Bhadravati: Three years rigorous imprisonment for five members of one family! ಭದ್ರಾವತಿ : ಒಂದೇ ಕುಟುಂಬದ ಐವರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ!
Shivamogga: Two arrested for selling marijuana and drugs in a Scorpio car on the Ring Road! ಶಿವಮೊಗ್ಗ : ರಿಂಗ್ ರೋಡಲ್ಲಿ ಸ್ಕಾರ್ಪಿಯೋ ಕಾರಲ್ಲಿ ಗಾಂಜಾ, ಡ್ರಗ್ಸ್ ಮಾರಾಟ – ಇಬ್ಬರು ಅರೆಸ್ಟ್!
ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ! ಶಿವಮೊಗ್ಗ, ನವೆಂಬರ್ 26: ಮಹಿಳೆಯೋರ್ವರ ಹೊಟ್ಟೆಯಲ್ಲಿದ್ದ 12.5 ಕೆಜಿ ತೂಕದ ಗಡ್ಡೆಯನ್ನು, ಶಿಕಾರಿಪುರ ತಾಯಿ – ಮಕ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರ ತಂಡ, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವಲ್ಲಿ ಸಫಲವಾದ ಘಟನೆ ನವೆಂಬರ್ 25 ರಂದು ನಡೆದಿದೆ. ಶಿಕಾರಿಪುರ ಪಟ್ಟಣದ ಸೊಪ್ಪಿನಕೇರಿ ಬಡಾವಣೆಯ ನಿವಾಸಿ 55 ವರ್ಷ ವಯೋಮಾನದ ಮಹಿಳೆಯೇ ಶಸ್ತ್ರಚಿಕಿತ್ಸೆಗೊಳಗಾದವರೆಂದು ಗುರುತಿಸಲಾಗಿದೆ. ಆಸ್ಪತ್ರೆಯಲ್ಲಿ ಮಹಿಳೆಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಏನೀದು ಘಟನೆ? : ಸದರಿ ಮಹಿಳೆಯು ಕಳೆದ ಸುಮಾರು 1 ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ಶ್ರೀನಿವಾಸ್ ಅವರು ಪರಿಶೀಲಿಸಿದಾಗ, ಮಹಿಳೆ ಹೊಟ್ಟೆಯಲ್ಲಿ ಗೆಡ್ಡೆಯಿರುವುದು ಕಂಡುಬಂದಿತ್ತು. ಈ ಹಿನ್ನೆಯಲ್ಲಿ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿ ಗೆಡ್ಡೆ ಹೊರೆ ತೆಗೆಯಲಾಗಿದೆ. ಡಾ. ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆಯಲ್ಲಿ ಡಾ. ಪ್ರಕಾಶ್, ಅರವಳಿಕೆ ತಜ್ಞ ಡಾ. ಗುರುದತ್ತ್, ಸಿಸ್ಟರ್ ಭಾರತೀ ಹಾಗೂ ಇತರೆ ಸಿಬ್ಬಂದಿಗಳಿದ್ದರು. A tumor weighing 12.5 kg was in the woman's stomach: Shikaripura government hospital doctors successfully operated! Shikaripura, November 26: A team of doctors from the Shikaripura Government Mother and Child Hospital successfully removed a 12.5 kg tumor from a woman's stomach on November 25.
shimoga APMC vegetable prices | Details of vegetable prices for january 18 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜನವರಿ 18 ರ ತರಕಾರಿ ಬೆಲೆಗಳ ವಿವರ
thirthahalli : Collision between gas lorry and bike, two construction workers died! ತೀರ್ಥಹಳ್ಳಿ : ಗ್ಯಾಸ್ ಲಾರಿ – ಬೈಕ್ ನಡುವೆ ಡಿಕ್ಕಿ, ಇಬ್ಬರು ಕಟ್ಟಡ ಕಾರ್ಮಿಕರ ಸಾವು!
