KSRTC Student bus pass application invinted news / shimoga
Shimoga City: Footpath Encroachment by Forest Department Office Finally Cleared! ಶಿವಮೊಗ್ಗ ನಗರದಲ್ಲಿ ಅರಣ್ಯ ಇಲಾಖೆ ಕಚೇರಿಯಿಂದಾಗಿದ್ದ ಫುಟ್’ಪಾತ್ ಒತ್ತುವರಿ ಕೊನೆಗೂ ತೆರವು!
Shimoga news | Shivamogga: Three police teams formed to find the accused ಶಿವಮೊಗ್ಗ : ರೌಡಿ ಶೀಟರ್ ಕೊ**ಲೆ ಪ್ರಕರಣದ ಆರೋಪಿಗಳ ಪತ್ತೆಗೆ ಮೂರು ಪೊಲೀಸ್ ತಂಡಗಳ ರಚನೆ
Shivamogga : Footpath encroachment from the Forest Department office itself! ಶಿವಮೊಗ್ಗ : ಅರಣ್ಯ ಇಲಾಖೆ ಕಚೇರಿಯಿಂದಲೇ ಪುಟ್’ಪಾತ್ ಒತ್ತುವರಿ!
crime news
ಶಿವಮೊಗ್ಗದಲ್ಲಿ ಪಾಳು ಬೀಳುತ್ತಿರುವ ಕೋಟಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕೈಗಾರಿಕಾ ಪ್ರದೇಶ - ಗಮನಹರಿಸುವರೆ ಸಿಎಂ ಡಿ ಕೆ ಶಿವಕುಮಾರ್? ವರದಿ : ಬಿ. ರೇಣುಕೇಶ್ ಶಿವಮೊಗ್ಗ, ಜೂನ್ 08: ಶಿವಮೊಗ್ಗದ ಹೊರವಲಯ ದೇವಕಾತಿಕೊಪ್ಪದಲ್ಲಿ ನಿರ್ಮಿಸಿರುವ ಕೈಗಾರಿಕಾ ವಸಾಹತು ಪ್ರದೇಶವು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಸಂಸ್ಥೆ (ಕೆಐಎಡಿಬಿ) ಯ ದಿವ್ಯ ನಿರ್ಲಕ್ಷ್ಯದಿಂದ ಪಾಳು ಬೀಳಲಾರಂಭಿಸಿದೆ. ಕೈಗಾರಿಕೋದ್ಯಮಿಗಳು ತೊಂದರೆಗೆ ಸಿಲುಕುವಂತಾಗಿದೆ! ಸದರಿ ಕೈಗಾರಿಕಾ ಪ್ರದೇಶಕ್ಕೆ ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ‘ಪರಿಸರ ವಿಮೋನಚನಾ ಪತ್ರ’ ದೊರಕಿಲ್ಲ. ಇದರಿಂದ ಹೊಸದಾಗಿ ಕೈಗಾರಿಕೆಗಳ ಸ್ಥಾಪನೆಗೆ ಅನುಮತಿ ದೊರಕುತ್ತಿಲ್ಲ. ಸದರಿ ಪ್ರದೇಶದಲ್ಲಿ ನಿವೇಶನ ಹೊಂದಿರುವ ಕೈಗಾರಿಕೋದ್ಯಮಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ. ನೂರಾರು ಕೋಟಿ ರೂ. ವೆಚ್ಚ : ದೇವಕಾತಿಕೊಪ್ಪ ಹಾಗೂ ಸಿದ್ಲಿಪುರ ಗ್ರಾಮ ವ್ಯಾಪ್ತಿಗಳಲ್ಲಿ 2013-14 ನೇ ಸಾಲಿನಲ್ಲಿ 456 ಎಕರೆ ಭೂಮಿಯನ್ನು ಕೆಐಎಡಿಬಿ ಸಂಸ್ಥೆ ಭೂ ಸ್ವಾದೀನ ಪಡಿಸಿಕೊಂಡಿತ್ತು. ಇದರಲ್ಲಿ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೋರೇಷನ್ ಸಂಸ್ಥೆಗೆ, 80 ಎಕರೆ, ಕೆಎಸ್ಎಸ್ಐಡಿ ಸಂಸ್ಥೆಗೆ 66 ಎಕರೆ, ಕಾರ್ಮಿಕ ಇಲಾಖೆಗೆ 10 ಎಕರೆ ಭೂಮಿ ನೀಡಲಾಗಿತ್ತು. ಉಳಿದಂತೆ ಕೆಐಎಡಿಬಿ ಸಂಸ್ಥೆಯು 2018-19 ರಲ್ಲಿ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ದೇವಕಾತಿಕೊಪ್ಪದ 250 ಎಕರೆ ವಿಸ್ತೀರ್ಣದಲ್ಲಿ ಕೈಗಾರಿಕಾ ಲೇಔಟ್ ರಚನೆ ಮಾಡಿತ್ತು. ನಿವೇಶನ ಕೂಡ ಹಂಚಿಕೆ ಮಾಡಿತ್ತು. ಅನುಮತಿ ಪಡೆಯಲಿಲ್ಲ : ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿ ಸಮೀಪದಲ್ಲಿ ಸದರಿ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶವಿರುವುದರಿಂದ, ನಿಯಮಾನುಸಾರ ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ‘ಪರಿಸರ ವಿಮೋನಚನಾ ಪತ್ರ’ವನ್ನು ಕೆಐಎಡಿಬಿ ಸಂಸ್ಥೆ ಪಡೆದುಕೊಳ್ಳಬೇಕಾಗಿತ್ತು. ಆದರೆ ಅನುಮತಿ ಪಡೆದುಕೊಂಡಿರಿಲಿಲ್ಲ. ಮತ್ತೊಂದೆಡೆ, ಸದರಿ ಸ್ಥಳದಲ್ಲಿ ಕೈಗಾರಿಕೆಗಳ ನಿರ್ಮಾಣಕ್ಕೆ ಕೆಐಎಡಿಬಿ ಸಂಸ್ಥೆಯು ಅನುಮತಿ ನೀಡಿತ್ತು. ಅದರಂತೆ ಸರಿಸುಮಾರು 20 ಕೈಗಾರಿಕೆ ಸಂಸ್ಥೆಗಳು ಕಾರ್ಯನಿರ್ವಹಣೆ ಮಾಡುತ್ತಿವೆ. ತದನಂತರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಪರಿಸರ ವಿಮೋಚನಾ ಪತ್ರ ಪಡೆಯದೆ ಕೈಗಾರಿಕೆಗಳ ಸ್ಥಾಪನೆಗೆ ಅನುಮತಿ ನೀಡಬಾರದು ಎಂದು ಸೂಚಿಸಿತ್ತು. ತದನಂತರ ಕೈಗಾರಿಕೆಗಳ ಸ್ಥಾಪನೆಗೆ ಕೆಐಎಡಿಬಿ ಸಂಸ್ಥೆ ಅನುಮತಿ ನೀಡುತ್ತಿಲ್ಲ. ಪರಿಹಾರವಾಗಿಲ್ಲ : ಇದರಿಂದ ಕಳೆದ ಹಲವು ವರ್ಷಗಳಿಂದ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ಹೊಸ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಕೆಐಎಡಿಬಿ ಸಂಸ್ಥೆಯು ಪರಿಸರ ವಿಮೋಚನಾ ಪತ್ರ ಪಡೆದುಕೊಳ್ಳುವ ನಿಟ್ಟಿನಲ್ಲಿ ಗಂಭೀರ ಚಿತ್ತ ಹರಿಸಿಲ್ಲ. ಇದರಿಂದ ಕೋಟಿ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕೈಗಾರಿಕಾ ಪ್ರದೇಶವು ಪಾಳು ಬೀಳಲಾರಂಭಿಸಿದೆ. ಸಿಎಂ ಗಮನಿಸಲಿ : ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶಕ್ಕೆ ಪರಿಸರ ವಿಮೋಚನಾ ಪತ್ರ ಪಡೆಯುವ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಈ ಕುರಿತಂತೆ ಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಜೊತೆ ಸಮಾಲೋಚಿಸಬೇಕಾಗಿದೆ. ಕಾಲಮಿತಿಯೊಳಗೆ ಸಮಸ್ಯೆಗೆ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕಾಗಿದೆ ಎಂದು ಕೆಲ ಕೈಗಾರಿಕೋದ್ಯಮಿಗಳು ಆಗ್ರಹಿಸುತ್ತಾರೆ.
shimoga railway - train news

railway news | ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ : ಕಾರಣವೇನು?

In view of the Visvesvaraya Jala Nigam Limited (VJNL) canal crossing work between Honnavalli Road – Arsikere stations, the following train services will be cancelled, Diverted, Regulated, Partially Cancelled and Rescheduled as detailed

railway news | ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ : ಕಾರಣವೇನು? Read More
Shimoga–Sringeri–Mangalore Railway Line: Is Implementation Easy? 332 ಕಿ.ಮೀ. ಉದ್ದ - 3300 ಕೋಟಿ ರೂ. ವೆಚ್ಚದ ಶಿವಮೊಗ್ಗ-ಶೃಂಗೇರಿ-ಮಂಗಳೂರು ರೈಲು ಮಾರ್ಗ ಅನುಷ್ಠಾನ ಸುಲಭ ಸಾಧ್ಯವೇ?
Shimoga Vinobanagar Police Operation: Two Arrested for Snatching Elderly Woman’s Mangalsutra! ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರ ಕಾರ್ಯಾಚರಣೆ : ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಇಬ್ಬರು ಸೆರೆ!
job news