ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ!

ಶಿವಮೊಗ್ಗ, ಮೇ.24 : ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು.

ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ! Read More
ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ! ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ!

ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ!

ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ.

ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ! Read More
ಹುಬ್ಬಳ್ಳಿ/ಶಿವಮೊಗ್ಗ, ಮೇ 23: ‘ಕೇಂದ್ರ – ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಮೊದಲ ಹಂತದ ಕಾಮಗಾರಿ, ಮುಂದಿನ ವಾರದಿಂದ ಆರಂಭಗೊಳ್ಳಲಿದೆ’ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮೇ 22 ರಂದು ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚಿಸಲಾದ ವಿಷಯದ ಕುರಿತಂತೆ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2025 ಕ್ಕೆ ಪೂರ್ಣ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಶಿವಮೊಗ್ಗ – ಶಿಕಾರಿಪುರ ನಡುವಿನ 46 ಕಿ.ಮೀ. ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಭೂ ಸ್ವಾದೀನ ಪ್ರಕ್ರಿಯೆ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.

ಮುಂದಿನ ವಾರದಿಂದ ಆರಂಭವಾಗಲಿರುವ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ 2025 ಕ್ಕೆ ಪೂರ್ಣ

ಹುಬ್ಬಳ್ಳಿ/ಶಿವಮೊಗ್ಗ, ಮೇ 23: ‘ಕೇಂದ್ರ – ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಮೊದಲ ಹಂತದ ಕಾಮಗಾರಿ, ಮುಂದಿನ ವಾರದಿಂದ ಆರಂಭಗೊಳ್ಳಲಿದೆ’ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮೇ 22 ರಂದು ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ಜೊತೆ ಸಂಸದರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚರ್ಚಿಸಲಾದ ವಿಷಯದ ಕುರಿತಂತೆ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

2025 ಕ್ಕೆ ಪೂರ್ಣ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಶಿವಮೊಗ್ಗ – ಶಿಕಾರಿಪುರ ನಡುವಿನ 46 ಕಿ.ಮೀ. ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಭೂ ಸ್ವಾದೀನ ಪ್ರಕ್ರಿಯೆ, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ.

ಮುಂದಿನ ವಾರದಿಂದ ಆರಂಭವಾಗಲಿರುವ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿ 2025 ಕ್ಕೆ ಪೂರ್ಣ Read More
ಶಿವಮೊಗ್ಗ, ಮೇ 22: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಳೆದ ಕೆಲ ವರ್ಷಗಳಿಂದ ಭಾರೀ ಮಳೆಯಾದ ವೇಳೆ, ಶಿವಮೊಗ್ಗ ನಗರ ಹಾಗೂ ಹೊರವಲಯದ ಹಲವು ಬಡಾವಣೆ - ರಸ್ತೆಗಳು ಜಲಾವೃತವಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿ ಪರಿಣಮಿಸಿದೆ! ಜಲಾವೃತ ಸಮಸ್ಯೆಗೆ ಹತ್ತು ಹಲವು ಕಾರಣಗಳಿವೆ. ಅವ್ಯವಸ್ಥಿತ ಅಭಿವೃದ್ದಿ ಕಾಮಗಾರಿಗಳು, ಅವೈಜ್ಞಾನಿಕ ನಗರದ ಬೆಳವಣಿಗೆ, ನಗರ ವ್ಯಾಪ್ತಿಯಲ್ಲಿದ್ದ ಕೆರೆಕಟ್ಟೆಗಳು ಕಣ್ಮರೆಯಾಗುತ್ತಿರುವುದು, ಚರಂಡಿ-ರಾಜಕಾಲುವೆಗಳು ಸುಸ್ಥಿತಿಯಲ್ಲಿಲ್ಲದಿರುವುದು ಹಾಗೂ ಹಲವೆಡೆ ಭಾರೀ ದೊಡ್ಡ ಪ್ರಮಾಣದಲ್ಲಿ ಒತ್ತುವರಿಯಾಗಿರುವುದು, ಆಡಳಿತದ ನಿರ್ಲಕ್ಷ್ಯ ಸೇರಿದಂತೆ ಹಲವು ಅಂಶಗಳು ಜಲಾವೃತ ಸಮಸ್ಯೆಗೆ ಮುಖ್ಯ ಕಾರಣವಾಗಿದೆ.

ಜಲಾವೃತ ಗಂಡಾಂತರ : ಮಳೆಗಾಲ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಳ್ಳುವರೇ ಜನಪ್ರತಿನಿಧಿಗಳು, ಅಧಿಕಾರಿಗಳು?

ಶಿವಮೊಗ್ಗ, ಮೇ 22: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಕಳೆದ ಕೆಲ ವರ್ಷಗಳಿಂದ ಭಾರೀ ಮಳೆಯಾದ ವೇಳೆ, ಶಿವಮೊಗ್ಗ ನಗರ ಹಾಗೂ ಹೊರವಲಯದ ಹಲವು ಬಡಾವಣೆ – ರಸ್ತೆಗಳು ಜಲಾವೃತವಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿ ಪರಿಣಮಿಸಿದೆ!

ಜಲಾವೃತ ಸಮಸ್ಯೆಗೆ ಹತ್ತು ಹಲವು ಕಾರಣಗಳಿವೆ. ಅವ್ಯವಸ್ಥಿತ ಅಭಿವೃದ್ದಿ ಕಾಮಗಾರಿಗಳು, ಅವೈಜ್ಞಾನಿಕ ನಗರದ ಬೆಳವಣಿಗೆ, ನಗರ ವ್ಯಾಪ್ತಿಯಲ್ಲಿದ್ದ ಕೆರೆಕಟ್ಟೆಗಳು ಕಣ್ಮರೆಯಾಗುತ್ತಿರುವುದು,

ಚರಂಡಿ-ರಾಜಕಾಲುವೆಗಳು ಸುಸ್ಥಿತಿಯಲ್ಲಿಲ್ಲದಿರುವುದು ಹಾಗೂ ಹಲವೆಡೆ ಭಾರೀ ದೊಡ್ಡ ಪ್ರಮಾಣದಲ್ಲಿ ಒತ್ತುವರಿಯಾಗಿರುವುದು, ಆಡಳಿತದ ನಿರ್ಲಕ್ಷ್ಯ ಸೇರಿದಂತೆ ಹಲವು ಅಂಶಗಳು ಜಲಾವೃತ ಸಮಸ್ಯೆಗೆ ಮುಖ್ಯ ಕಾರಣವಾಗಿದೆ.

ಜಲಾವೃತ ಗಂಡಾಂತರ : ಮಳೆಗಾಲ ಆರಂಭಕ್ಕೂ ಮುನ್ನ ಎಚ್ಚೆತ್ತುಕೊಳ್ಳುವರೇ ಜನಪ್ರತಿನಿಧಿಗಳು, ಅಧಿಕಾರಿಗಳು? Read More
ಶಿವಮೊಗ್ಗ, ಮೇ 21: ವಿಧಾನಸಭೆ ಅಧಿವೇಶನದ ನಂತರ, ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಈ ವೇಳೆ ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ, ಓರ್ವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದ್ದು, ಯಾರಿಗೆ ಅವಕಾಶ ದೊರಕಲಿದೆ ಎಂಬ ಕುತೂಹಲ ಮೂಡಿಸಿದೆ! ಕಾಂಗ್ರೆಸ್ ಮೂಲಗಳ ಅನುಸಾರ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ಅವರ ನಡುವೆ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಇವರಿಬ್ಬರಲ್ಲಿ ಓರ್ವರಿಗೆ ಮಂತ್ರಿ ಪದವಿ ನಿಶ್ಚಿತ ಎಂದು ಹೇಳಲಾಗುತ್ತಿದೆ.

ಬಿ.ಕೆ.ಸಂಗಮೇಶ್ವರ್ – ಮಧು ಬಂಗಾರಪ್ಪ ನಡುವೆ ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ!

ಶಿವಮೊಗ್ಗ, ಮೇ 21: ವಿಧಾನಸಭೆ ಅಧಿವೇಶನದ ನಂತರ, ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಈ ವೇಳೆ ಶಿವಮೊಗ್ಗ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಲ್ಲಿ, ಓರ್ವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತ ಎಂದು ಹೇಳಲಾಗುತ್ತಿದ್ದು, ಯಾರಿಗೆ ಅವಕಾಶ ದೊರಕಲಿದೆ ಎಂಬ ಕುತೂಹಲ ಮೂಡಿಸಿದೆ!

ಕಾಂಗ್ರೆಸ್ ಮೂಲಗಳ ಅನುಸಾರ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ಅವರ ನಡುವೆ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಇವರಿಬ್ಬರಲ್ಲಿ ಓರ್ವರಿಗೆ ಮಂತ್ರಿ ಪದವಿ ನಿಶ್ಚಿತ ಎಂದು ಹೇಳಲಾಗುತ್ತಿದೆ.

ಬಿ.ಕೆ.ಸಂಗಮೇಶ್ವರ್ – ಮಧು ಬಂಗಾರಪ್ಪ ನಡುವೆ ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ! Read More
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಮಾರಂಭಕ್ಕೆ ಸಾಕ್ಷಿಯಾದರು. ಸಚಿವರಾದವರು: ಸಚಿವರಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೋಳಿ, ಪ್ರಿಯಾಂಕ ಖರ್ಗೆ ಹಾಗೂ ಜಮೀರ್ ಅಹಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರಾಗಿದ್ದಾರೆ.

ಪ್ರಮಾಣ ವಚನ ಸ್ವೀಕಾರ  : ಕಾಂಗ್ರೆಸ್ ಸರ್ಕಾರದ ಅಧಿಕಾರ!

ಬೆಂಗಳೂರು, ಮೇ 20: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಶಾಸಕರು ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಮಾರಂಭಕ್ಕೆ ಸಾಕ್ಷಿಯಾದರು.

ಪ್ರಮಾಣ ವಚನ ಸ್ವೀಕಾರ  : ಕಾಂಗ್ರೆಸ್ ಸರ್ಕಾರದ ಅಧಿಕಾರ! Read More
ಶಿವಮೊಗ್ಗ, ಮೇ 19: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಿ ಮೂರು ತಿಂಗಳಾಗುತ್ತಾ ಬಂದಿದೆ. ವಿಮಾನಗಳ ಸಂಚಾರಕ್ಕೆ ಅನುಮತಿ ಕೂಡ ದೊರಕಿದೆ. ಆದರೆ ಪ್ರಯಾಣಿಕ ವಿಮಾನ ಸಂಚಾರ ಆರಂಭ ಯಾವಾಗ ಎಂಬುವುದು ನಿಗೂಢವಾಗಿ ಪರಿಣಮಿಸಿದೆ! ಈಗಾಗಲೇ ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಸಂಚಾರಕ್ಕೆ, ಇಂಡಿಗೋ ಏರ್ಲೈನ್ಸ್ ಸಂಸ್ಥೆ ಕೇಂದ್ರ ವಿಮಾನಯಾನ ಪ್ರಾಧಿಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಸಂಸ್ಥೆಯ ಕೋರಿಕೆಯಂತೆ ಪ್ರತಿ ಪ್ರಯಾಣಿಕನಿಗೆ 500 ರೂ. ನಂತೆ, ದಿನಕ್ಕೆ ಸರಿಸುಮಾರು 78 ಸಾವಿರ ರೂ. ಪಾವತಿಸಲು ಸರ್ಕಾರ ಸಮ್ಮತಿ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ– ಬೆಂಗಳೂರು ನಡುವೆ ಯಾವಾಗ ಆರಂಭವಾಗಲಿದೆ ವಿಮಾನ ಸಂಚಾರ?

