ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ! ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ!

ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಕ್ಷೇತ್ರಗಳ ಕಾಂಗ್ರೆಸ್ ಪಾಳೇಯದಲ್ಲಿ ಭಿನ್ನಮತ ಭುಗಿಲೆದ್ದಿದೆ!

ಮೂರು ಕ್ಷೇತ್ರಗಳಲ್ಲಿ ಭಾನುವಾರ ಕೆಲ ಟಿಕೆಟ್ ಆಕಾಂಕ್ಷಿಗಳು ಮತ್ತವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ ಹೊರ ಹಾಕಲಾರಂಭಿಸಿದ್ದಾರೆ. ಪ್ರತ್ಯೇಕ ಸಭೆ ನಡೆಸಿದ್ದಾರೆ. ಜೊತೆಗೆ ಕೆಲ ನಾಯಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರದಲ್ಲಿ ಟಿಕೆಟ್ ವಂಚಿತ ಕೆಲ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಯ ಎದುರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಟಿಕೆಟ್ ಘೋಷಣೆ ಬೆನ್ನಲ್ಲೇ ‘ಕೈ’ ಪಾಳೇಯದಲ್ಲಿ ಭುಗಿಲೆದ್ದ ಭಿನ್ನಮತ! Read More
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ. ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ, ಮಾಜಿ ಶಾಸಕ ಕರಿಯಣ್ಣ ಅವರ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ!

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ.

ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ! Read More
ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ!

ಶಿವಮೊಗ್ಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣ ಕಣ ರಂಗೇರಲಾರಂಭಿಸಿದೆ. ಈಗಾಗಲೇ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ನಾಲ್ಕು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್ ಪಕ್ಷದ, ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಾಕಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ!

ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರ : ಕುತೂಹಲ ಮೂಡಿಸಿದ ‘ಕೈ’ ಅಭ್ಯರ್ಥಿಗಳ ಆಯ್ಕೆ! Read More