ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯಾದ್ಯಂತ ಮಾರ್ಚ್ 1 ರಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆ ಈಡೇರುವವರೆಗೂ ಕಚೇರಿಗೆ ಸರ್ಕಾರಿ ನೌಕರರು ಆಗಮಿಸುವುದಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೌಕರರ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಜೊತೆಗೆ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ಈಗಾಗಲೇ 7 ನೇ ವೇತನ ಆಯೋಗ ರಚಿಸಲಾಗಿದೆ. 2023-24 ರಲ್ಲಿಯೇ ಶಿಫಾರಸ್ಸು ಜಾರಿಗೊಳಿಸಲಾಗುವುದು ಎಂದು ವಿಧಾನಸಭೆಯಲ್ಲಿಯೇ ಸ್ಪಷ್ಟಪಡಿಸಲಾಗಿದೆ. ಇದಕ್ಕಾಗಿ ಬಜೆಟ್ ನಲ್ಲಿ ಹಣ ಕೂಡ ಮೀಸಲಿರಿಸಲಾಗಿದೆ.
ಆದರೆ ಮಧ್ಯಂತರ ವರದಿ ಪಡೆದು ಶಿಫಾರಸ್ಸು ಅನುಷ್ಠಾನಗೊಳಿಸುವಂತೆ ನೌಕರರ ಸಂಘದವರು ಬೇಡಿಕೆ ಮುಂದಿಟ್ಟಿದ್ಧಾರೆ. ಅದಕ್ಕೂ ಕೂಡ ಒಪ್ಪಿಕೊಳ್ಳಲಾಗಿದೆ. ಅದರಂತೆ ಆಯೋಗದ ಜೊತೆ ಸಮಾಲೋಚಿಸಿ, ಮಧ್ಯಂತರ ವರದಿ ಪಡೆದು ಶಿಫಾರಸ್ಸು ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ : ಬೇಡಿಕೆ ಈಡೇರಿಕೆಯ ಭರವಸೆ ನೀಡಿದ ಮುಖ್ಯಮಂತ್ರಿ Read More