Header Ad Left
Udaya Saakshi
Header Ad Right
Skip to content
April 22, 2026
Udaya Saakshi

Udaya Saakshi

News Website

advertisement

  • Home
  • About
  • News
  • Videos
Main Menu

Tag: #shimoga news | ಶಿವಮೊಗ್ಗ : ಗಾಡಿಕೊಪ್ಪದ ಮುಖ್ಯ ರಸ್ತೆ ಅವ್ಯವಸ್ಥೆ – ಗಮನಹರಿಸುವುದೆ ಪಾಲಿಕೆ ಆಡಳಿತ?

ಶಿವಮೊಗ್ಗ : ಗಾಡಿಕೊಪ್ಪದ ಮುಖ್ಯ ರಸ್ತೆ ಅವ್ಯವಸ್ಥೆ – ಗಮನಹರಿಸುವುದೆ ಪಾಲಿಕೆ ಆಡಳಿತ? ಶಿವಮೊಗ್ಗ, ನವೆಂಬರ್ 23: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಗಾಡಿಕೊಪ್ಪದ ಪುರದಾಳು ಮುಖ್ಯ ರಸ್ತೆಯು ಅವ್ಯವಸ್ಥೆಯ ಆಗರವಾಗಿದೆ. ಗುಂಡಿ-ಗೊಟರು ಬಿದ್ದು, ಜನ-ವಾಹನಗಳ ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಸದರಿ ರಸ್ತೆಯು ಗಾಡಿಕೊಪ್ಪದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಹೊಸದಾಗಿ ಅಭಿವೃದ್ದಿಪಡಿಸಲಾಗಿರುವ ರಿಂಗ್ ರೋಡ್ ಗೆ ಸಂಪರ್ಕ ಕಲ್ಪಿಸುತ್ತದೆ. ಜೊತೆಗೆ ರಸ್ತೆಗೆ ಹೊಂದಿಕೊಂಡಂತೆ ಹಲವು ಹೊಸ ಬಡಾವಣೆಗಳು ಅಭಿವೃದ್ದಿಯಾಗಿವೆ. ಈ ಕಾರಣದಿಂದ ಸದರಿ ರಸ್ತೆಯಲ್ಲಿ ಜನ – ವಾಹನ ಸಂಚಾರ ದಟ್ಟಣೆ ಹೆಚ್ಚಿದೆ. ಆದರೆ ಕಳೆದ ಕೆಲ ವರ್ಷಗಳಿಂದ ರಸ್ತೆಯ ಡಾಂಬರ್ ಕಿತ್ತು ಹೋಗಿದ್ದು, ಗುಂಡಿ-ಗೊಟರು ಬಿದ್ದಿವೆ. ಧೂಳಿನ ಪ್ರಮಾಣ ಹೆಚ್ಚಾಗಿದೆ. ಅವ್ಯವಸ್ಥೆಯ ಆಗರವಾಗಿ ಪರಿಣಮಿಸಿದೆ ಎಂದು ನಿವಾಸಿಗಳು ದೂರುತ್ತಾರೆ. ತಕ್ಷಣವೇ ಶಾಸಕರಾದ ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಡಳಿತವು ಸದರಿ ರಸ್ತೆಯ ಅವ್ಯವಸ್ಥೆ ಸರಿಪಡಿಸಿ, ಸುಗಮ ಜನ – ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಕ್ರಮಕೈಗೊಳ್ಳಬೇಕು ಎಂದು ನಾಗರೀಕರು ಆಗ್ರಹಿಸಿದ್ದಾರೆ. ಮಕ್ಕಳ ಪಾಲಿಗೆ ಅಪಾಯಕಾರಿಯಾದ ಹೆದ್ದಾರಿ : ಕಣ್ಮುಚ್ಚಿ ಕುಳಿತ ಆಡಳಿತ?! *** ಗಾಡಿಕೊಪ್ಪದ ಸರ್ಕಾರಿ ಶಾಲೆಗೆ ಹೊಂದಿಕೊಂಡಂತೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ನೂರಾರು ವಿದ್ಯಾರ್ಥಿಗಳು ಅಭ್ಯಾಸ ನಡೆಸುತ್ತಿದ್ದಾರೆ. ಆದರೆ ಸದರಿ ಹೆದ್ದಾರಿಯು, ವಿದ್ಯಾರ್ಥಿಗಳ ಪಾಲಿಗೆ ಗಂಡಾಂತರಕಾರಿಯಾಗಿ ಪರಿಣಮಿಸಿದೆ. ವಾಹನಗಳು ಮಿತಿಮೀರಿದ ವೇಗದಲ್ಲಿ ಸಂಚರಿಸುತ್ತವೆ. ವಿದ್ಯಾರ್ಥಿಗಳು ಜೀವ ಕೈಯಲ್ಲಿಡಿದು ರಸ್ತೆ ದಾಟುವಂತಹ ದುಃಸ್ಥಿತಿಯಿದೆ. ಈಗಾಗಲೇ ಕೆಲ ವಿದ್ಯಾರ್ಥಿಗಳು ಅಪಘಾತಕ್ಕೂ ತುತ್ತಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ. ಸರ್ಕಾರಿ ಶಾಲೆಗೆ ಹೊಂದಿಕೊಂಡಂತಿರುವ ಸರ್ಕಲ್ ಬಳಿ, ವಾಹನಗಳ ವೇಗ ನಿಯಂತ್ರಣಕ್ಕೆ ಯಾವುದೇ ಕ್ರಮಕೈಗೊಂಡಿಲ್ಲ. ವಿದ್ಯಾರ್ಥಿಗಳ ಸುರಕ್ಷತೆಗೆ ಕಿಂಚಿತ್ತೂ ಕ್ರಮವೂ ಆಗಿಲ್ಲ. ಈ ಹಿಂದೆ ಟ್ರಾಫಿಕ್ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೂಡ ಕೊಂಡೊಯ್ಯಲಾಗಿದೆ. ಸದರಿ ಸರ್ಕಲ್ ಬಳಿ ಸಿಗ್ನಲ್ ಲೈಟ್ ಅಳವಡಿಕೆ ಮಾಡುವುದು ಸೇರಿದಂತೆ ವಾಹನಗಳ ವೇಗ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಕೈಗೊಂಡು, ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೆದ್ದಾರಿ ದಾಟಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಾರೆ.
Shivamogga / ಶಿವಮೊಗ್ಗ

