ಲಾರಿ ಡಿಕ್ಕಿಯಿಂದ ರೈಲ್ವೆ ಹಳಿ ಏರುಪೇರು : ರೈಲುಗಳ ಸಂಚಾರದಲ್ಲಿ ವ್ಯತ್ಯಯ!
ಭದ್ರಾವತಿ (bhadravathi), ಏ. 18: ಭದ್ರಾವತಿ ಪಟ್ಟಣದ ಅಂಡರ್ ಪಾಸ್ (railway under pass) ಬಳಿ ಮೇಲ್ಭಾಗದ ಕಬ್ಬಿಣದ ಬ್ಯಾರಿಕೇಡ್ ಗೆ ಗುರುವಾರ ಮುಂಜಾನೆ ಲಾರಿಯೊಂದು (lorry) ಡಿಕ್ಕಿ ಹೊಡೆದ ಪರಿಣಾಮ, ಹಳಿಯಲ್ಲಿ (railway track) ತಾಂತ್ರಿಕ ದೋಷ ಉಂಟಾಗಿತ್ತು. ಇದರಿಂದ ಶಿವಮೊಗ್ಗ – ಭದ್ರಾವತಿ (shivamogga – bhadravathi) ನಡುವೆ ಎರಡು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾದ ಘಟನೆ ನಡೆದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರೈಲ್ವೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮರೋಪಾದಿಯಲ್ಲಿ ಹಳಿ ದುರಸ್ತಿ ಕಾರ್ಯ ನಡೆಸಿದ್ದಾರೆ. ರೈಲುಗಳ (railways) ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ. ( www.udayasaakshi.com )
ಹಳಿ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ, ಬೆಳಿಗ್ಗೆ 4 ಗಂಟೆ 45 ನಿಮಿಷಕ್ಕೆ ಶಿವಮೊಗ್ಗ ನಿಲ್ದಾಣ ತಲುಪಬೇಕಿದ್ದ ಮೈಸೂರು – ತಾಳಗುಪ್ಪ ಏಕ್ಸ್’ಪ್ರೆಸ್ ರೈಲು (mysore – talguppa express train) ಬೆಳಿಗ್ಗೆ 6.45 ಕ್ಕೆ ತಲುಪಿದೆ. ಹಾಗೆಯೇ ಶಿವಮೊಗ್ಗದಿಂದ ಬೆಳಿಗ್ಗೆ 5.15 ನಿಮಿಷಕ್ಕೆ ಹೊರಡಬೇಕಿದ್ದ ಬೆಂಗಳೂರು ಜನ ಶತಾಬ್ದಿ (shimoga bangalore jan shatabdi) ರೈಲು 6 ಗಂಟೆ 35 ನಿಮಿಷಕ್ಕೆ ಹೊರಟಿದೆ ಎಂದು ತಿಳಿದುಬಂದಿದೆ.
ಕಾರಣವೇನು? : ಭದ್ರಾವತಿ ಪಟ್ಟಣದ ಅಂಡರ್ ಪಾಸ್ ಬಳಿ ಎತ್ತರದ ವಾಹನಗಳು ಸಂಚರಿಸದಂತೆ ತಡೆಯಲು ಕಬ್ಬಿಣದ ಬ್ಯಾರಿಕೇಡ್ ಹಾಕಲಾಗಿದೆ. ಆದರೆ ಸದರಿ ಬ್ಯಾರಿಕೇಡ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದಾನೆ (hit and run). ಇದರಿಂದ ಕಬ್ಬಿಣದ ಬ್ಯಾರಿಕೇಡ್ (barricade) ಮುರಿದುಬಿದ್ದಿದ್ದು, ಸ್ಥಳದ ಬಳಿ ಹಳಿಯಲ್ಲಿ ತಾಂತ್ರಿಕ ದೋಷ (technical problem) ಕಂಡುಬಂದಿತ್ತು. ತಕ್ಷಣವೇ ರೈಲ್ವೆ ಇಲಾಖೆ ರೈಲುಗಳ ಸಂಚಾರ ಸ್ಥಗಿತಗೊಳಿಸಿ, ದುರಸ್ತಿ ಕಾರ್ಯ ನಡೆಸಿದೆ. ( www.udayasaakshi.com )
More Stories
bhadravati news | ಭದ್ರಾವತಿಯಲ್ಲಿ ಅಸ್ಸಾಂ ರಾಜ್ಯದ ಮಹಿಳೆಯ ನಿಗೂಢ ಕಣ್ಮರೆ!
The mysterious disappearance of a woman from Bhadravati!
ಭದ್ರಾವತಿಯ ಆಲೆಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ನಿಗೂಢ ಕಣ್ಮರೆ!
bhadravati news | ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
Bhadravati: A love dispute that turned into a disaster – ended in the murder of two people!
ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
bhadravati news | ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
Woman’s body found in Bhadra River in Bhadravati city!
ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
bhadravati news | ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
Caste abuse, assault case : Bhadravati man sentenced to 4 years rigorous imprisonment!
ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
bhadravati | ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ : ನಾಗರೀಕರ ಆತಂಕ!
‘Chaddi gang’ roaming in Bhadravati: Citizens worried!
ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ!
bhadravati | ಭದ್ರಾವತಿ : ಮನೆಯಲ್ಲಿ ಕಳ್ಳತನ – ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
Theft at home in Bhadravati: Two accused from Bengaluru arrested!
ಭದ್ರಾವತಿಯಲ್ಲಿ ಮನೆಯಲ್ಲಿ ಕಳ್ಳತನ : ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
