ಶಿವಮೊಗ್ಗ, ಮೇ.11: ‘ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ : ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಮತ ಎಣಿಕೆ!

ಶಿವಮೊಗ್ಗ, ಮೇ.12: ‘ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಅಂಚೆ ಮತ ಎಣಿಕೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ 6 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರು ಶನಿವಾರ ಬೆಳಿಗ್ಗೆ 7ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ.

ವಿಧಾನಸಭೆ ಚುನಾವಣೆ : ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಮತ ಎಣಿಕೆ! Read More
ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿಸಿಲ ಬೇಗೆಯಿಂದ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗುತ್ತಿದ್ದು, ತಕ್ಷಣವೇ ತುಂಗಾಭದ್ರಾ ನದಿಯಿಂದ ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಮಂಗಳವಾರ ಶಿವಮೊಗ್ಗ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಕೊಮ್ಮನಾಳು, ಸೋಮಿನಕೊಪ್ಪ, ಆಲದಹಳ್ಳಿ, ಹರಮಘಟ್ಟ, ಸುತ್ತುಕೋಟೆ, ಬನ್ನಿಕೆರೆ, ಬೂದಿಗೆರೆ ಕಾಲೋನಿ, ಬಿಕೊನಹಳ್ಳಿ, ಕಿಟ್ಟತಾಳು ಗ್ರಾಮಸ್ಥರು ಮನವಿ ಪತ್ರ ಅರ್ಪಿಸಿದ್ದಾರೆ. ಹಾಹಾಕಾರ: ಹರಮಘಟ್ಟದ ಗೌಡನ ಕೆರೆ, ಹರಮಘಟ್ಟದ ಸಿಗೇಕೆರೆ, ಬೂದಿಗೆರೆ ಕೆರೆ, ಸುತ್ತುಕೋಟೆ, ಅಯ್ಯನಕೆರೆ ಸೇರಿದಂತೆ ಹಲವು ಕೆರೆಗಳು ಬತ್ತಲಾರಂಭಿಸಿದೆ. ಬೋರ್’ವೆಲ್, ಬಾವಿ ಮತ್ತೀತರ ಜಲಮೂಲಗಳ ಅಂತರ್ಜಲದ ಪ್ರಮಾಣ ಕೂಡ ಕುಸಿಯುತ್ತಿದೆ. ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಾರಂಭಿಸಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಬಿಸಿಲ ಬೇಗೆಗೆ ಬತ್ತಿದ ಕೆರೆಗಳು : ತುಂಗಾಭದ್ರಾ ನದಿಯಿಂದ ನೀರು ಹರಿಸಲು ಆಗ್ರಹಿಸಿ ಮನವಿ

ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿಸಿಲ ಬೇಗೆಯಿಂದ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗುತ್ತಿದ್ದು, ತಕ್ಷಣವೇ ತುಂಗಾಭದ್ರಾ ನದಿಯಿಂದ ಕೆರೆಗಳಿಗೆ ನೀರು ಹರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

ಈ ಸಂಬಂಧ ಮಂಗಳವಾರ ಶಿವಮೊಗ್ಗ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರಿಗೆ ಕೊಮ್ಮನಾಳು, ಸೋಮಿನಕೊಪ್ಪ, ಆಲದಹಳ್ಳಿ, ಹರಮಘಟ್ಟ, ಸುತ್ತುಕೋಟೆ, ಬನ್ನಿಕೆರೆ, ಬೂದಿಗೆರೆ ಕಾಲೋನಿ, ಬಿಕೊನಹಳ್ಳಿ, ಕಿಟ್ಟತಾಳು ಗ್ರಾಮಸ್ಥರು ಮನವಿ ಪತ್ರ ಅರ್ಪಿಸಿದ್ದಾರೆ.

ಬಿಸಿಲ ಬೇಗೆಗೆ ಬತ್ತಿದ ಕೆರೆಗಳು : ತುಂಗಾಭದ್ರಾ ನದಿಯಿಂದ ನೀರು ಹರಿಸಲು ಆಗ್ರಹಿಸಿ ಮನವಿ Read More

ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ!

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂತಿದೆ.

ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ! Read More
ಶಿವಮೊಗ್ಗ ನಗರದ ಹೊರವಲಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ಪೊಲೀಸ್ ತಂಡವು, ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ ಘಟನೆ ನಡೆಯಿತು. ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಗಳಾದ ಮಂಜುನಾಥ್, ಅಂಜನ್ ಕುಮಾರ್, ಗಜೇಂದ್ರಪ್ಪ, ಜಯಶ್ರೀ ಮಾನೆ, ಸಂಜೀವ್ ಮಹಾಜನ್ ಹಾಗೂ 5 ಜನ ಸಬ್ ಇನ್ಸ್’ಪೆಕ್ಟರ್ ಸೇರಿದಂತೆ ಒಟ್ಟಾರೆ 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ತಪಾಸಣೆಯಲ್ಲಿ ಭಾಗಿಯಾಗಿದ್ದರು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೈಡ್ : ತಪಾಸಣೆ!

ಶಿವಮೊಗ್ಗ ನಗರದ ಹೊರವಲಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ಪೊಲೀಸ್ ತಂಡವು, ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ ಘಟನೆ ನಡೆಯಿತು.

ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಗಳಾದ ಮಂಜುನಾಥ್, ಅಂಜನ್ ಕುಮಾರ್, ಗಜೇಂದ್ರಪ್ಪ, ಜಯಶ್ರೀ ಮಾನೆ, ಸಂಜೀವ್ ಮಹಾಜನ್ ಹಾಗೂ 5 ಜನ ಸಬ್ ಇನ್ಸ್’ಪೆಕ್ಟರ್ ಸೇರಿದಂತೆ ಒಟ್ಟಾರೆ 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ತಪಾಸಣೆಯಲ್ಲಿ ಭಾಗಿಯಾಗಿದ್ದರು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೈಡ್ : ತಪಾಸಣೆ! Read More
#ವಿಧಾನಸಭೆಚುನಾವಣೆಸಾರ್ವಜನಿಕ ಸಮಸ್ಯೆಗಳ ಕಡೆಗಣನೆ, ನೀತಿಸಂಹಿತೆ ನೆಪ - ಹೆಚ್ಚಾಗುತ್ತಿರುವ ನಾಗರೀಕರ ಪರಿತಾಪ! ಮತ ಬೇಟೆಯಲ್ಲಿ ಮುಳುಗಿದ ಜನಪ್ರತಿನಿಧಿಗಳು : ಆಲಿಸುವವರಿಲ್ಲ ನಾಗರೀಕರ ಗೋಳು!!

ವಿಧಾನಸಭೆ ಚುನಾವಣೆ : ಸಾರ್ವಜನಿಕ ಸಮಸ್ಯೆಗಳ ಕಡೆಗಣನೆ!

ಒಂದೆಡೆ, ದಿನದಿಂದ ದಿನಕ್ಕೆ ಬಿಸಿಲ ತಾಪ ಏರುತ್ತಿದೆ. ಮತ್ತೊಂದೆಡೆ, ವಿಧಾನಸಭೆ ಚುನಾವಣೆ ಅಬ್ಬರ ಕೂಡ ಜೋರಾಗಿದೆ. ಜನಪ್ರತಿನಿಧಿಗಳು ಸಂಪೂರ್ಣವಾಗಿ ‘ಮತ ಬೇಟೆ’ಯಲ್ಲಿ ಮುಳುಗಿದ್ದಾರೆ.  ಆಡಳಿತ ಯಂತ್ರವು ಸುಗಮ-ಶಾಂತಿಯುತ ಚುನಾವಣೆ ಸಿದ್ದತೆಯಲ್ಲಿ ತಲ್ಲೀನವಾಗಿದೆ!

ವಿಧಾನಸಭೆ ಚುನಾವಣೆ : ಸಾರ್ವಜನಿಕ ಸಮಸ್ಯೆಗಳ ಕಡೆಗಣನೆ! Read More
ಶಿವಮೊಗ್ಗ, ಎ. 21: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಎ.21 ರಂದು ನಡೆದಿದೆ.

