಮಾಂಡ್ ಖಡಕ್ ನಿಲುವು ಸಮ್ಮತಿಸಿ, ‘ಚುನಾವಣಾ ನಿವೃತ್ತಿ’ ಘೋಷಿಸಿದರೇ ಕೆ.ಎಸ್.ಈಶ್ವರಪ್ಪ?

ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದು, ಕಮಲ ಪಾಳೇಯದಲ್ಲಿ ಸಂಚಲನ ಮೂಡಿಸಿದೆ. ಜೊತೆಗೆ ಹಲವು ರೀತಿಯ ಚರ್ಚೆಗೆಡೆ  ಮಾಡಿಕೊಟ್ಟಿದೆ!

ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಕಲ ತಯಾರಿಯನ್ನು 74 ರ ವಯೋಮಾನದ ಕೆ.ಎಸ್.ಈಶ್ವರಪ್ಪ ಅವರು ನಡೆಸಿಕೊಂಡು ಬಂದಿದ್ದರು.

ಬಿಜೆಪಿ ಹೈಕಮಾಂಡ್ ಖಡಕ್ ನಿಲುವು ಸಮ್ಮತಿಸಿ, ‘ಚುನಾವಣಾ ನಿವೃತ್ತಿ’ ಘೋಷಿಸಿದರೇ ಕೆ.ಎಸ್.ಈಶ್ವರಪ್ಪ? Read More
ಆದರೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ರಾಜ್ಯ ನಾಯಕರ ನಡುವೆ ಒಮ್ಮತದ ಅಭಿಪ್ರಾಯ ಏರ್ಪಡದ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿಬರಲಾರಂಭಿಸಿದೆ. ಯಾವಾಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂಬುವುದು ಪಕ್ಷದ ಮುಖಂಡರಿಗೂ ಸ್ಪಷ್ಟತೆಯಿಲ್ಲದಂತಾಗಿದೆ! ಪಕ್ಷದ ಉನ್ನತ ಮೂಲಗಳ ಮಾಹಿತಿ ಅನುಸಾರ ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಿಗ್ಗೆ ಬಿಜೆಪಿ ಪ್ರಥಮ ಹಂತದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಸುಮಾರು 150 ಕ್ಕೂ ಹೆಚ್ಚು ಕ್ಷೇತ್ರಗಳ ಹುರಿಯಾಳುಗಳ ಹೆಸರು ಅಂತ್ಯಗೊಂಡಿದೆ ಎಂದು ಹೇಳಲಾಗುತ್ತಿದೆ.

ಮೋದಿ – ಅಮಿತ್ ಶಾ ಬಿಗಿ ನಿಲುವು : ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆಯೇ ಅಚ್ಚರಿಯ ಅಭ್ಯರ್ಥಿಗಳು?

ಬಿಜೆಪಿ ವರಿಷ್ಠರು, ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಗಿ ನಿಲುವು ತಳೆದಿದ್ದಾರೆ. ರಾಜ್ಯ ನಾಯಕರ ಯಾವುದೇ ಲಾಬಿ, ಒತ್ತಡ ತಂತ್ರಕ್ಕೆ ಮಣೆ ಹಾಕುತ್ತಿಲ್ಲ. ಸ್ಪರ್ಧಾಕಾಂಕ್ಷಿಗಳ ಕುರಿತಂತೆ ಬಂದಿರುವ ಸಮೀಕ್ಷಾ ವರದಿಗಳು, ಗೆಲ್ಲುವ ಸಾಧ್ಯತೆ, ವಿವಿಧ ಮೂಲಗಳಿಂದ ಸಂಗ್ರಹಿಸಿದ ವರದಿಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆಗೆ ಒತ್ತು ನೀಡಿದ್ದಾರೆ ಎನ್ನಲಾಗಿದೆ.

ಮೋದಿ – ಅಮಿತ್ ಶಾ ಬಿಗಿ ನಿಲುವು : ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆಯೇ ಅಚ್ಚರಿಯ ಅಭ್ಯರ್ಥಿಗಳು? Read More
ಕರ್ನಾಟಕ ವಿಧಾನಸಭೆ 16 ನೇ ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು, ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡಕ್ಕೆ ಮೂಹೂರ್ತ ಫಿಕ್ಸ್!

ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20  ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 10 ರಂದು ಮತದಾನ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡಕ್ಕೆ ಮೂಹೂರ್ತ ಫಿಕ್ಸ್! Read More