ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ! ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..!

ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ!

ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..! Read More
ಶಿವಮೊಗ್ಗ, ಮೇ 25: ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ. ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಮೇ 24 ರಂದು ಈ ಕಾರ್ಯಾಚರಣೆ ನಡೆಸಿದ್ದಾರೆ.

ಫ್ಯಾಮಿಲಿ ಸಲೂನ್ – ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್ – 6 ಯುವತಿಯರ ರಕ್ಷಣೆ!

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ.

ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಮೇ 24 ರಂದು ಈ ಕಾರ್ಯಾಚರಣೆ ನಡೆಸಿದ್ದಾರೆ.

ಫ್ಯಾಮಿಲಿ ಸಲೂನ್ – ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್ – 6 ಯುವತಿಯರ ರಕ್ಷಣೆ! Read More
ಶಿವಮೊಗ್ಗ, ಮೇ 18: ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಪೊಲೀಸರು 11 ಜನರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ಶಿವಮೊಗ್ಗ ನಗರದಲ್ಲಿ ನಡೆದಿದೆ. ತುಂಗಾ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಠಾಣಾ ವ್ಯಾಪ್ತಿಯ ಸೂಳೇಬೈಲು, ಮದಾರಿಪಾಳ್ಯ, ಎಂ.ಆರ್.ಎಸ್. ವೃತ್ತ, ಪ್ರಿಯಾಂಕ ಲೇಔಟ್, ವಡ್ಡಿನಕೊಪ್ಪ ಸುತ್ತಮುತ್ತಲಿನ ಸ್ಥಳಗಳಲ್ಲಿ ವಿಶೇಷ ಗಸ್ತು ನಡೆಸಲಾಗಿದೆ. ಒಟ್ಟಾರೆ 11 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದಾರೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲಿಸಿದ್ದಾರೆ. ಜೊತೆಗೆ 8 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರು ಪೊಲೀಸ್ ವಶಕ್ಕೆ!

ಶಿವಮೊಗ್ಗ, ಮೇ 18: ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಪೊಲೀಸರು 11 ಜನರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ಶಿವಮೊಗ್ಗ ನಗರದಲ್ಲಿ ನಡೆದಿದೆ.

ತುಂಗಾ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಠಾಣಾ ವ್ಯಾಪ್ತಿಯ ಸೂಳೇಬೈಲು, ಮದಾರಿಪಾಳ್ಯ, ಎಂ.ಆರ್.ಎಸ್. ವೃತ್ತ, ಪ್ರಿಯಾಂಕ ಲೇಔಟ್, ವಡ್ಡಿನಕೊಪ್ಪ ಸುತ್ತಮುತ್ತಲಿನ ಸ್ಥಳಗಳಲ್ಲಿ ವಿಶೇಷ ಗಸ್ತು ನಡೆಸಲಾಗಿದೆ.

ಒಟ್ಟಾರೆ 11 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದಾರೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲಿಸಿದ್ದಾರೆ. ಜೊತೆಗೆ 8 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರು ಪೊಲೀಸ್ ವಶಕ್ಕೆ! Read More

ಅಪಾರ ಪ್ರಮಾಣದ ಗಾಂಜಾ ನಾಶ…!

ಎನ್.ಡಿ.ಪಿ.ಎಸ್ ಕಾಯ್ದೆಯಡಿ ವಶಕ್ಕೆ ಪಡೆಯಲಾಗಿದ್ದ ಒಟ್ಟಾರೆ 20 ಕೆ.ಜಿ. 867 ಗ್ರಾಂ ತೂಕದ ಗಾಂಜಾವನ್ನು ನಾಶಪಡಿಸಲಾಗಿದೆ. ಇದರ ಅಂದಾಜು ಮೌಲ್ಯ 6,44,600 ರೂಪಾಯಿಗಳಾಗಿದೆ ಎಂದು ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಅಪಾರ ಪ್ರಮಾಣದ ಗಾಂಜಾ ನಾಶ…! Read More

ಸಾರ್ವಜನಿಕ ಸ್ಥಳಗಳಲ್ಲಿ ಮುಂದುವರಿದ ಪೊಲೀಸ್ ಬ್ರೀಫಿಂಗ್!

ಆಯಾ ಠಾಣೆಗಳ ಠಾಣಾಧಿಕಾರಿಗಳ ನೇತೃತ್ವದಲ್ಲಿ ಬ್ರೀಫಿಂಗ್ ಸಭೆಗಳು ನಡೆಯಿತು. ಠಾಣೆಯ ದೈನಂದಿನ ಕರ್ತವ್ಯ ನಿರ್ವಹಣೆ ಮತ್ತೀತರ ವಿಷಯಗಳ ಕುರಿತಂತೆ ಠಾಣಾಧಿಕಾರಿಗಳು ತಮ್ಮ ಸಿಬ್ಬಂದಿಗಳಿಗೆ ಸಲಹೆ ಸೂಚನೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಮುಂದುವರಿದ ಪೊಲೀಸ್ ಬ್ರೀಫಿಂಗ್! Read More