shimoga news | ಶಿವಮೊಗ್ಗ : ಗಾಡಿಕೊಪ್ಪದ ಮುಖ್ಯ ರಸ್ತೆ ಅವ್ಯವಸ್ಥೆ – ಗಮನಹರಿಸುವುದೆ ಪಾಲಿಕೆ ಆಡಳಿತ?

November 24, 2025November 24, 2025 - by B. Renukesha

Shivamogga: Gadikoppa’s main road is in chaos – is the municipal administration paying attention?
ಶಿವಮೊಗ್ಗ : ಗಾಡಿಕೊಪ್ಪದ ಮುಖ್ಯ ರಸ್ತೆ ಅವ್ಯವಸ್ಥೆ – ಗಮನಹರಿಸುವುದೆ ಪಾಲಿಕೆ ಆಡಳಿತ?

shimoga news | ಶಿವಮೊಗ್ಗ : ಗಾಡಿಕೊಪ್ಪದ ಮುಖ್ಯ ರಸ್ತೆ ಅವ್ಯವಸ್ಥೆ – ಗಮನಹರಿಸುವುದೆ ಪಾಲಿಕೆ ಆಡಳಿತ? Read More

Latest YouTube Video

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ 21/4/2026 ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ 21/4/2026 ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ

April 21, 2026

Follow Us:

