ವಿಧಾನಸಭೆ ಸಾರ್ವತ್ರಿಕ ಚುನಾವಣೆ - 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ! ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ. ಮತ್ತೊಂದೆಡೆ, ಕೆಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಅಸೆಂಬ್ಲಿ ಕ್ಷೇತ್ರಗಳ ಪ್ರತಿಯೊಂದು ಬೂತ್ ನಲ್ಲಿ ಆಗಿರುವ ಮತದಾನದ ವಿವರ ಕಲೆ ಹಾಕುತ್ತಿದ್ದಾರೆ. ತಮ್ಮ ಪಕ್ಷಗಳ ಬೂತ್ ಏಜೆಂಟ್ ಗಳ ಮೂಲಕ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇದರ ಆಧಾರದ ಮೇಲೆ ಯಾವ್ಯಾವ ಭಾಗದಲ್ಲಿ ಎಷ್ಟೆಷ್ಟು ಮತ ತಮಗೆ ಬಿದ್ದಿರಬಹುದು? ಎದುರಾಳಿಗಳ ಮತ ಗಳಿಕೆ ಎಷ್ಟಿರಬಹುದು? ಎಂಬ ಊಹಾತ್ಮಕ ಲೆಕ್ಕಾಚಾರದಲ್ಲಿ ಮುಳುಗಿರುವುದು ಕಂಡುಬರುತ್ತಿದೆ.

ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು!

ವಿಧಾನಸಭೆ ಸಾರ್ವತ್ರಿಕ ಚುನಾವಣೆ – 2023 ಮಹಾ ಸಮರಕ್ಕೆ ತೆರೆ ಬಿದ್ದಿದೆ. ಮೇ 13 ರ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ರಾಜಕೀಯ ಪಕ್ಷ ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿವೆ!

ಯಾವ ಅಸೆಂಬ್ಲಿ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ? ಯಾವ ಪಕ್ಷಕ್ಕೆ ಎಷ್ಟೆಷ್ಟು ಮತ ಬೀಳಬಹುದು? ಯಾವ ಅಭ್ಯರ್ಥಿ ಗೆಲ್ಲಬಹುದು – ಸೋಲಬಹುದು? ಸೋಲು – ಗೆಲುವಿಗೆ ಕಾರಣವಾಗುವ ಅಂಶಗಳೇನು? ಎಂಬಿತ್ಯಾದಿ ಚರ್ಚೆಗಳು ಸರ್ವೇ ಸಾಮಾನ್ಯವಾಗಿದೆ.

ಮತದಾನದ ನಂತರ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸು! Read More
ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ. ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.

ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ

ಶಿವಮೊಗ್ಗ, ಮೇ 10: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಬುಧವಾರ ನಡೆದ ಮತದಾನ ಕಾರ್ಯಕ್ಕೆ ಅಂತಿಮ ತೆರೆ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ, ಒಟ್ಟಾರೆ ಶೇ. 78.28 ರಷ್ಟು ಮತದಾನವಾಗಿದೆ.

ಶಿವಮೊಗ್ಗಗ್ರಾಮಾಂತರ ಶೇ. 83.71, ಭದ್ರಾವತಿ ಶೇ. 68.47, ಶಿವಮೊಗ್ಗ ಶೇ. 68.74, ತೀರ್ಥಹಳ್ಳಿ ಶೇ. 84.83, ಶಿಕಾರಿಪುರ ಶೇ. 82.57, ಸೊರಬ ಶೇ. 82.97, ಸಾಗರ ಶೇ. 80.29 ರಷ್ಟು ಮತದಾನವಾಗಿದೆ.

ವಿಧಾನಸಭೆ ಚುನಾವಣೆ : ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 78.28 ರಷ್ಟು ಮತದಾನ Read More
ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ

ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಬುಧವಾರ ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು. ಬಿಸಿಲ ಬೇಗೆಯ ನಡುವೆಯೂ ಮತಗಟ್ಟೆಗಳಲ್ಲಿ ಸರದಿ ಸಾಲಿನಲ್ಲಿ ನಿಂತು, ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಿದರು.

ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಕೆಲ ಸಮಯ ಮತದಾನ ಕಾರ್ಯ ಸ್ಥಗಿತಗೊಂಡಿದ್ದ ವರದಿಗಳು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಅಹಿತಕರ ಘಟನೆ ಹಾಗೂ ಗೊಂದಲ-ಗಡಿಬಿಡಿಯಿಲ್ಲದೆ ಮತದಾನ ಪ್ರಕ್ರಿಯೆ ನಡೆಯಿತು.

ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಂತಿಯುತ ಮತದಾನ Read More
ಶಿವಮೊಗ್ಗ, ಮೇ 9: ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಇಬ್ಬರು ಸಿಬ್ಬಂದಿಗಳು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿತ ನೌಕರರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು : ಇಬ್ಬರು ಸಸ್ಪೆಂಡ್!

ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಇಬ್ಬರು ಸಿಬ್ಬಂದಿಗಳು, ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿತ ನೌಕರರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಭದ್ರಾವತಿ ತಾಲೂಕು ಬಿ.ಆರ್.ಪಿ. ತೋಟಗಾರಿಕೆ ಕ್ಷೇತ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಬಿ.ರಮೇಶ್ ಹಾಗೂ ಸೊರಬ ತಾಲೂಕು ಹುರುಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾದ ಮಾಲತೇಶ್ ಎನ್ ಅಮಾನತ್ತುಗೊಂಡವರೆಂದು ಗುರುತಿಸಲಾಗಿದೆ.

ಮದ್ಯ ಸೇವಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರು : ಇಬ್ಬರು ಸಸ್ಪೆಂಡ್! Read More
2023 ನೇ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು. ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು

ಮದುವೆ ಮನೆಯಲ್ಲಿ ಮತದಾನ ಜಾಗೃತಿ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾನ ಜಾಗೃತಿ ನಡೆಯುತ್ತಿದ್ದು, ಮದುವೆ ಮನೆಯೊಂದರಲ್ಲಿ ಸಮನ್ವಯ ಟ್ರಸ್ಟ್ ಸದಸ್ಯರು ಮತದಾನ ಮಾಡುವಂತೆ ಮದುವೆಗೆ ಆಗಮಿಸಿದ್ದವರಿಗೆ ಜಾಗೃತಿ ಮೂಡಿಸಿದರು.

ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ ಅವರ ಪುತ್ರಿ ದಾಮಿನಿ ಟಿ.ಕೆ. ಹಾಗೂ ಶಿಕಾರಿಪುರದ ಡಾ. ಹೇಮಂತ್‌ಕುಮಾರ್ ಅವರ ವಿವಾಹವು ಭಾನುವಾರ ಜರುಗಿತು.

ಮದುವೆ ಮನೆಯಲ್ಲಿ ಮತದಾನ ಜಾಗೃತಿ! Read More
ದಿಢೀರ್ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ, ಮಣಿಪುರ ರಾಜ್ಯ ಅಕ್ಷರಶಃ ನುಲುಗಿ ಹೋಗಿದೆ. ಈ ನಡುವೆ ಮಣಿಪುರ ರಾಜ್ಯದಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ಕರ್ನಾಟಕ ರಾಜ್ಯದ ನಾಲ್ವರು ವಿದ್ಯಾರ್ಥಿಗಳನ್ನು, ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಲಾರಂಭಿಸಿದೆ.

ಹಿಂಸಾಪೀಡಿತ ಮಣಿಪುರದಲ್ಲಿದ್ದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳಿಗೆ ನೆರವಿನಹಸ್ತ!

ಬೆಂಗಳೂರು/ಶಿವಮೊಗ್ಗ, ಮೇ 8: ದಿಢೀರ್ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ, ಮಣಿಪುರ ರಾಜ್ಯ ಅಕ್ಷರಶಃ ನುಲುಗಿ ಹೋಗಿದೆ. ಈ ನಡುವೆ ಮಣಿಪುರ ರಾಜ್ಯದಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ಕರ್ನಾಟಕ ರಾಜ್ಯದ ನಾಲ್ವರು ವಿದ್ಯಾರ್ಥಿಗಳನ್ನು, ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಲಾರಂಭಿಸಿದೆ.   

ಇದರಲ್ಲಿ ಶಿವಮೊಗ್ಗ ನಗರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಿಬ್ಬಂದಿ ತಿಪ್ಪೇಸ್ವಾಮಿ ಅವರ ಪುತ್ರ ಮನೋಜ್ ಹಾಗೂ ತೀರ್ಥಹಳ್ಳಿ ತಾಲೂಕು ಕೋಣಂದೂರು ನಿವಾಸಿ ವಿಶಾಲ ಪ್ರಫುಲ್ಲಚಂದ್ರ ಅವರ ಪುತ್ರಿ ಅಪ್ಸರ ಕೆ.ಪಿ. ಕೂಡ ಸೇರಿದ್ದಾರೆ. ಇವರಿಬ್ಬರು ಮಣಿಪುರದ ಇಂಫಾಲ ಅಗ್ರಿಕಲ್ಚರ್ ಯೂನಿವರ್ಸಿಟಿ ಕಾಲೇಜ್ ನಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಉಳಿದಂತೆ ಚಿಕ್ಕಮಗಳೂರು ಹಾಗೂ ಬಾಗಲಕೋಟೆ ಜಮಖಂಡಿಯ ಇಬ್ಬರು ವಿದ್ಯಾರ್ಥಿಗಳು ಎನ್.ಐ.ಟಿ. ಕಾಲೇಜೊಂದರಲ್ಲಿ ಅಭ್ಯಾಸ  ನಡೆಸುತ್ತಿದ್ದಾರೆ.