ಶಿವಮೊಗ್ಗ, ಮೇ 19: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಿ ಮೂರು ತಿಂಗಳಾಗುತ್ತಾ ಬಂದಿದೆ. ವಿಮಾನಗಳ ಸಂಚಾರಕ್ಕೆ ಅನುಮತಿ ಕೂಡ ದೊರಕಿದೆ. ಆದರೆ ಪ್ರಯಾಣಿಕ ವಿಮಾನ ಸಂಚಾರ ಆರಂಭ ಯಾವಾಗ ಎಂಬುವುದು ನಿಗೂಢವಾಗಿ ಪರಿಣಮಿಸಿದೆ!

ಬೆಂಗಳೂರು-ಶಿವಮೊಗ್ಗ ನಡುವೆ ವಿಮಾನ ಸಂಚಾರಕ್ಕೆ ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆ ಕೇಂದ್ರ ವಿಮಾನಯಾನ ಪ್ರಾಧಿಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಸಂಸ್ಥೆಯ ಕೋರಿಕೆಯಂತೆ ಪ್ರತಿ ಪ್ರಯಾಣಿಕನಿಗೆ 500 ರೂ. ನಂತೆ, ದಿನಕ್ಕೆ ಸರಿಸುಮಾರು 78 ಸಾವಿರ ರೂ. ಪಾವತಿಸಲು ಸರ್ಕಾರ ಸಮ್ಮತಿ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ– ಬೆಂಗಳೂರು ನಡುವೆ ಯಾವಾಗ ಆರಂಭವಾಗಲಿದೆ ವಿಮಾನ ಸಂಚಾರ? Read More
ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಶಿವಮೊಗ್ಗ : ಸೋಗಾನೆ, ಬಿದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ, ಮೇ.19: ಶಿವಮೊಗ್ಗದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110  ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 21 ರಂದು ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8  ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಶಿವಮೊಗ್ಗ : ಸೋಗಾನೆ, ಬಿದರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೇ 21 ರಂದು ವಿದ್ಯುತ್ ವ್ಯತ್ಯಯ! Read More
ಶಿವಮೊಗ್ಗ, ಮೇ 19: ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ, ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆ ವೇಳೆ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಇದೀಗ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಾರಂಭಿಸಿದೆ. ಈ ನಡುವೆ ರಾಜ್ಯದ ಚಿತ್ರದುರ್ಗ, ಬಳ್ಳಾರಿ ಸೇರಿದಂತೆ ವಿವಿಧೆಡೆ ವಿದ್ಯುತ್ ಬಿಲ್ ಪಾವತಿಗೆ ಕೆಲ ನಾಗರೀಕರು ನಿರಾಕರಿಸುತ್ತಿದ್ದಾರೆ. ಕೆಲವೆಡೆ ಮೀಟರ್ ರೀಡರ್ ಗಳನ್ನು ಹಳ್ಳಿಗಳ ಒಳಗೆ ಗ್ರಾಮಸ್ಥರು ಬಿಟ್ಟುಕೊಳ್ಳುತ್ತಿಲ್ಲ ಎಂಬ ವರದಿಗಳು ಬರುತ್ತಿವೆ. ಇದೀಗ ಶಿವಮೊಗ್ಗ ಜಿಲ್ಲೆಯ ಕೆಲ ಗ್ರಾಮಗಳ ಗ್ರಾಮಸ್ಥರು ಕೂಡ, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ವಿದ್ಯುತ್ ಬಿಲ್ ಏಕೆ ಕೊಡಬೇಕು?’ ಎಂದು ಮೆಸ್ಕಾಂ ಸಿಬ್ಬಂದಿಗಳನ್ನು ಪ್ರಶ್ನಿಸುತ್ತಿರುವ ಮಾಹಿತಿಗಳು ಕೇಳಿಬರಲಾರಂಭಿಸಿದೆ.