Shivamogga : Centenarian Dakshayanamma of Gurupura passes away ಶಿವಮೊಗ್ಗ : ಗುರುಪುರದ ಶತಾಯುಷಿ ದಾಕ್ಷಾಯಣಮ್ಮ ವಿಧಿವಶ

shimoga | obituary news | ಶಿವಮೊಗ್ಗ : ಗುರುಪುರದ ಶತಾಯುಷಿ ದಾಕ್ಷಾಯಣಮ್ಮ ವಿಧಿವಶ

ಶಿವಮೊಗ್ಗ (shivamogga), ನವೆಂಬರ್ 25: ಶಿವಮೊಗ್ಗ ನಗರದ ಗುರುಪುರದ ನಿವಾಸಿಯಾದ ಶತಾಯುಷಿ ದಾಕ್ಷಾಯಣಮ್ಮ (101) ರವರು, ನವೆಂಬರ್ 25 ರ ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ಕಾರಣಗಳಿಂದ ವಿಧಿವಶರಾಗಿದ್ದಾರೆ. ಮೃತರು ಇಬ್ಬರು ಪುತ್ರರು ಸೇರಿದಂತೆ ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು …

shimoga | obituary news | ಶಿವಮೊಗ್ಗ : ಗುರುಪುರದ ಶತಾಯುಷಿ ದಾಕ್ಷಾಯಣಮ್ಮ ವಿಧಿವಶ Read More
Shivamogga : Cobra hiding in Kia car rescued ಶಿವಮೊಗ್ಗ : ಕಿಯಾ ಕಾರಿನಲ್ಲಿ ಅಡಗಿದ್ದ ಬುಸ್ ಬುಸ್ ನಾಗಪ್ಪ!
Bhadravati: Three years rigorous imprisonment for five members of one family! ಭದ್ರಾವತಿ : ಒಂದೇ ಕುಟುಂಬದ ಐವರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ!
Shivamogga: Power Outage on February 08 and 09 ಶಿವಮೊಗ್ಗ : ಫೆಬ್ರವರಿ 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ : ಗಾಡಿಕೊಪ್ಪದ ಮುಖ್ಯ ರಸ್ತೆ ಅವ್ಯವಸ್ಥೆ – ಗಮನಹರಿಸುವುದೆ ಪಾಲಿಕೆ ಆಡಳಿತ? ಶಿವಮೊಗ್ಗ, ನವೆಂಬರ್ 23: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಗಾಡಿಕೊಪ್ಪದ ಪುರದಾಳು ಮುಖ್ಯ ರಸ್ತೆಯು ಅವ್ಯವಸ್ಥೆಯ ಆಗರವಾಗಿದೆ. ಗುಂಡಿ-ಗೊಟರು ಬಿದ್ದು, ಜನ-ವಾಹನಗಳ ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಸದರಿ ರಸ್ತೆಯು ಗಾಡಿಕೊಪ್ಪದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಹೊಸದಾಗಿ ಅಭಿವೃದ್ದಿಪಡಿಸಲಾಗಿರುವ ರಿಂಗ್ ರೋಡ್ ಗೆ ಸಂಪರ್ಕ ಕಲ್ಪಿಸುತ್ತದೆ. ಜೊತೆಗೆ ರಸ್ತೆಗೆ ಹೊಂದಿಕೊಂಡಂತೆ ಹಲವು ಹೊಸ ಬಡಾವಣೆಗಳು ಅಭಿವೃದ್ದಿಯಾಗಿವೆ. ಈ ಕಾರಣದಿಂದ ಸದರಿ ರಸ್ತೆಯಲ್ಲಿ ಜನ – ವಾಹನ ಸಂಚಾರ ದಟ್ಟಣೆ ಹೆಚ್ಚಿದೆ. ಆದರೆ ಕಳೆದ ಕೆಲ ವರ್ಷಗಳಿಂದ ರಸ್ತೆಯ ಡಾಂಬರ್ ಕಿತ್ತು ಹೋಗಿದ್ದು, ಗುಂಡಿ-ಗೊಟರು ಬಿದ್ದಿವೆ. ಧೂಳಿನ ಪ್ರಮಾಣ ಹೆಚ್ಚಾಗಿದೆ. ಅವ್ಯವಸ್ಥೆಯ ಆಗರವಾಗಿ ಪರಿಣಮಿಸಿದೆ ಎಂದು ನಿವಾಸಿಗಳು ದೂರುತ್ತಾರೆ. ತಕ್ಷಣವೇ ಶಾಸಕರಾದ ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಡಳಿತವು ಸದರಿ ರಸ್ತೆಯ ಅವ್ಯವಸ್ಥೆ ಸರಿಪಡಿಸಿ, ಸುಗಮ ಜನ – ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಕ್ರಮಕೈಗೊಳ್ಳಬೇಕು ಎಂದು ನಾಗರೀಕರು ಆಗ್ರಹಿಸಿದ್ದಾರೆ. ಮಕ್ಕಳ ಪಾಲಿಗೆ ಅಪಾಯಕಾರಿಯಾದ ಹೆದ್ದಾರಿ : ಕಣ್ಮುಚ್ಚಿ ಕುಳಿತ ಆಡಳಿತ?! *** ಗಾಡಿಕೊಪ್ಪದ ಸರ್ಕಾರಿ ಶಾಲೆಗೆ ಹೊಂದಿಕೊಂಡಂತೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ನೂರಾರು ವಿದ್ಯಾರ್ಥಿಗಳು ಅಭ್ಯಾಸ ನಡೆಸುತ್ತಿದ್ದಾರೆ. ಆದರೆ ಸದರಿ ಹೆದ್ದಾರಿಯು, ವಿದ್ಯಾರ್ಥಿಗಳ ಪಾಲಿಗೆ ಗಂಡಾಂತರಕಾರಿಯಾಗಿ ಪರಿಣಮಿಸಿದೆ. ವಾಹನಗಳು ಮಿತಿಮೀರಿದ ವೇಗದಲ್ಲಿ ಸಂಚರಿಸುತ್ತವೆ. ವಿದ್ಯಾರ್ಥಿಗಳು ಜೀವ ಕೈಯಲ್ಲಿಡಿದು ರಸ್ತೆ ದಾಟುವಂತಹ ದುಃಸ್ಥಿತಿಯಿದೆ. ಈಗಾಗಲೇ ಕೆಲ ವಿದ್ಯಾರ್ಥಿಗಳು ಅಪಘಾತಕ್ಕೂ ತುತ್ತಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ. ಸರ್ಕಾರಿ ಶಾಲೆಗೆ ಹೊಂದಿಕೊಂಡಂತಿರುವ ಸರ್ಕಲ್ ಬಳಿ, ವಾಹನಗಳ ವೇಗ ನಿಯಂತ್ರಣಕ್ಕೆ ಯಾವುದೇ ಕ್ರಮಕೈಗೊಂಡಿಲ್ಲ. ವಿದ್ಯಾರ್ಥಿಗಳ ಸುರಕ್ಷತೆಗೆ ಕಿಂಚಿತ್ತೂ ಕ್ರಮವೂ ಆಗಿಲ್ಲ. ಈ ಹಿಂದೆ ಟ್ರಾಫಿಕ್ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೂಡ ಕೊಂಡೊಯ್ಯಲಾಗಿದೆ. ಸದರಿ ಸರ್ಕಲ್ ಬಳಿ ಸಿಗ್ನಲ್ ಲೈಟ್ ಅಳವಡಿಕೆ ಮಾಡುವುದು ಸೇರಿದಂತೆ ವಾಹನಗಳ ವೇಗ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಕೈಗೊಂಡು, ವಿದ್ಯಾರ್ಥಿಗಳು ಸುರಕ್ಷಿತವಾಗಿ ಹೆದ್ದಾರಿ ದಾಟಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಾರೆ.