shimoga news | ಶಿವಮೊಗ್ಗ : ಮೆಸ್ಕಾಂ ಸಿಬ್ಬಂದಿ ಮನೆ ಬಳಿ ವಾಮಾಚಾರ!
shimoga news | ಶಿವಮೊಗ್ಗ : ಮೆಸ್ಕಾಂ ಸಿಬ್ಬಂದಿ ಮನೆ ಬಳಿ ವಾಮಾಚಾರ!
Shivamogga: black magic Ritual Near MESCOM Staff’s House!
News Website
shimoga news | ಶಿವಮೊಗ್ಗ : ಮೆಸ್ಕಾಂ ಸಿಬ್ಬಂದಿ ಮನೆ ಬಳಿ ವಾಮಾಚಾರ!
Shivamogga: black magic Ritual Near MESCOM Staff’s House!
Shivamogga: Man Dies After Being Stabbed by Friend
ಶಿವಮೊಗ್ಗ : ಸ್ನೇಹಿತನಿಂದ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು!
‘ಖಾಸಗಿ ಬಸ್ ಗಳಲ್ಲಿ ಪ್ರಯಾಣದ ವೇಳೆ ಹೆಚ್ಚಿನ ಶಬ್ದ ಹೊರಹೊಮ್ಮುವ ಸ್ಪೀಕರ್ ಗಳಲ್ಲಿ ಹಾಡು ಹಾಕುವುದು, ಮಿತಿಮೀರಿದ ವೇಗದಲ್ಲಿ ಬಸ್ ಓಡಿಸಿದರೆ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ. ಕೆ. ಎಚ್ಚರಿಕೆ ನೀಡಿದ್ದಾರೆ.
‘ಖಾಸಗಿ ಬಸ್’ಗಳಲ್ಲಿ ಜೋರಾಗಿ ಹಾಡು ಹಾಕಿದ್ರೆ… ಮಿತಿಮೀರಿದ ವೇಗದಲ್ಲಿ ಬಸ್ ಓಡಿಸಿದ್ರೆ ಬೀಳುತ್ತೆ ಕೇಸ್..!’ Read More
17 ವರ್ಷದ ಬಾಲಕಿಗೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
17 ವರ್ಷದ ಬಾಲಕಿಗೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ! Read More
ಶಿವಮೊಗ್ಗ, ಜೂ. 5: ಮದ್ಯ ಸೇವನೆಗೆ ಆಗಮಿಸಿದ್ದ ಯುವಕರ ತಂಡವೊಂದು, ಪೊಲೀಸರ ಸಮ್ಮುಖದಲ್ಲಿಯೇ ಬಾರ್ ವೊಂದರ ಕ್ಯಾಷಿಯರ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆಘಾತಕಾರಿ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸಚಿನ್ (27) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಆಯನೂರು ತಾಂಡಾದ ನಿವಾಸಿಗಳಾದ ನಿರಂಜನ, ಸತೀಶ್ ಹಾಗೂ ಅಶೋಕ ನಾಯ್ಕ್ ಆರೋಪಿಗಳೆಂದು ಗುರುತಿಸಲಾಗಿದೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬಾರ್ ಕ್ಯಾಷಿಯರ್ ಕೊಲೆ ಮಾಡಿದ ಮದ್ಯ ಸೇವನೆಗೆ ಆಗಮಿಸಿದ್ದ ಯುವಕರು! Read More
ಬೆಂಗಳೂರು, ಜೂ. 2: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ಪ್ರಸ್ತುತ ಹಣಕಾಸು ವರ್ಷದಲ್ಲಿಯೇ 5 ಗ್ಯಾರಂಟಿಗಳ ಜಾರಿಗೆ ರಾಜ್ಯ ಸರ್ಕಾರ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಸಚಿವ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತಂತೆ ಮಾಹಿತಿ ನೀಡಿದ್ದಾರೆ. ಗ್ಯಾರಂಟಿಗಳ ವಿವರ ಈ ಮುಂದಿನಂತಿದೆ.
5 ಗ್ಯಾರಂಟಿಗಳ ಘೋಷಣೆ ಜಾರಿ ಮಾಡಿದ ರಾಜ್ಯ ಸರ್ಕಾರ! Read More
ಶಿವಮೊಗ್ಗ, ಜೂ. 2: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ.
ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ವಶಕ್ಕೆ ಪಡೆದವರನ್ನು ಠಾಣೆಗೆ ಕರೆತಂದು ಅವರ ಪೂರ್ವಾಪರಗಳನ್ನು ಸಂಗ್ರಹಿಸಿದ್ದಾರೆ. 22 ಲಘು ಪ್ರಕರಣ ದಾಖಲಿಸಿಕೊಂಡು ಬಿಡುಗಡೆ ಮಾಡಿದ್ದಾರೆ.
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ Read More
ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ!
ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ! Read More
ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ.
ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗ, ಮೇ 31: ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣದ ರೈಲ್ವೆ ಗೇಟ್ ಬಳಿ ಪ್ರತಿನಿತ್ಯ ಬೆಳಿಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ವಾಹನ ಸವಾರರು ತೀವ್ರ ತೊಂದರೆ ಪಡುವಂತಾಗಿದೆ.
ರೈಲುಗಳ ಸಂಚಾರದ ವೇಳೆ, ಗೇಟ್ ಬಂದ್ ಮಾಡಿದ ಸಮಯದಲ್ಲಿ ಟ್ರಾಫಿಕ್ ಕಿರಿಕಿರಿ ತಲೆದೋರುತ್ತಿದೆ. ಎರಡು ಕಡೆಯಿಂದ ನೂರಾರು ವಾಹನಗಳು ಏಕಕಾಲಕ್ಕೆ ನುಗ್ಗುತ್ತವೆ. ಜೊತೆಗೆ ಕೆಲ ವಾಹನ ಸವಾರರು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುತ್ತಾರೆ. ಈ ಎಲ್ಲ ಕಾರಣಗಳಿಂದ ಟ್ರಾಫಿಕ್ ಜಾಮ್ ಏರ್ಪಡುತ್ತಿದೆ.
ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..! Read More