ಹಿಂಸಾಪೀಡಿತ ಮಣಿಪುರದಲ್ಲಿದ್ದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳಿಗೆ ನೆರವಿನಹಸ್ತ! Read More
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ರಿಸಲ್ಟ್ : ರಾಜ್ಯದಲ್ಲಿ 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು! ಬೆಂಗಳೂರು, ಮೇ 8: 2022-23 ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪ್ರಸ್ತುತ ವರ್ಷ ಶೇ. 83.89 ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 83.89 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ. 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7,00,619 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಭೂಮಿಕಾ ಪೈ, ವಿಜಯಪುರ ಜಿಲ್ಲೆಯ ಭೀಮನಗೌಡ ಪಾಟೀಲ್, ಬೆಳಗಾವಿ ಜಿಲ್ಲೆ ಅನುಪಮಾ ಶ್ರೀಶೈಲ್ ಹಿರೆಹೊಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಯಶಸ್ ಗೌಡ ಈ ಸಾಧನೆ ಮಾಡಿದವರಾಗಿದ್ದಾರೆ. ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ 2 ನೇ ಸ್ಥಾನ, ಹಾಸನ 3 ನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ 29 ನೇ ಸ್ಥಾನದಲ್ಲಿದೆ.

ಎಸ್​ಎಸ್​ಎಲ್​ಸಿ ರಿಸಲ್ಟ್ : 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!

ಬೆಂಗಳೂರು, ಮೇ 8: 2022-23 ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪ್ರಸ್ತುತ ವರ್ಷ ಶೇ. 83.89 ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಶೇ. 83.89 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ. 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7,00,619 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಭೂಮಿಕಾ ಪೈ, ವಿಜಯಪುರ ಜಿಲ್ಲೆಯ ಭೀಮನಗೌಡ ಪಾಟೀಲ್, ಬೆಳಗಾವಿ ಜಿಲ್ಲೆಯ ಅನುಪಮಾ ಶ್ರೀಶೈಲ್ ಹಿರೆಹೊಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಯಶಸ್ ಗೌಡ ಈ ಸಾಧನೆ ಮಾಡಿದವರಾಗಿದ್ದಾರೆ.

ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ 2 ನೇ ಸ್ಥಾನ, ಹಾಸನ 3 ನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ 29 ನೇ ಸ್ಥಾನದಲ್ಲಿದೆ.

ಎಸ್​ಎಸ್​ಎಲ್​ಸಿ ರಿಸಲ್ಟ್ : 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು! Read More
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.

ಕಾಂಗ್ರೆಸ್ ವಿರುದ್ದ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.

‘ಕಾಂಗ್ರೆಸ್ ಪಕ್ಷ ಹಾರಿ ಬಿಡುತ್ತಿರುವ ಸುಳ್ಳು ಭರವಸೆಯ ಬಲೂನ್ ಗಳನ್ನು ಕರ್ನಾಟಕದ ಜನತೆ ಚೂರುಚೂರು ಮಾಡಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಭಯ ಶುರುವಾಗಿದೆ. ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದವರನ್ನು ಮತ್ತೆ ಕರೆತಂದು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ’ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರದ ಕುರಿತಂತೆ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ವಿರುದ್ದ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ! Read More
ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸುದ್ಧಿಗೋಷ್ಠಿಯ ಮೂಲಕ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಿದೆ. 11 ಗಂಟೆಯ ಬಳಿಕ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿದುಬಂದಿದೆ.

ಮೇ 8 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ

: ರಾಜ್ಯದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸುದ್ಧಿಗೋಷ್ಠಿಯ ಮೂಲಕ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಿದೆ. 11 ಗಂಟೆಯ ಬಳಿಕ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿದುಬಂದಿದೆ.

ಮೇ 8 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ Read More
‘ವಿಧಾನಸಭೆ ಚುನಾವಣೆ ಮತದಾನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು, ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚಿಸಿದ್ದಾರೆ.

ಮತದಾನ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಡಿಸಿ – ಸಿಇಓ ಖಡಕ್ ಸೂಚನೆ!

‘ವಿಧಾನಸಭೆ ಚುನಾವಣೆ ಮತದಾನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು, ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚಿಸಿದ್ದಾರೆ.

ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಮತದಾನದ ಸಿದ್ದತೆ ಕುರಿತಂತೆ, ಶನಿವಾರ ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮತದಾನ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಡಿಸಿ – ಸಿಇಓ ಖಡಕ್ ಸೂಚನೆ! Read More