ಸೀರೆ, ಬಟ್ಟೆ, ಅಡಕೆ, ಹಾರ್ಡ್ ವೇರ್ ವಸ್ತುಗಳು ವಶ!

ಶಿವಮೊಗ್ಗ, ಎ. 21: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಎ.21 ರಂದು ನಡೆದಿದೆ.

ಸೀರೆ, ಬಟ್ಟೆ, ಅಡಕೆ, ಹಾರ್ಡ್ ವೇರ್ ವಸ್ತುಗಳು ವಶ! Read More
: ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಇವರ ಹಲವು ದಶಕಗಳ ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ! ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ!

ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಹಲವು ದಶಕಗಳ  ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ!

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ! Read More
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಕಾವೇರಲಾರಂಭಿಸಿದೆ. ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಕಾವೇರಿದ ಶಿವಮೊಗ್ಗ ನಗರ ಕ್ಷೇತ್ರದ ರಾಜಕಾರಣ! : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಕಾವೇರಲಾರಂಭಿಸಿದೆ. ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಬಿಜೆಪಿಯಿಂದ ಎಸ್.ಎನ್.ಚನ್ನಬಸಪ್ಪ, ಕಾಂಗ್ರೆಸ್ ನಿಂದ ಹೆಚ್.ಸಿ.ಯೋಗೇಶ್ ಹಾಗೂ ಜೆಡಿಎಸ್ ನಿಂದ ಆಯನೂರು ಮಂಜುನಾಥ್ ಅವರು ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಕಾವೇರಿದ ಶಿವಮೊಗ್ಗ ನಗರ ಕ್ಷೇತ್ರದ ರಾಜಕಾರಣ! : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ Read More
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ!

‘ರಾಜಕಾರಣದಲ್ಲಿ ಯಾರೂ ಶಾಶ್ವತ ಶತೃಗಳಲ್ಲ, ಮಿತ್ರರೂ ಅಲ್ಲ..’ ಎಂಬ ಮಾತು, ಸದ್ಯ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸೂಕ್ತವಾಗಿ ಅನ್ವಯವಾಗುತ್ತದೆ..!

ಮಾಜಿ ಸಿಎಂ ಎಸ್.ಬಂಗಾರಪ್ಪ ಗರಡಿಯಲ್ಲಿ ಏಕಕಾಲಕ್ಕೆ ರಾಜಕೀಯ ಪ್ರವೇಶಿಸಿ, ಅವರ ಕೃಪಾಕಟಾಕ್ಷದಿಂದ ಏಕಕಾಲದಲ್ಲಿಯೇ ವಿಧಾನಸಭಾ ಚುನಾವಣಾ ಕಣಕ್ಕಿಳಿದು ಆಯ್ಕೆಯಾಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಗಳಸ್ಯ-ಕಂಠಸ್ಯರಾಗಿದ್ದರು. ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರ್ಪಡೆಯಾಗಿದ್ದಾಗ ಅವರನ್ನು ಬೆಂಬಲಿಸಿ, ಸಮಾಜವಾದಿ ಪಕ್ಷದ ಚಿಹ್ನೆಯಾದ ಸೈಕಲ್ ನಲ್ಲಿ ವಿಧಾನಸಭೆಗೆ ಆಗಮಿಸಿ ದೇಶದ ಗಮನ ಸೆಳೆದಿದ್ದರು!

ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ! Read More
ಕೊನೆಗೂ ಬಹು ನಿರೀಕ್ಷಿತ, ವಿಳಂಬಿತ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಅನಿರೀಕ್ಷಿತ, ಅಚ್ಚರಿ ಎಂಬಂತೆ ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ!

ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚನ್ನಬಸಪ್ಪ (ಚೆನ್ನಿ) ಆಯ್ಕೆ..!

ಕೊನೆಗೂ ಬಹು ನಿರೀಕ್ಷಿತ, ವಿಳಂಬಿತ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಅನಿರೀಕ್ಷಿತ, ಅಚ್ಚರಿ ಎಂಬಂತೆ ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ!

ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚನ್ನಬಸಪ್ಪ (ಚೆನ್ನಿ) ಆಯ್ಕೆ..! Read More