ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಸುಲಿಗೆ ಪ್ರಕರಣ – ಮೂವರು ಅಪ್ರಾಪ್ತರ ಬಂಧನ : 23 ಮೊಬೈಲ್ ಪೋನ್ ವಶ!

ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 3.25 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಯ 3 ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿ ಚಕ್ರ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಮಂಜುನಾಥ್, ಸಬ್ ಇನ್ಸ್ಪೆಪೆಕ್ಟರ್ ರಾಜುರೆ್ಡಿ, ಕುಮಾರ್ ಕುರಗುಂದ,

ಎಎಸ್ಐ ಮನೋಹರ್, ಸಿಬ್ಬಂದಿಗಳಾದ ಹೆಚ್.ಸಿ. ಕಿರಣ್ ಮೊರೆ, ಅರುಣ್ ಕುಮಾರ್, ಮೋಹನ್ ಕುಮಾರ್, ಸಿಪಿಸಿಗಳಾದ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಸುಲಿಗೆ ಪ್ರಕರಣ – ಮೂವರು ಅಪ್ರಾಪ್ತರ ಬಂಧನ : 23 ಮೊಬೈಲ್ ಪೋನ್ ವಶ! Read More
ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ. ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ

ಶಿವಮೊಗ್ಗ, ಜೂ. 2: ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ.

ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ವಶಕ್ಕೆ ಪಡೆದವರನ್ನು ಠಾಣೆಗೆ ಕರೆತಂದು ಅವರ ಪೂರ್ವಾಪರಗಳನ್ನು ಸಂಗ್ರಹಿಸಿದ್ದಾರೆ. 22 ಲಘು ಪ್ರಕರಣ ದಾಖಲಿಸಿಕೊಂಡು ಬಿಡುಗಡೆ ಮಾಡಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ Read More
ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ! ಹೌದು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲ ಇಲಾಖೆ ಹಾಗೂ ನಿಗಮ-ಮಂಡಳಿ, ಪ್ರಾಧಿಕಾರಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಹಣ ಬಿಡುಗಡೆ / ಪಾವತಿ ತಡೆಹಿಡಿಯುವಂತೆ ಮತ್ತು ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದರು.

ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ!

ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ!

ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ! Read More
ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ. ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಗಸ್ತು – ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಹಳ್ಳಿಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಯುವ ಪಡೆ..!

ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ.
ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.

ಗಸ್ತು – ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಹಳ್ಳಿಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಯುವ ಪಡೆ..! Read More
ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..!

ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..!

ಶಿವಮೊಗ್ಗ, ಮೇ 31: ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣದ ರೈಲ್ವೆ ಗೇಟ್ ಬಳಿ ಪ್ರತಿನಿತ್ಯ ಬೆಳಿಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಭಾರೀ ಪ್ರಮಾಣದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ವಾಹನ ಸವಾರರು ತೀವ್ರ ತೊಂದರೆ ಪಡುವಂತಾಗಿದೆ.  

ರೈಲುಗಳ ಸಂಚಾರದ ವೇಳೆ, ಗೇಟ್ ಬಂದ್ ಮಾಡಿದ ಸಮಯದಲ್ಲಿ ಟ್ರಾಫಿಕ್ ಕಿರಿಕಿರಿ ತಲೆದೋರುತ್ತಿದೆ. ಎರಡು ಕಡೆಯಿಂದ ನೂರಾರು ವಾಹನಗಳು ಏಕಕಾಲಕ್ಕೆ ನುಗ್ಗುತ್ತವೆ. ಜೊತೆಗೆ ಕೆಲ ವಾಹನ ಸವಾರರು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸುತ್ತಾರೆ. ಈ ಎಲ್ಲ ಕಾರಣಗಳಿಂದ ಟ್ರಾಫಿಕ್ ಜಾಮ್ ಏರ್ಪಡುತ್ತಿದೆ.

ಸಂಚಾರಕ್ಕೆ ಮುಕ್ತವಾಗದ ಫ್ಲೈ ಓವರ್ : ಟ್ರಾಫಿಕ್ ಕಿರಿಕಿರಿಗೆ ವಾಹನ ಸವಾರರು ತತ್ತರ..! Read More
ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ನಿಂತುಕೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು! ಶಿವಮೊಗ್ಗ, ಮೇ 30: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಜನ ಶತಾಬ್ದಿ ರೈಲು, ಸರಿಸುಮಾರು ಎರಡು ಗಂಟೆಗಳಿಗೂ ಅಧಿಕ ಸಮಯ ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆ ಮಾಡದ್ದ ಘಟನೆ, ಮಂಗಳವಾರ ರಾತ್ರಿ ನಡೆದಿದೆ. ಆದರೆ ರೈಲು ನಿಲುಗಡೆ ಮಾಡಿದ್ದು ಏಕೆ? ಎಂಬ ವಿಷಯದ ಕುರಿತಂತೆ, ಸಮರ್ಪಕ ಮಾಹಿತಿಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು! 'ಕಡೂರು ರೈಲ್ವೆ ನಿಲ್ದಾಣಕ್ಕೆ ಸಂಜೆ 8.30 ರ ಸುಮಾರಿಗೆ ಆಗಮಿಸಿ ನಿಲುಗಡೆಯಾದ ರೈಲು, ರಾತ್ರಿ 10.35 ರ ವೇಳೆಗೆ ಚಾಲನೆಗೊಂಡಿತು. ಗಂಟೆಗಟ್ಟೆಲೆ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲು ಕಾರಣವೇನು ಎಂಬ ವಿಷಯದ ಕುರಿತಂತೆ, ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಕನಿಷ್ಠ ಮಾಹಿತಿ ನೀಡುವ ಕಾರ್ಯವೂ ಆಗಲಿಲ್ಲ. ಪ್ರಕಟಣೆಯೂ ಹೊರಡಿಸಲಿಲ್ಲ' ಎಂದು ರೈಲಿನಲ್ಲಿ ಪ್ರಯಾಣಿಸುತ್ತಿರುವ ಶಿವಮೊಗ್ಗದ ಪ್ರಯಾಣಿಕರೋರ್ವರು ‘ಉದಯ ಸಾಕ್ಷಿ’ ಗೆ ತಿಳಿಸಿದ್ದಾರೆ.

ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ಸ್ಥಗಿತಗೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು!

ಶಿವಮೊಗ್ಗ, ಮೇ 30: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಜನ ಶತಾಬ್ದಿ ರೈಲು, ಸರಿಸುಮಾರು ಎರಡು ಗಂಟೆಗಳಿಗೂ ಅಧಿಕ ಸಮಯ ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆ ಮಾಡದ್ದ ಘಟನೆ, ಮಂಗಳವಾರ ರಾತ್ರಿ ನಡೆದಿದೆ. ಆದರೆ ರೈಲು ನಿಲುಗಡೆ ಮಾಡಿದ್ದು ಏಕೆ? ಎಂಬ ವಿಷಯದ ಕುರಿತಂತೆ, ಸಮರ್ಪಕ ಮಾಹಿತಿಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು!

‘ಕಡೂರು ರೈಲ್ವೆ ನಿಲ್ದಾಣಕ್ಕೆ ಸಂಜೆ 8.30 ರ ಸುಮಾರಿಗೆ ಆಗಮಿಸಿ ನಿಲುಗಡೆಯಾದ ರೈಲು, ರಾತ್ರಿ 10.35 ರ ವೇಳೆಗೆ ಚಾಲನೆಗೊಂಡಿತು. ಗಂಟೆಗಟ್ಟೆಲೆ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲು ಕಾರಣವೇನು ಎಂಬ ವಿಷಯದ ಕುರಿತಂತೆ, ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಕನಿಷ್ಠ ಮಾಹಿತಿ ನೀಡುವ ಕಾರ್ಯವೂ ಆಗಲಿಲ್ಲ. ಪ್ರಕಟಣೆಯೂ ಹೊರಡಿಸಲಿಲ್ಲ’ ಎಂದು ರೈಲಿನಲ್ಲಿ ಪ್ರಯಾಣಿಸುತ್ತಿರುವ ಶಿವಮೊಗ್ಗದ ಪ್ರಯಾಣಿಕರೋರ್ವರು ‘ಉದಯ ಸಾಕ್ಷಿ’ ಗೆ ತಿಳಿಸಿದ್ದಾರೆ.

ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ಸ್ಥಗಿತಗೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು! Read More
ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ. ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಗ್ರಹಿಸಿ ಮನವಿ

ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ.

ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಗ್ರಹಿಸಿ ಮನವಿ Read More
ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ! ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..!

ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ!

ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..! Read More
‘ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ’ ಎಂದು ಯುವ ಕಾಂಗ್ರೆಸ್ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಶಿವಮೊಗ್ಗ ನಗರದ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಕಾರ್ಯಕರ್ತನುದ್ದೇಶಿಸಿ ಅವರು ಮಾತನಾಡಿದರು.

ಕೆಲವೇ ದಿನಗಳಲ್ಲಿ ‘ನಿರುದ್ಯೋಗ ಭತ್ಯೆ’ ಘೋಷಣೆ ಜಾರಿ – ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್

ಶಿವಮೊಗ್ಗ, ಮೇ 30: ‘ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ’ ಎಂದು ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಕಾರ್ಯಕರ್ತನುದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಯಂತೆ, ಕೆಲವೇ ದಿನಗಳಲ್ಲಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಇದರಿಂದ ಯುವ ಸಮೂಹ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಕೆಲವೇ ದಿನಗಳಲ್ಲಿ ‘ನಿರುದ್ಯೋಗ ಭತ್ಯೆ’ ಘೋಷಣೆ ಜಾರಿ – ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ Read More

ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಮೇ 30: 2023-24 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಹಾಗೂ ವಿದ್ಯಾರ್ಹತೆಗಳನ್ವಯ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರವಾಗಿ ಆಯಾ ವಸತಿ ಶಾಲೆಗೆ ಜೂ.05 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ ಸರ್ಕಾರದಿಂದ ರೂ.16650/- ನಿಗದಿಯಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಹಾಗೂ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಚೇರಿ ವೇಳೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ Read More