ಕಾಂಗ್ರೆಸ್ ಅಧಿಕಾರಕ್ಕೆ – ವಿದ್ಯುತ್ ಬಿಲ್ ಪಾವತಿ : ನಾಗರೀಕರ ಪ್ರಶ್ನೆಗಳ ಸುರಿಮಳೆಗೆ ಮೆಸ್ಕಾಂ ಸಿಬ್ಬಂದಿಗಳು ಸುಸ್ತೋ ಸುಸ್ತು!

ಶಿವಮೊಗ್ಗ, ಮೇ 19: ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ, ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆ ವೇಳೆ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಇದೀಗ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಾರಂಭಿಸಿದೆ.

ಈ ನಡುವೆ ರಾಜ್ಯದ ಚಿತ್ರದುರ್ಗ, ಬಳ್ಳಾರಿ ಸೇರಿದಂತೆ ವಿವಿಧೆಡೆ ವಿದ್ಯುತ್ ಬಿಲ್ ಪಾವತಿಗೆ ಕೆಲ ನಾಗರೀಕರು ನಿರಾಕರಿಸುತ್ತಿದ್ದಾರೆ. ಕೆಲವೆಡೆ ಮೀಟರ್ ರೀಡರ್ ಗಳನ್ನು ಹಳ್ಳಿಗಳ ಒಳಗೆ ಗ್ರಾಮಸ್ಥರು ಬಿಟ್ಟುಕೊಳ್ಳುತ್ತಿಲ್ಲ ಎಂಬ ವರದಿಗಳು ಬರುತ್ತಿವೆ.

ಕಾಂಗ್ರೆಸ್ ಅಧಿಕಾರಕ್ಕೆ – ವಿದ್ಯುತ್ ಬಿಲ್ ಪಾವತಿ : ನಾಗರೀಕರ ಪ್ರಶ್ನೆಗಳ ಸುರಿಮಳೆಗೆ ಮೆಸ್ಕಾಂ ಸಿಬ್ಬಂದಿಗಳು ಸುಸ್ತೋ ಸುಸ್ತು! Read More
ಊಟದ ವಿಚಾರಕ್ಕೆ ನಡೆಯಿತು ಡಬ್ಬಲ್ ಮರ್ಡರ್..!

ಊಟದ ವಿಚಾರಕ್ಕೆ ನಡೆಯಿತು ಡಬ್ಬಲ್ ಮರ್ಡರ್..!

ತೀರ್ಥಹಳ್ಳಿ, ಮೇ 18: ತೀರ್ಥಹಳ್ಳಿಯಲ್ಲಿ ನಡೆದ ಕೂಲಿ ಕಾರ್ಮಿಕರಿಬ್ಬರ ಡಬ್ಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಊಟದ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಉಂಟಾದ ಗಲಾಟೆಯೇ, ಹತ್ಯೆಗೆ ಕಾರಣವಾಗಿರುವ ಅಂಶ ಬೆಳಕಿಗೆ ಬಂದಿದೆ!

ದಾವಣಗೆರೆ ಜಿಲ್ಲೆಯ ರಾಜಣ್ಣ (58) ಹತ್ಯೆ ಆರೋಪಿಯಾಗಿದ್ದಾನೆ. ಬೀರೇಶ್ (35) ಹಾಗೂ ಮಂಜುನಾಥ್ (46) ಕೊಲೆಗೀಡಾದ ಕೂಲಿ ಕಾರ್ಮಿಕರಾಗಿದ್ದಾರೆ. ಇವರೆಲ್ಲರು ದಾವಣಗೆರೆಯವರಾಗಿದ್ದಾರೆ. ಟೈಲ್ಸ್ ಕೆಲಸ ಮಾಡುವುದಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿದ್ದರು.

ಊಟದ ವಿಚಾರಕ್ಕೆ ನಡೆಯಿತು ಡಬ್ಬಲ್ ಮರ್ಡರ್..! Read More