Join our WhatsApp group

Latest Posts

Shivamogga ISIS terror conspiracy case: Accused sentenced to 6 years rigorous imprisonment! ಶಿವಮೊಗ್ಗ ಐಸಿಸ್ ಭಯೋತ್ಪಾದನಾ ಪಿತೂರಿ ಪ್ರಕರಣ : ಆರೋಪಿಗೆ 6 ವರ್ಷ ಕಠಿಣ ಜೈಲು ಶಿಕ್ಷೆ!

court news | ಶಿವಮೊಗ್ಗ ಐಸಿಸ್ ಭಯೋತ್ಪಾದನಾ ಪಿತೂರಿ ಪ್ರಕರಣ : ಆರೋಪಿಗೆ 6 ವರ್ಷ ಕಠಿಣ ಜೈಲು ಶಿಕ್ಷೆ!

April 22, 2026April 22, 2026

SSLC Third Language Grading Controversy: Students in dilemma due to Education Department's hasty decision! ಎಸ್ಎಸ್ಎಲ್’ಸಿ ತೃತೀಯ ಭಾಷೆ ಗ್ರೇಡಿಂಗ್ ವಿವಾದ : ಶಿಕ್ಷಣ ಇಲಾಖೆ ಆತುರದ ನಿರ್ಧಾರದಿಂದ ಇಕ್ಕಟ್ಟಿಗೆ ಸಿಲುಕಿದ ವಿದ್ಯಾರ್ಥಿಗಳು!

SSLC ತೃತೀಯ ಭಾಷೆ ಗ್ರೇಡಿಂಗ್ ವಿವಾದ : ಶಿಕ್ಷಣ ಇಲಾಖೆ ಆತುರದ ನಿರ್ಧಾರದಿಂದ ಇಕ್ಕಟ್ಟಿಗೆ ಸಿಲುಕಿದ ವಿದ್ಯಾರ್ಥಿಗಳು!

April 22, 2026April 22, 2026

High Court orders state government to give marks instead of grades for SSLC third language! court news | SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮತ್ತೊಮ್ಮೆ ಆದೇಶ!

court news | SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮತ್ತೊಮ್ಮೆ ಆದೇಶ!

April 21, 2026

The honesty of the clothing store owner and staff in Shimoga! ಶಿವಮೊಗ್ಗದ ಬಟ್ಟೆ ಅಂಗಡಿ ಮಾಲೀಕ - ಸಿಬ್ಬಂದಿಗಳ ಪ್ರಾಮಾಣಿಕತೆ!

shimoga news | ಶಿವಮೊಗ್ಗದ ಬಟ್ಟೆ ಅಂಗಡಿ ಮಾಲೀಕ, ಸಿಬ್ಬಂದಿಗಳ ಪ್ರಾಮಾಣಿಕತೆ!

April 21, 2026April 21, 2026

#powercut #ವಿದ್ಯುತ್_ವ್ಯತ್ಯಯ #ವಿದ್ಯುತ್ #ಮೆಸ್ಕಾಂ #mescom

shimoga news | ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ – ಸದ್ದಿಲ್ಲದೆ ಜಾರಿಯಾಗಿದೆಯೇ ಅನಿಯಮಿತ ಲೋಡ್ ಶೆಡ್ಡಿಂಗ್?

April 21, 2026

#powercut #ವಿದ್ಯುತ್_ವ್ಯತ್ಯಯ #ವಿದ್ಯುತ್ #ಮೆಸ್ಕಾಂ #mescom

shimoga news | ಶಿವಮೊಗ್ಗ ನಗರದ ನವುಲೆ, ರಾಗಿಗುಡ್ಡ ಸುತ್ತಮುತ್ತ ಏಪ್ರಿಲ್ 21 ರಂದು ವಿದ್ಯುತ್ ವ್ಯತ್ಯಯ

April 19, 2026

#powercut #ವಿದ್ಯುತ್_ವ್ಯತ್ಯಯ #ವಿದ್ಯುತ್ #ಮೆಸ್ಕಾಂ #mescom,

shimoga power cut news | ಶಿವಮೊಗ್ಗ ತಾಲೂಕಿನ ವಿವಿಧೆಡೆ ಏಪ್ರಿಲ್ 21 ರಂದು ವಿದ್ಯುತ್ ವ್ಯತ್ಯಯ

April 18, 2026April 18, 2026

Shivamogga Water Board Announcement : ಶಿವಮೊಗ್ಗ ಜಲ ಮಂಡಳಿ ಪ್ರಕಟಣೆ

shimoga news | ಶಿವಮೊಗ್ಗ ನಗರ ನೀರು ಸರಬರಾಜು ಸಮಸ್ಯೆಗಳಿವೆಯೇ? : ವಾರ್ಡ್’ವಾರು ಎಂಜಿನಿಯರ್ ಗಳ ವಿವರ ಪ್ರಕಟ

April 18, 2026

Shivamogga KSRP Policeman who drowned: Rs. 1 crore. Compensation distributed to familyನೀರಿನಲ್ಲಿ ಮುಳುಗಿ ಮೃತಪಟ್ಟ ಶಿವಮೊಗ್ಗ ಕೆಎಸ್ಆರ್’ಪಿ ಪೊಲೀಸ್ : ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ವಿತರಣೆ

shimoga | ನೀರಿನಲ್ಲಿ ಮುಳುಗಿ ಮೃತಪಟ್ಟ ಶಿವಮೊಗ್ಗ ಕೆಎಸ್ಆರ್’ಪಿ ಪೊಲೀಸ್ : ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ವಿತರಣೆ

April 18, 2026

Household electricity price increase: 56 paise increase per unit! bengaluru news | ಗೃಹ ಬಳಕೆ ವಿದ್ಯುತ್ ದರ ಏರಿಕೆ : ಯೂನಿಟ್ ಗೆ 56 ಪೈಸೆ ಹೆಚ್ಚಳ!

bengaluru news | ಗೃಹ ಬಳಕೆ ವಿದ್ಯುತ್ ದರ ಏರಿಕೆ : ಯೂನಿಟ್ ಗೆ 56 ಪೈಸೆ ಹೆಚ್ಚಳ!

April 17, 2026

Recent Posts

  • court news | ಶಿವಮೊಗ್ಗ ಐಸಿಸ್ ಭಯೋತ್ಪಾದನಾ ಪಿತೂರಿ ಪ್ರಕರಣ : ಆರೋಪಿಗೆ 6 ವರ್ಷ ಕಠಿಣ ಜೈಲು ಶಿಕ್ಷೆ!
  • SSLC ತೃತೀಯ ಭಾಷೆ ಗ್ರೇಡಿಂಗ್ ವಿವಾದ : ಶಿಕ್ಷಣ ಇಲಾಖೆ ಆತುರದ ನಿರ್ಧಾರದಿಂದ ಇಕ್ಕಟ್ಟಿಗೆ ಸಿಲುಕಿದ ವಿದ್ಯಾರ್ಥಿಗಳು!
  • court news | SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮತ್ತೊಮ್ಮೆ ಆದೇಶ!
  • shimoga news | ಶಿವಮೊಗ್ಗದ ಬಟ್ಟೆ ಅಂಗಡಿ ಮಾಲೀಕ, ಸಿಬ್ಬಂದಿಗಳ ಪ್ರಾಮಾಣಿಕತೆ!
  • shimoga news | ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ – ಸದ್ದಿಲ್ಲದೆ ಜಾರಿಯಾಗಿದೆಯೇ ಅನಿಯಮಿತ ಲೋಡ್ ಶೆಡ್ಡಿಂಗ್?
Copyright © 2026 Udaya Saakshi.
Powered by WordPress and HitMag.